ಹಂದಿ ನೋಡಿ ಕರಡಿ ಎಂದು ಹೆದರಿದ ಮಂದಿ
ಚನ್ನಪಟ್ಟಣ:ಜೂ/೨೬/೨೦/ಶುಕ್ರವಾರ. ಚನ್ನಪಟ್ಟಣದ ನಗರಿಗರಿಗೆ ಕರಡಿ ಯ ಭಯ ಇನ್ನೂ ಹೋಗಿಲ್ಲಾ ಎನ್ನುವುದಕ್ಕೆ ಇಂದು ಕುವೆಂಪು ನಗರದ ಎರಡನೇ ತಿರುವಿನ ಕೊನೆಯ, ಮಾರುತಿ ದೇವಾಲಯದ ಹಿಂಭಾಗದ ಖಾಲಿ ನಿವೇಶನದಲ್ಲಿ ಬೆಳೆದಿದ್ದ ಗಿಡಗಳ ನಡುವೆ ಕಂಡ ಹಂದಿಯನ್ನು ನೋಡಿ ಭಯಭೀತರಾಗಿ, ಗುಂಪು ಸೇರಿದ್ದರು.
ಇತ್ತೀಚೆಗೆ ನಗರದ ರೈಲ್ವೇ ನಿಲ್ದಾಣದ ಬಳಿ ಮಾವಿನ ಹಣ್ಣಿನ ರುಚಿಗೆ ಎಪಿಎಂಸಿ ಬಳಿ ಬಂದು ನಂತರ ರೈಲ್ವೆ ನಿಲ್ದಾಣದ ಹತ್ತಿರ ಬಂದ ಸಂದರ್ಭದಲ್ಲಿ ಜನರನ್ನು ನೋಡಿ ಭಯಭೀತರಾಗಿ ಮಾಜಿ ನಗರಸಭಾ ಸದಸ್ಯೆಯೊಬ್ಬರ ಮನೆಯ ಕಾಂಪೌಂಡ್ ಒಳಗೆ ಅವಿತಿದ್ದು, ಬೆಳಗಿನ ಜಾವ ಅವರ ಮೇಲೆ ಏಕಾಏಕಿ ದಾಳಿ ಮಾಡಿ ಇಡೀ ಮುಖವನ್ನು ವಿರೂಪಗೊಳಿಸಿತ್ತು.
ಅದಾದ ಹದಿನೈದು ದಿನಗಳ ತನಕ ಇಡೀ ನಗರದ ಜನತೆ ಭಯಭೀತರಾಗಿದ್ದಲ್ಲದೆ, ಕಪ್ಪು ಬಣ್ಣದ ನಾಯಿ, ಹಂದಿ ಕಂಡರೂ ಸಹ ಕರಡಿಯನ್ನೇ ನೋಡಿದೆ ಎಂದೇ ಹೇಳುವ ಮಟ್ಟಿಗೆ ಭಯ ಹುಟ್ಟಿಸಿಕೊಂಡಿದ್ದರು. ಇಂದು ಸಹ ಅಂತಹದೇ ಘಟನೆ ನಡೆದಿದ್ದು, ಯಾರೋ ಅನಾಮಧೇಯರು ಗಾಳಿ ಸುದ್ದಿ ಹಬ್ಬಿಸಿ ಆ ರಸ್ತೆಯ ಜನರನ್ನು ಭಯಗೊಳಿಸಿದ್ದು ಜನರು ಸಂದಿಗೊಂದಿಗಳನ್ನು ಹುಡುಕುವಂತೆ ಮಾಡಿದ್ದು ಹಾಸ್ಯಾಸ್ಪದ ವಾದರೂ ಸತ್ಯ.
ಅದೇ ಬೀದಿಯಲ್ಲಿ ವಾಸ ಮಾಡುತ್ತಿರುವ ಹಿರಿಯ ಪತ್ರಕರ್ತ ಅಬ್ಬೂರು ರಾಜಶೇಖರ ಮಾತನಾಡಿ ಯಾರೋ ತಿಳಿಗೇಡಿಗಳು ಜನರನ್ನು ಭಯ ಬೀಳಿಸಲು ಮಾಡಿರುವ ಕುತಂತ್ರವಿದು. ಕರಡಿ ಯಾವ ಕಾರಣಕ್ಕು ಜನನಿಬಿಡ ಪ್ರದೇಶಗಳಿಗೆ ಅದರಲ್ಲೂ ಬೆಳಕಿನ ಸಮಯದಲ್ಲಿ ಬರುವುದಿಲ್ಲ. ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಪೋಲಿಸರು ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಮತ್ತೋರ್ವ ಪತ್ರಕರ್ತ ಲಕ್ಷ್ಮಿಪತಿ ಮಾತನಾಡಿ ನಗರಾದದ್ಯಂತ ಅನೇಕ ಖಾಲಿ ನಿವೇಶನಗಳಿದ್ದು, ಅದರಲ್ಲಿ ಕಾಲಿಡಲು ಸಾಧ್ಯವಾಗದಂತೆ ಗಿಡಮರಗಳು ಬೆಳೆದು ನಿಂತಿವೆ. ನಗರದ ಮಂದಿ ತಮ್ಮ ಮನೆಯ ಕಸವನ್ನು ತಂದು ಅಲ್ಲಿಯೇ ಸುರಿಯುವುದರಿಂದ ಗಬ್ಬು ವಾಸನೆಯ ಜೊತೆಗೆ ಹಂದಿಗಳು ಮತ್ತು ನಾಯಿಗಳ ಕಾಟ ಹೆಚ್ಚಾಗಿದೆ. ನಗರಸಭೆಯ ಅಧಿಕಾರಿಗಳು ಇತ್ತ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು