ಗ್ರಾಮ ಪಂಚಾಯಿತಿ ಗೆ ಆಡಳಿತಾಧಿಕಾರಿ ನೇಮಕ, ತಾಪಂ ಸದಸ್ಯರನ್ನು ಸೇರಿಸಿಕೊಂಡು ಸಲಹೆ ಪಡೆಯಲಿ, ಅಧ್ಯಕ್ಷ ರಾಜಣ್ಣ
ಚನ್ನಪಟ್ಟಣ:ಜೂ/೧೬/೨೦/ಮಂಗಳವಾರ. ಗ್ರಾಮ ಪಂಚಾಯತಿ ಸದಸ್ಯರ ಅಧಿಕಾರ ಅವಧಿ ಕೊನೆಗೊಂಡಿರುವುದರಿಂದ ಹಾಗೂ ಕೊರೊನಾ ಹೆಚ್ಚು ಬಲಿಷ್ಠವಾಗುತ್ತಿರುವುದರಿಂದ ಈ ಸಂದರ್ಭದಲ್ಲಿ ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯತಿ ಚುನಾವಣೆಯನ್ನು ಮುಂದೂಡಿದೆ. ಚುನಾವಣೆ ಆಗುವ ತನಕ ಪ್ರತಿ ಗ್ರಾಮ ಪಂಚಾಯತಿಗೂ ಆಡಳಿತಾಧಿಕಾರಿ ನೇಮಿಸಲು ನಿರ್ಧರಿಸಿದೆ. ಜನಪ್ರತಿನಿಧಿಗಳಿಲ್ಲದೆ ಕೇವಲ ಅಧಿಕಾರಿಗಳು ಕಾರ್ಯ ನಿರ್ವಹಿಸಿದರೆ ಅದು ಏಕಮುಖ ವಾಗುತ್ತದೆ. ಹಾಗಾಗಿ ಆಯಾಯ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ತಾಲ್ಲೂಕು ಪಂಚಾಯತಿ ಸದಸ್ಯರು, ಜಿಲ್ಲಾ ಪಂಚಾಯತಿ ಸದಸ್ಯರ ಅವಧಿ ಇನ್ನೂ ಒಂದು ವರ್ಷಗಳ ಕಾಲ ಇದೆ. ಆಡಳಿತಾಧಿಕಾರಿಗಳ ಜೊತೆಗೆ ಜನಪ್ರತಿನಿಧಿಗಳ ಸಲಹೆ ಸೂಚನೆಗಳನ್ನು ಪಡೆದು ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ನವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಅವರು ಇಂದು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದರು.
ಆಶ್ರಯ ಯೋಜನೆ, ಬಸವ ವಸತಿ, ಅಂಬೇಡ್ಕರ್ ವಸತಿ ಸೇರಿದಂತೆ ಅನೇಕ ವಸತಿ ಯೋಜನೆಗಳಲ್ಲಿ ಮನೆಗಳನ್ನು ಮಂಜೂರು ಮಾಡಲಾಗಿದ್ದು, ಕೆಲವೇ ಮನೆಗಳಿಗೆ ಒಂದು ಅಥವಾ ಎರಡು ಕಂತಿನ ಹಣ ಬಿಡುಗಡೆ ಮಾಡಿದರೆ ೨೦೦ ಕ್ಕೂ ಹೆಚ್ಚು ಮನೆಗಳಿಗೆ ಒಂದು ಕಂತಿನ ಹಣವು ಬಿಡುಗಡೆ ಆಗಿಲ್ಲ. ಇದರಲ್ಲಿ ೨೦೧೯ ನೇ ಸಾಲಿನ ೭೦೦ ಮನೆಗಳು ಸೇರಿದ್ದು ಹಣ ಬಿಡುಗಡೆ ಮಾಡುವ ಮೂಲಕ ವಸತಿ ರಹಿತರಿಗೆ ಸೂರು ನಿರ್ಮಿಸಿಕೊಳ್ಳಲು ಅನುವು ಮಾಡಿಕೊಡಲಿ.
ರೇಷ್ಮೆ ಹುಳು ಸಾಕಾಣಿಕೆಗೂ ೧೩೮ ರೈತರು ಮನೆ ನಿರ್ಮಾಣ ಮಾಡಿಕೊಂಡಿದ್ದು, ಕೆಲವು ಮನೆಗಳಿಗೆ ಜಿಪಿಎಸ್ ಮಾಡಿದ್ದರೆ, ಇನ್ನೂ ಕೆಲವು ಮನೆಗಳಿಗೆ ಮಾಡಿಯೇ ಇಲ್ಲ. ಅವರಿಗೂ ಸಹ ಹಣ ಬಿಡುಗಡೆ ಆಗಿಲ್ಲ. ಕೃಷಿ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಮುಸುಕಿನ ಜೋಳ, ಹೂವು ಮತ್ತು ತರಕಾರಿಗೆ ಸಹಾಯಧನ ಘೋಷಣೆ ಮಾಡಿರುವುದು ಬಿಟ್ಟು ಉಳಿದವುಗಳಿಗೆ ಹಣ ಬಿಡುಗಡೆಯಾಗಿಲ್ಲ.
೧೯/೨೦ ನೇ ಸಾಲಿನ ನರೇಗಾ ದ ಇಪ್ಪತ್ತು ಕೋಟಿ ಹಣ ಬಿಡುಗಡೆಯಾಗಬೇಕಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಎಂದು ಹೇಳುವ ಸರ್ಕಾರ ಅನುದಾನ ನೀಡುತ್ತಿಲ್ಲ. ಸಮಾಜ ಕಲ್ಯಾಣ ಇಲಾಖೆಗೂ ಸಹಾಯ ಧನ ನೀಡಿಲ್ಲ. ತಾಲ್ಲೂಕು ಪಂಚಾಯತಿ ಕಾರ್ಯಾಲಯದಲ್ಲಿ ೨೩ ಮಂದಿ ಖಾಯಂ ಕೆಲಸಗಾರರಿಬೇಕಾಗಿತ್ತು. ಇರುವುದು ಐದು ಮಂದಿ ಮಾತ್ರ. ಉಳಿದವರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡಿದ್ದು ಅವರಿಗೆ ಸಂಬಳ ನೀಡಲು ಸಹ ಹಣ ಬಿಡುಗಡೆ ಮಾಡಿಲ್ಲ ಎಂದು ಅವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ನಾವು ಯಾರನ್ನೂ ದೂರುತ್ತಿಲ್ಲ. ಆದರೆ ಸ್ಥಳೀಯ ಶಾಸಕರು, ಸಂಸದರು ಮತ್ತು ಉಸ್ತುವಾರಿ ಸಚಿವರು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆ ನಡೆಸಿ, ಕುಮಾರಸ್ವಾಮಿ ಯವರು ಮಾಗಡಿ ತಾಲ್ಲೂಕಿನ ಸಭೆಗಳಿಗೆ ಮಾತ್ರ ಸೀಮಿತವಾಗಿದ್ದು ಚನ್ನಪಟ್ಟಣವನ್ನು ಮರೆತಿದ್ದಾರೆ. ಈಗಲಾದರೂ ಸಭೆ ಕರೆದು ಹಣ ಬಿಡುಗಡೆ ಮಾಡಿ ಅಭಿವೃದ್ಧಿ ಗೆ ಜೊತೆಯಾಗಲಿ ಎಂದರು.
ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಪಂಚಾಯತಿ ಸದಸ್ಯರಾದ ಸಿದ್ದರಾಮಯ್ಯ, ಸುರೇಶ್, ಶಂಭೂಗೌಡ, ಶ್ರೀನಿವಾಸ ಮತ್ತು ಪ್ರಕಾಶ್ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು