ನಾವು ಬದುಕಿರುವುದೇ ಪ್ರಕೃತಿಯಿಂದ, ಅದನ್ನು ಉಳಿಸಿ ಬೆಳೆಸಬೇಕಾದ ಕರ್ತವ್ಯವೂ ನಮ್ಮದೆ ಡಾ ಮಲವೇಗೌಡ
ಚನ್ನಪಟ್ಟಣ:ಜೂ/೨೮/೨೦/ಭಾನುವಾರ. ಪ್ರಕೃತಿಯೇ ಇಲ್ಲವೆಂದರೆ ಮನುಷ್ಯನು ಸೇರಿದಂತೆ ಯಾವುದೇ ಜೀವಚರಗಳು ಬದುಕಲು ಸಾಧ್ಯವಿಲ್ಲ. ಮನುಷ್ಯನ ದುರಾಸೆಯಿಂದ ಇಡೀ ಜಗತ್ತಿನ ವಾತಾವರಣವೇ ಕಲುಷಿತಗೊಂಡಿದೆ. ಮುಂದಿನ ಪೀಳಿಗೆಗೆ ನಾವು ಕೊಡುವುದೇನಾದರು ಇದ್ದರೆ ಅದು ಪ್ರಕೃತಿಯನ್ನು ಉಳಿಸಿ ಹೋಗುವುದು ಮಾತ್ರ ಎಂದು ನಗರದ ಮೂಳೆ ತಜ್ಞ ಮಾತೃಶ್ರೀ ಆರ್ಥೋಫೆಡಿಕ್ ಆಸ್ಪತ್ರೆಯ ವ್ಯವಸ್ಥಾಪಕ ಡಾ ಮಲವೇಗೌಡರು ಅಭಿಪ್ರಾಯಪಟ್ಟರು.
ಅವರು ಇಂದು ಮುಂಜಾನೆ ರೈಲ್ವೇ ನಿಲ್ದಾಣದ ಬಳಿ ಗಿಡಗಳನ್ನು ನೆಟ್ಟು ಮಾತನಾಡಿದರು.
ಯಾವುದೇ ಫಲಾಪೇಕ್ಷೆ ಆಶಿಸದೆ, ನಮಗೆ ಸಂಪೂರ್ಣ ಸಹಕಾರ ನೀಡಿರುವುದು, ನೀಡುತ್ತಿರುವುದು ಪ್ರಕೃತಿ. ಅದಕ್ಕೆ ಪ್ರತಿಯಾಗಿ ನಾವು ಗಿಡಮರಗಳನ್ನು ನಾಶ ಪಡಿಸದೆ, ಸಾಧ್ಯವಾದಷ್ಟು ಗಿಡಗಳನ್ನು ನೆಟ್ಟು ಪೋಷಿಸಬೇಕು. ಕಾರ್ಖಾನೆಗಳು, ವಾಹನಗಳು ಹಾಗೂ ಇನ್ನಿತರ ರಾಸಾಯನಿಕ ದಿಂದ ವಾತಾವರಣ ಕೆಟ್ಟುಹೋಗಿದೆ. ಪ್ತತಿಯೊಬ್ಬ ಮನುಷ್ಯನು ವರ್ಷಕ್ಕೊಮ್ಮೆ ಒಂದು ಗಿಡವನ್ನು ನೆಟ್ಟು ಪೋಷಿಸಿದರೆ ಮುಂದಿನ ಪೀಳಿಗೆಯ ಜನರಿಗೆ ನಾವು ಕೊಡುವ ಕೊಡುಗೆಯಾಗಿದೆ ಎಂದರು.
ಸಮಾಜ ಸೇವಕ ಎಲೆಕೇರಿ ರವೀಶ್ ಮಾತನಾಡಿ ಈಗಾಗಲೇ ನಮ್ಮ ದೇಶದ ರಾಜಧಾನಿ ದೆಹಲಿಯಲ್ಲಿ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ. ಹಣಕೊಟ್ಟು ಕೃತಕ ಆಮ್ಲಜನಕವನ್ನು ಪಡೆಯುವ ಸ್ಥಿತಿ ನಿರ್ಮಾಣವಾಗಿರುವುದು
ನಮ್ಮ ದೇಶದ ಸಂಸ್ಕೃತಿಗೆ ವಿರುದ್ದವಾದದ್ದು. ಈಗಲಾದರೂ ಎಚ್ಚೆತ್ತುಗೊಳ್ಳದಿದ್ದರೆ ಜಗತ್ತು ಮುಂದಿನ ಶತಮಾನವನ್ನು ನೋಡುವುದು ದುಸ್ತರವೆಂದೇ ಭಾವಿಸಬಹುದು. ನಮ್ಮ ಮಕ್ಕಳಿಗೆ ಪೋಷಕರು ಹಾಗೂ ಶಾಲೆಯಲ್ಲಿ ಸಹ ಪ್ರಕೃತಿಯ ಬಗ್ಗೆ ತಿಳುವಳಿಕೆ ನೀಡುವ ಮೂಲಕ ಪರಿಸರ ಪ್ರೇಮವನ್ನು ಬಿತ್ತಬೇಕು ಎಂದರು.
ಡಾ ರಾಜಕುಮಾರ ಅಭಿಮಾನಿ ಬಳಗದ ತಾಲ್ಲೂಕು ಅಧ್ಯಕ್ಷ ಮಂಜುನಾಥ, ಶಿವಕುಮಾರ್, ಮಾತೃಭೂಮಿ ಸೇವಾ ಫೌಂಡೇಶನ್ ನ ಮಹೇಶ್ ಮತ್ತು ಸಂಗಡಿಗರು ಹಾಗೂ ಎಲೆಕೇರಿ ಗ್ರಾಮದ ಪರಿಸರ ಪ್ರೇಮಿಗಳು ಹಾಜರಿದ್ದು ಗಿಡಗಳನ್ನು ನೆಡುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು