Tel: 7676775624 | Mail: info@yellowandred.in

Language: EN KAN

    Follow us :


ಅಕ್ರಮವಾಗಿ ನಿರ್ಮಿಸಿದ ಶಿಲುಬೆಯನ್ನು ತೆರವುಗೊಳಿಸಿದ ರಾಮನಗರ ಜಿಲ್ಲಾಡಳಿತ

Posted date: 23 Jun, 2020

Powered by:     Yellow and Red

ಅಕ್ರಮವಾಗಿ ನಿರ್ಮಿಸಿದ ಶಿಲುಬೆಯನ್ನು ತೆರವುಗೊಳಿಸಿದ ರಾಮನಗರ ಜಿಲ್ಲಾಡಳಿತ

ರಾಮನಗರ:ಜೂ/೨೩/೨೦/ಮಂಗಳವಾರ. ರಾಮನಗರ ಜಿಲ್ಲಾ ಕೇಂದ್ರದಿಂದ ಕೂಗಳತೆಯ ದೂರದ ಗೊಲ್ಲರ ಚೆನ್ನಯ್ಯನ ದೊಡ್ಡಿ ಗ್ರಾಮದಲ್ಲಿರುವ ಹಾರ್ನ ಬೆಟ್ಟದಲ್ಲಿ ಸೆಬಾಸ್ಟಿಯನ್ ರಾಣಿ ಎಂಬ ಕ್ರಿಶ್ಚಿಯನ್ ಮಹಿಳೆ ಅಕ್ರಮವಾಗಿ ಸುಮಾರು ೧೫ ಅಡಿಗೂ ಹೆಚ್ಚು ಎತ್ತರದ ಶಿಲುಬೆಯನ್ನು ಹಾಗೂ ಮೇರಿ ವಿಗ್ರಹವನ್ನು ಗೋಮಾಳದಲ್ಲಿ ನಿರ್ಮಿಸಿದ್ದನ್ನು ಇಂದು ಜಿಲ್ಲಾಡಳಿತ ತೆರವುಗೊಳಿಸಿದೆ.


ಶಿಲುಬೆಯನ್ನು ನಿರ್ಮಾಣ ಮಾಡುವ ಮೂಲಕ ಗೋಮಾಳದ ಸ್ವತ್ತನ್ನು ಕಬಳಿಸಲು ಮುಂದಾಗಿದ್ದು, ಅದನ್ನು ತೆರವುಗೊಳಿಸುವಂತೆ ರಾಮನಗರ ಜಿಲ್ಲೆಯ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು ಸದಸ್ಯರು ದಿನಾಂಕ ೨೫-೦೨-೨೦ ರಂದು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆಯನ್ನು ಮಾಡಿ ರಾಮನಗರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿತ್ತು. ಆದರೂ ಸಹ ಅಕ್ರಮ ನಿರ್ಮಾಣವನ್ನು ತೆರವುಗೊಳಿಸಲು ಜಿಲ್ಲಾಡಳಿತ ಮುಂದಾಗದಿದ್ದಾಗ ಹಿಂಜಾವೇ ಜಿಲ್ಲಾಧ್ಯಕ್ಷರಾದ ಗಜೇಂದ್ರ ಸಿಂಗ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಕೀಲ ಸುರೇಶ.ಆರ್ ಹಾಗೂ ಜಿಲ್ಲಾ ಕಾರ್ಯದರ್ಶಿಯಾದ ಅರುಣ್ ಸಿಂಗ್ ರವರು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ  WP No: 6333/2020 (PIL) ರಂತೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದು, ಮಾನ್ಯ ನ್ಯಾಯಾಧೀಶರು ಸದರಿ ಪ್ರಕರಣದ ಸಂಬಂಧ ಎದುರುದಾರರು ಛಿಮಾರಿ ಹಾಕಿದ್ದರು. ಅದರ ಪರಿಣಾಮವಾಗಿ ಜಿಲ್ಲಾಡಳಿತ ಇಂದು ಬೆಳ್ಳಂಬೆಳಗ್ಗೆಯೇ ಕಾರ್ಯಾಚರಣೆ ನಡೆಸಿ ಅಕ್ರಮ ನಿರ್ಮಾಣವನ್ನು ತೆರವುಗೊಳಿಸಿದೆ.


ಇದು ಹಿಂದು ಜಾಗರಣ ವೇದಿಕೆ ರಾಮನಗರ ಜಿಲ್ಲೆಯ ಹೋರಾಟಕ್ಕೆ ಸಿಕ್ಕ ಜಯ.


ಹಿಂದೂ ಜಾಗರಣ ವೇದಿಕೆ ಗೆ ಸಿಕ್ಕ ಮತ್ತೊಂದು ಅಭೂತಪೂರ್ವ ಜಯವಿದು ಎಂದು ವೇದಿಕೆಯ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದರು. ರಾಮನಗರ ತಾಲ್ಲೂಕು ಜಾಲಮಂಗಲ ರಸ್ತೆಯಲ್ಲಿರುವ ಗೊಲ್ಲರ ಚೆನ್ನಯ್ಯನ ದೊಡ್ಡಿ ಎಂಬ ಗ್ರಾಮದಲ್ಲಿ ಅಕ್ರಮವಾಗಿ ಸುಮಾರು ೧೮ ಅಡಿ ಎತ್ತರದ ಶಿಲುಬೆ ನಿರ್ಮಿಸಿ ಮೇರಿ ಪ್ರತಿಮೆ ಪ್ರತಿಷ್ಠಾಪಿಸಿದ್ದ ಬೆಟ್ಟದಲ್ಲಿ ಎರಡು ಪ್ರತಿಮೆಗಳು ಹಿಂದು ಜಾಗರಣ ವೇದಿಕೆಯ ಹೋರಾಟದ ಫಲದಿಂದ ತೆರವುಗೊಳಿಸಲಾಗಿದೆ ಇದು ಹಿಂದು ಜಾಗರಣ ವೇದಿಕೆ ರಾಮನಗರ ಜಿಲ್ಲೆ ಕಾರ್ಯಕರ್ತರಿಗೆ ಸಿಕ್ಕ ಎರಡನೇ ಹೋರಾಟದ ಫಲ ಇಂದು ಸಂಸ್ಕೃತಿ ಮೇಲಿನ ದಬ್ಬಾಳಿಕೆಗೆ ಪರಿಹಾರವಾಗಿದೆ ಎಂದು ಅವರು ತಿಳಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑