ಕಳೆಯಿಲ್ಲದ ತಾಲ್ಲೂಕು ಕಾಂಗ್ರೆಸ್ ಕಛೇರಿ, ಅಲ್ಲಲ್ಲಿ ಡಿಕೆಶಿ ಪದಗ್ರಹಣ ಸಂಭ್ರಮ ಕಣ್ತುಂಬಿಕೊಂಡ ಅಭಿಮಾನಿಗಳು
ಚನ್ನಪಟ್ಟಣ:ಜು/೦೨/೨೦/ಗುರುವಾರ. ಇಂದು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿರುವ ಸಂದರ್ಭದಲ್ಲಿ ತಾಲ್ಲೂಕಿನ ಕಾಂಗ್ರೆಸ್ ಪಕ್ಷದ ಕಛೇರಿಯು ಬಣಗುಡುತ್ತಿತ್ತು. ತಳಿರು ತೋರಣ, ಹೂವಿನ ಅಲಂಕಾರ ವಿರಲಿ, ಕನಿಷ್ಠ ಪಕ್ಷ ಕಛೇರಿಯ ಬಾಗಿಲು ತೆರೆದಿರಲಿಲ್ಲ. ನಮ್ಮದೇ ಜಿಲ್ಲೆಯ ಒಬ್ಬ ರಾಜಕೀಯ ಭೀಷ್ಮ ರಾಷ್ಟ್ರೀಯ ಪಕ್ಷದ ರಾಜ್ಯದ ಚುಕ್ಕಾಣಿ ಹಿಡಿಯುತ್ತಿರುವ ನಾಯಕ, ಭವಿಷ್ಯದ ಮುಖ್ಯಮಂತ್ರಿ ಎಂದೇ ಬಿಂಬಿತರಾದ ಡಿ ಕೆ ಶಿವಕುಮಾರ್ ರವರು ಪಕ್ಷದ ರಾಜ್ಯಾಧ್ಯಕ್ಷರಾಗುವ ಸಂದರ್ಭದಲ್ಲಿ ತಾಲ್ಲೂಕು ಕಛೇರಿ ಕಳೆ ಕಳೆದುಕೊಂಡಿದ್ದು ಮಾತ್ರ ತಾಲ್ಲೂಕು ಸಂಘಟನೆಯ ಬಗ್ಗೆ ಅಭಿಮಾನಿಗಳಿಗೆ ಬೇಸರ ಮೂಡಿಸಿದ್ದಂತು ಸತ್ಯ.
ಇನ್ನೂ ತಾಲ್ಲೂಕಿನ ಅನೇಕ ಗ್ರಾಮಾಂತರ ಪ್ರದೇಶಗಳಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರ ಮುಂದಾಳತ್ವದಲ್ಲಿ ಪೆಂಡಾಲ್ ಹಾಕಿಸಿ, ಟಿವಿಗಳನ್ನು ಅಳವಡಿಸಿ ಆನ್ಲೈನ್ ಮೂಲಕ ಅಭಿಮಾನಿಗಳು ಕಾರ್ಯಕ್ರಮವನ್ನು ವೀಕ್ಷಿಸಲು ಅನುವು ಮಾಡಿಕೊಟ್ಟಿದ್ದರು. ಕೆಲವು ಕಡೆಯಂತೂ ಟಿವಿ ಯಲ್ಲಿ ಕಾರ್ಯಕ್ರಮವು ಹೇಗೆ ಪ್ರಸಾರವಾಗುತ್ತಿತ್ತೋ ಅದೇ ರೀತಿಯಲ್ಲಿ ವಂದೇ ಮಾತರಂ ಹಾಡಿಗೆ ಎದ್ದು ನಿಂತು ಗೌರವ ಸೂಚಿಸುವುದು. ಅಲ್ಲಿ ಉದ್ಘಾಟಿಸಿದ ಸಂದರ್ಭದಲ್ಲಿಯೇ ಇಲ್ಲಿಯೂ ದೀಪ ಬೆಳಗಿಸಿ ಉದ್ಘಾಟಿಸುವುದನ್ನು ಚಾಚೂ ತಪ್ಪದೆ ಮಾಡುವ ಮೂಲಕ ತಮ್ಮ ನಾಯಕ ಅಧಿಕಾರ ಸ್ವೀಕರಿಸುವುದನ್ನು ಕಣ್ತುಂಬಿಕೊಂಡರು.
ನಗರದ ವೀರೇಗೌಡನದೊಡ್ಡಿ (ಅಂಬೇಡ್ಕರ್ ನಗರ), ಕೋಟೆ ಯ ಆಂಜನೇಯ ದೇವಾಲಯದ ಮುಂಭಾಗ, ಎಲೆಕೇರಿ, ಬಡಾಮಕಾನ್, ಮದಿನಾಚೌಕ, ಮಂಗಳವಾರಪೇಟೆ ಸೇರಿ ಆರು ಕಡೆ ಹಾಗೂ ಗ್ರಾಮಾಂತರದಲ್ಲಿ ಪ್ರತಿ ಪಂಚಾಯತಿಗೊಂದರಂತೆ ೩೨ ಕಡೆ ವೀಕ್ಷಿಸಲು ಪಕ್ಷದ ವತಿಯಿಂದ ಅನುವು ಮಾಡಿಕೊಡಲಾಗಿತ್ತು.
ಜಿಲ್ಲೆಯ ಹೆಮ್ಮೆಯ ಮಗ, ಭವಿಷ್ಯದ ಮುಖ್ಯಮಂತ್ರಿ ಹಾಗೂ ದೊಡ್ಡ ಸಮುದಾಯದ ನಾಯಕನಾಗಿ ಹೊರಹೊಮ್ಮಿರುವ ಡಿ ಕೆ ಶಿವಕುಮಾರ್ ರವರ ಪದಗ್ರಹಣ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಭಾಗಿಯಾಗಿ, ಜನರು ಕಾರ್ಯಕ್ರಮ ವನ್ನು ವೀಕ್ಷಿಸುವ ಮೂಲಕ ತಮ್ಮ ಒಳ ಅಭಿಮಾನವನ್ನು ಮೆರೆದಿದ್ದು ನಾಯಕನಿಗೆ ಸಂದ ಜಯ ಎಂದೇ ಭಾವಿಸಬಹುದು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು