Tel: 7676775624 | Mail: info@yellowandred.in

Language: EN KAN

    Follow us :


ಚನ್ನಪಟ್ಟಣದಲ್ಲಿ ಪಹಣಿಗಾಗಿ ರೈತರ ಪರದಾಟ

Posted date: 08 Mar, 2018

Powered by:     Yellow and Red

ಚನ್ನಪಟ್ಟಣದಲ್ಲಿ ಪಹಣಿಗಾಗಿ ರೈತರ ಪರದಾಟ

ಚನ್ನಪಟ್ಟಣ : ತಾಲ್ಲೂಕು ಕಛೇರಿಯ ಆಡಳಿತ ವೈಫಲ್ಯದಿಂದಾಗಿ ತಾಲ್ಲೂಕು ಕಛೇರಿಯಲ್ಲಿ ರೈತರು ಪಹಣಿಗಾಗಿ ಸಾಲುಗಟ್ಟಿ ನಿಂತರೂ ಪಹಣಿ  ಸಿಗದೆ  ಪರದಾಡುವಂತಾಗಿದೆ. 
ಮಿನಿ ವಿಧಾನ ಸೌಧದ ಕಟ್ಟಡದಲ್ಲಿರುವ ತಾಲ್ಲೂಕು ಕಛೇರಿಯಲ್ಲಿ ರೈತರಿಗೆ ಪಹಣಿ ವಿತರಿಸಲೆಂದೇ ಎರಡು ಕೌಂಟರ್‍ಗಳನ್ನು ತೆರೆದಿರುವುದು ಸರಿಯಷ್ಟೆ. ಒಂದು ಕೌಂಟರ್‍ನಲ್ಲಿ ಕೊಠಡಿ ತೆರೆದಿದ್ದರೂ ಬೆಳಿಗ್ಗೆ 11-30 ಸಮಯವಾದರೂ ಸಿಬ್ಬಂದಿ ಇಲ್ಲದೆ ಖಾಲಿ ಕುರ್ಚಿ ಇರುವುದು, ಬರುವ ರೈತರನ್ನು ಖಾಲಿ ಕುರ್ಚಿ ಸ್ವಾಗತಿಸುತ್ತಿರುತ್ತದೆ. ಮತ್ತೊಂದು ಕೌಂಟರ್ ತೆರೆದಿದ್ದರೂ ಸಿಬ್ಬಂದಿ ಇದ್ದು ಪಹಣಿಗಾಗಿ ರೈತರು ಸಾಲುಗಟ್ಟಿ ನಿಂತು ,  ಪಹಣಿ ಕೇಳಿದರೆ ಸರ್ವರ್ ಡೌನ್, ನೆಟ್‍ವರ್ಕ ಪ್ರಾಬ್ಲಂ ಎನ್ನುವ ಉತ್ತರ ಸಿದ್ದವಾಗಿರುತ್ತದೆ. ದಿನ ನಿತ್ಯ ಕೆಲಸ ಕಾರ್ಯಗಳನ್ನು ಬಿಟ್ಟು ತಾಲ್ಲೂಕು ಕಛೇರಿಗೆ ಅಲೆದರೂ ಪಹಣಿ ಸಿಗದೆ  ತೊಂದರೆ ಅನುಭವಿಸುತ್ತಾ ಸರ್ಕಾರಿ ಸವಲತ್ತುಗಳನ್ನು ಪಡೆಯಲು ಪರದಾಡುವಂತಾಗಿದೆ  ಎಂದು ರೈತರು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ. 
 ಸರ್ಕಾರದಿಂದ ದೊರೆಯುವ ಸಾಲ ಸೌಲಭ್ಯಗಳನ್ನು ಪಡೆಯಲು ಮತ್ತು ತಮ್ಮ ವ್ಯವಹಾರಕ್ಕಾಗಿ ಪಹಣಿ ಪಡೆಯಲು ತಾಲ್ಲೂಕು ಕಛೇರಿ, ಗ್ರಾಮ ಪಂಚಾಯಿತಿ ಕಾರ್ಯಾಲಯಗಳಿಗೆ ರೈತಾಪಿ ವರ್ಗ ಹೋದರೆ, ಗ್ರಾಮ ಪಂಚಾಯಿತಿಯಲ್ಲಿ ಪಹಣಿ ಕೊಡುವುದನ್ನು ನಿಲ್ಲಿಸಲಾಗಿದೆ. ನೀವು ತಾಲ್ಲೂಕು ಕಛೇರಿಗೆ ಹೋಗಿ ಎನ್ನುತ್ತಾರೆ. ತಾಲ್ಲೂಕು ಕಛೇರಿಯಲ್ಲಿ ಕೇಳಿದರೆ ಸರ್ವರ್ ಡೌನ್ ಎನ್ನುವ ಹಾರಿಕೆ ಉತ್ತರ ಸಿಗುತ್ತದೆ. ರೈತರನ್ನು ಅಲ್ಲಿಂದ ಇಲ್ಲಿಗೆ ಇಲ್ಲಿಂದ ಅಲ್ಲಿಗೆ ಅಲೆಸುವುದಾದರು ಏಕೆ? ತಾಲ್ಲೂಕು ಆಡಳಿತ ಬಿಗಿಯಾಗಿ ಆಡಳಿತ ನಡೆಸದೆ ಇರುವುದೇ ಈ ಎಲ್ಲಾ ಅವ್ಯವಸ್ಥೆಗೆ ಕಾರಣವಾಗಿದೆ ಎಂದು ಮೈಲ್ನಾಯ್ಕನಹೊಸಹಳ್ಳಿ ರವಿಕುಮಾರ್ ಕಿಡಿಕಾಡಿದ್ದಾರೆ.
ಸಂಬಂಧಪಟ್ಟ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ರೈತರ ಹಿತದೃಷ್ಠಿಯಿಂದ ಇತ್ತ ಗಮನಹರಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಎಚ್ಚರಿಕೆ ನೀಡಿ ರೈತರಿಗೆ ಕ್ರಮಬದ್ಧವಾಗಿ ಅಗತ್ಯ ಪಹಣಿ ಇತರೆ ಭೂ ದಾಖಲೆಗಳನ್ನು  ದೊರಕಿಸಿ ಕೊಟ್ಟು ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಪಡೆದು ಕೊಳ್ಳಲು  ಅನುಕೂಲ ಮಾಡಿ ಕೊಡುವ ಮೂಲಕ ಆಗುವ ತೊಂದರೆಯನ್ನು ತಪ್ಪಿಸುವಂತೆ  ರೈತರು ಮನವಿ ಮಾಡಿದ್ದಾರೆ.
 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑