ನೀಲಕಂಠನಹಳ್ಳಿ ಭರತ್ ರ ಸ್ವ ರಾಜಕೀಯ ಹಿತಕ್ಕಾಗಿ ನೀರಿನ ಘಟಕಕ್ಕೆ ವಿದ್ಯುತ್ ಬೋರ್ಡ್. ಗ್ರಾಮದ ಮುಖಂಡರ ಆಕ್ರೋಶ
ಚನ್ನಪಟ್ಟಣ:ಜು/೦೨/೨೦ಗುರುವಾರ. ತಾಲ್ಲೂಕಿನ ನೀಲಕಂಠನಹಳ್ಳಿ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಸದಸ್ಯ ಭರತ್ ರವರು ಮುಂದಿನ ೨೦೨೦ ರ ಗ್ರಾಮ ಪಂಚಾಯಿತಿ ಚುನಾವಣೆಗಾಗಿ, ನೀಲಕಂಠನಹಳ್ಳಿ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕದ ನಾಮಫಲಕವನ್ನು ಸರ್ಕಾರದ ನಿಯಮ ಮೀರಿ, ವಿದ್ಯುತ್ ನಾಮ ಫಲಕವನ್ನಾಗಿ ಪರಿವರ್ತಿಸಿ, ಕೇವಲ ಜನರ ಓಲೈಕೆಗಾಗಿ ಇಳಿದಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ನೀಲಕಂಠನಹಳ್ಳಿ ಗ್ರಾಮದ ಡಿ ಗುರುಮೂರ್ತಿ ರವರು ದೂರಿದ್ದಾರೆ.
ವಿಶ್ವಮಾನ್ಯರು ಹಾಗೂ ದಿವ್ಯಚೇತನಗಳಾದ ಶ್ರೀಭಗವಾನ್ ಬುದ್ಧ ಮತ್ತು ಡಾ || ಬಿ .ಆರ್ . ಅಂಬೇಡ್ಕರವರ ಭಾವಚಿತ್ರಗಳನ್ನು ತಮ್ಮ ರಾಜಕೀಯ ದುರುದ್ದೇಶಕ್ಕಾಗಿ, ನಾಮಫಲಕದಲ್ಲಿ ಚಿತ್ರ ಹಾಕುವ ಮೂಲಕ ದುರ್ಬಳಕೆ ಮಾಡಿಕೊಂಡಿದ್ದಾರೆ. ಮತ್ತು ಜನ ಸಾಮಾನ್ಯರ ಭಾವನೆಗಳನ್ನು ಬಂಡವಾಳವಾಗಿ ಉಪಯೋಗಿಸಿಕೊಂಡು ತಮ್ಮ ರಾಜಕಿಯ ದುರುದ್ದೇಶದಿಂದ ಮುಂದಿನ ಚುನಾವಣೆಯ ಮತಗಳಿಕೆಗಾಗಿ ಕೀಳುಮಟ್ಟದ ರಾಜಕೀಯಕ್ಕೆ ಇಳಿದಿದ್ದಾರೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಜನವರಿ ೨೦೧೮ ರಲ್ಲಿ ಇದೇ ಶುದ್ಧ ನೀರಿನ ಘಟಕದ ಗುದ್ದಲಿ ಪೂಜೆ ನಡೆಯುವ ಸಂಧರ್ಭದಲ್ಲಿ ಸ್ವಾರ್ಥ ಸಾಧನೆಗಾಗಿ, ಏಕಾಂಗಿಯಾಗಿ ವಿರೋಧ ವ್ಯಕ್ತ ಪಡಿಸಿದ ಭರತ್ ರವರು ಘಟಕದ ಗುದ್ದಲಿ ಪೂಜೆ ನೆರವೇರಿಸಲು ಬಂದಿದ್ದ ಅಂದಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಿ.ಪಿ. ರಾಜೇಶ್ ರವರನ್ನು ವಿರೋದ್ಧಿಸಿದ್ದರು. ಹಾಗೂ ಮಾಜಿ ಶಾಸಕ ಸಿ.ಪಿ.ಯೋಗೇಶ್ ರವರು ನೀಲಕಂಠನಹಳ್ಳಿ ಗ್ರಾಮಸ್ಥರ ದಿಕ್ಕು ತಪ್ಪಿಸಿರುತ್ತಾರೆ ಎಂದು ಹೇಳಿಕೆ ನೀಡಿ ನೀಲಕಂಠನಹಳ್ಳಿ ಶುದ್ದ ಕುಡಿಯುವ ನೀರಿನ ಘಟಕದಲ್ಲಿ ಸಿ.ಪಿ.ಯೋಗೇಶ್ ರಾಜಕಿಯ ಗಿಮಿಕ್ ಮಾಡುತ್ತಿದ್ದಾರೆಂದು ಸ್ಥಳೀಯ ಪತ್ರಿಕೆಯಲ್ಲಿ ಹೇಳಿಕೆ ನೀಡಿ ಆಕ್ಷೇಪ, ವಿರೋಧ ವ್ಯಕ್ತಪಡಿಸಿದ್ದರು.
ಮುಂದಿನ ದಿನಗಳಲ್ಲಿ ಮಾಜಿ ಶಾಸಕರಾದ ಸಿ.ಪಿ.ಯೋಗೇಶ್ ರವರ ಬೆಂಬಲದೊಂದಿಗೆ ಶಾಸಕರ ಸ್ಥಳಿಯ ಪ್ರಾದೇಶಿಕ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾದ ಅನುದಾನ ದಿಂದ ಕಾಮಗಾರಿ ಪೂರ್ಣಗೊಂಡು ಲೋಕಾರ್ಪಣೆಯೂ ಆಯಿತು. ಆದರೆ ಈ ಘಟಕದ ನಿರ್ಮಾಣವನ್ನು ವಿರೋಧಿಸಿದ್ದ ಅಂದಿನ ಗ್ರಾಮ ಪಂಚಾಯಿತಿ ಸದಸ್ಯ ಭರತ್ ರವರು ತಮ್ಮ ಅವಧಿ ಮುಗಿದ ಮೇಲೂ ಕೇವಲ ವಿದ್ಯುತ್ ನಾಮ ಫಲಕವನ್ನು ಮನೋಸ್ಸೋಯಿಚ್ಛೆ ಘಟಕದ ಮೇಲೆ ಹಾಕಿ ಈ ಘಟಕವನ್ನು ತಾನೇ ಸ್ವತಃ ಮಾಡಿಸಿರುವುದಾಗಿ ಗ್ರಾಮಸ್ಥರ ಮುಂದೆ ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿರುವುದು ೨೦೨೦ ಗ್ರಾಮ ಪಂಚಾಯಿತಿ ಚುನಾವಣೆಯ ದುರುದ್ದೇಶದಿಂದ ಎಂದು ಮೇಲ್ನೋಟಕ್ಕೆ ಕಾಣಿಸುತ್ತದೆ.
ವಿದ್ಯುತ್ ನಾಮ ಫಲಕದಲ್ಲಿ ರಾಜ್ಯ ಸರ್ಕಾರದ ಲಾಂಛನ ಹಾಗೂ ತಾಲ್ಲೂಕು ಪಂಚಾಯಿತಿ ಚನ್ನಪಟ್ಟಣ, ಜಿಲ್ಲಾ ಪಂಚಾಯಿತಿ ರಾಮನಗರ ಎಂದು ನಮೂದಿಸಲಾಗಿದ್ದು, ಈ ನಾಮ ಫಲಕವು ಸರ್ಕಾರದ ನಿಯಮಾನುಸಾರ ಇರುವುದಿಲ್ಲ. ಈ ಕುರಿತು ಸಹಾಯಕ ಕಾರ್ಯಪಾಲಕ ಅಭಿಯಂತರ ಕಛೇರಿ ಗ್ರಾಮೀಣ ಕುಡಿರುವ ನೀರಿನ ಉಪವಿಭಾಗ ಚನ್ನಪಟ್ಟಣ, ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯಿತಿ ರಾಮನಗರ ಜಿಲ್ಲೆ, ಇವರಲ್ಲಿ ದೂರು ದಾಖಲಿಸಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು