ಚನ್ನಪಟ್ಟಣ ಸರ್ಕಾರಿ ಶಾಲೆ ಮತ್ತು ಸಂಸ್ಥೆಗಳಲ್ಲಿ ಸರಣಿ ಕಳ್ಳತನ. ಪೋಲಿಸ್ ಇಲಾಖೆ ನಿರ್ಲಕ್ಷ್ಯ ಆರೋಪ
ಚನ್ನಪಟ್ಟಣ:ಜು/೦೭/೨೦/ಮಂಗಳವಾರ. ಚನ್ನಪಟ್ಟಣ ತಾಲೂಕಿನಲ್ಲಿ ಸರ್ಕಾರಿ ಶಾಲೆಗಳು, ವಸತಿ ಶಾಲೆಗಳು ಹಾಗೂ ಕೃಷಿ ಸಂಪರ್ಕ ಕೇಂದ್ರಗಳಲ್ಲಿ ಸರಣಿ ಕಳ್ಳತನ ಮುಂದುವರೆದಿವೆ. ಸೋಮವಾರ ರಾತ್ರಿ ತಾಲೂಕಿನ ದೊಡ್ಡಮಳೂರು ಮತ್ತು ಮತ್ತೀಕೆರೆ ಗ್ರಾಮದಲ್ಲಿ ಮೂರು ಕಡೆ ಸರಣಿ ಕಳ್ಳತನ ನಡೆದಿದೆ. ಸರ್ಕಾರಿ ಶಾಲೆ ಮತ್ತು ಇಲಾಖೆಗಳನ್ನೇ ಗುರಿಯಾಗಿಸಿಕೊಂಡು ಕಳ್ಳತನ ನಡೆದಿರುವುದು ವಿಶೇಷವಾಗಿದ್ದು ಅನುಭವಿ ಹಾಗೂ ಮಾಹಿತಿ ಇರುವ ಕ .
ತಾಲ್ಲೂಕಿನಾದ್ಯಂತ
ಮೂರು ಕಡೆ ಸರ್ಕಾರಿ ಸಂಸ್ಥೆಗಳಿಗೆ ಖನ್ನ ಹಾಕಿರುವ ಕಳ್ಳರು ಲಕ್ಷಾಂತರ ರೂ. ಬೆಲೆಬಾಳುವ ಕಂಪ್ಯೂಟರ್, ಯುಪಿಎಸ್ ಬ್ಯಾಟರಿ ಮೊದಲಾದ ವಸ್ತುಗಳನ್ನು ಕಳವು ಮಾಡಿದ್ದಾರೆ. ಹೆದ್ದಾರಿ ಬದಿಯಲ್ಲೇ ಕಳ್ಳತನ ನಡೆದಿರುವುದು ಜನತೆಯನ್ನು ಭಯಭೀತ ಗೊಳಿಸಿದೆ.
ದೊಡ್ಡಮಳೂರಿನ ಗ್ರಾಮ ಪಂಚಾಯತಿ ಕಛೇರಿಗೆ ಕನ್ನ ಹಾಕಿರುವ ಖದೀಮರು ಖಾತೆಗೆ ಸಂಬಂಧಿಸಿದ ಕಡತಗಳು, ಮೂರು ಕಂಪ್ಯೂಟರ್ ಯಂತ್ರಗಳು, ಸೋಲಾರ್ ಬ್ಯಾಟರಿ, ಯುಪಿಎಸ್ ಬ್ಯಾಟರಿ, ೧೭ ಟಾರ್ಪಾಲಿನ್, ಬಿತ್ತನೆ ಬೀಜಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತು ಗಳನ್ನು ದೋಚಿದ್ದಾರೆ. ಇದೇ ಗ್ರಾಮದ ಮಳೂರು ಹೋಬಳಿ ರೈತಸಂಪರ್ಕ ಕೇಂದ್ರದ ಬಾಗಿಲು ಒಡೆದು ಒಳಗೆ ನುಗ್ಗಿರುವ ಕಳ್ಳರು ೩೫ ಕೆ.ಜಿ ತೂಕದ ೫ ಚೀಲ ಬಿತ್ತನೆ ಜೋಳ,೩ ಸ್ಪ್ರೇಯರ್, ೧೭ ಟಾರ್ಪಲ್ಗಳನ್ನು ಕಳವು ಮಾಡಿದ್ದಾರೆ.
ಮತ್ತೀಕೆರೆ ಗ್ರಾಮದ ಆದರ್ಶ ವಿದ್ಯಾಲಯದ ಕಂಪ್ಯೂಟರ್ ಕೊಠಡಿಗೆ ನುಗ್ಗಿರುವ ಕಳ್ಳರು ಕಂಪ್ಯೂಟರ್ ಹಾಗೂ ಯುಪಿಎಸ್, ಬ್ಯಾಟರಿಗಳನ್ನು ಕಳವು ಮಾಡಿದ್ದಾರೆ. ಮೂರು ಕಡೆಯಿಂದ ಸುಮಾರು ೫ ಲಕ್ಷ ರೂ. ಗಳಿಗೂ ಹೆಚ್ಚು ಮೌಲ್ಯದ ವಸ್ತುಗಳನ್ನು ಕಳವು ಮಾಡಿರುವುದಾಗಿ ಅಂದಾಜಿಸಲಾಗಿದೆ.
ಸ್ಥಳಕ್ಕೆ ಎಎಸ್ಪಿ ರಾಮರಾಜನ್, ಗ್ರಾಮಾಂತರ ವೃತ್ತ ನಿರೀಕ್ಷಕ ವಸಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಕೆಲ ತಿಂಗಳ ಹಿಂದಷ್ಟೆ ತಾಲೂಕಿನ ಮುನಿಯಪ್ಪನದೊಡ್ಡಿ ಮತ್ತು ಬೈರಾಪಟ್ಟಣ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಹಾಗೂ ಯುಪಿಎಸ್ಗಳನ್ನು ಕಳವು ಮಾಡಿದ್ದನ್ನು ನಾವಿಲ್ಲಿ ಸ್ಮರಿಸಬಹುದಾಗಿದೆ. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಸರ್ಕಾರಿ ಸಂಸ್ಥೆಗಳಲ್ಲೇ ಕಳ್ಳತನ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಕಳ್ಳರು ಸರ್ಕಾರಿ ಶಾಲೆಗಳು ಮತ್ತು ಸಂಸ್ಥೆಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಳ್ಳತನ ಎಸಗುತ್ತಿದ್ದಾರೆ. ಯಾವ ಸಂಸ್ಥೆಗಳಲ್ಲಿ ಕಳ್ಳತನವಾಗಿದೆಯೋ ಆ ಸಂಸ್ಥೆಯ ಮುಖ್ಯಸ್ಥರು ಆ ಕಛೇರಿಗಳಿಗೆ ಬಿಗಿಭದ್ರತೆ ಒದಗಿಸಲಿ. ಪೋಲೀಸರು ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಎಎಸ್ಪಿ ರಾಮರಾಜನ್ ರವರಿಗೆ ಆಗ್ರಹ ಪಡಿಸಿದ್ದೇನೆ.
ಹರೂರು ರಾಜಣ್ಣ. ತಾಲ್ಲೂಕು ಪಂಚಾಯತಿ ಅಧ್ಯಕ್ಷರು.
ಈಗಾಗಲೇ ಶ್ವಾನ ದಳ ಮತ್ತು ಬೆರಳಚ್ಚು ತಜ್ಞರ ಜೊತೆ ಭೇಟಿ ನೀಡಿ ಪರಿಶೀಲಿಸಿದ್ದೇವೆ. ಪೋಲಿಸ್ ಅಧೀಕ್ಷಕರ ಮಾರ್ಗ ದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಿ ಶೀಘ್ರವಾಗಿ ಕಳ್ಳರನ್ನು ಪತ್ತೆಹಚ್ಚುತ್ತೇವೆ.
ರಾಮರಾಜನ್ ಎಎಸ್ಪಿ, ಚನ್ನಪಟ್ಟಣ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು