ರಾಷ್ಟ್ರೀಯ ಹೆದ್ದಾರಿಯಲ್ಲಿ ಅಂಡರ್ ಪಾಸ್ ಅವೈಜ್ಞಾನಿಕ. ಮತ್ತೀಕೆರೆ-ಶೆಟ್ಟಿಹಳ್ಳಿ ಗ್ರಾಮಸ್ಥರಿಂದ ಪ್ರತಿಭಟನೆ
ಚನ್ನಪಟ್ಟಣ:ಜು/೨೦/೨೦/ಸೋಮವಾರ. ಶೆಟ್ಟಿಹಳ್ಳಿ ಮತ್ತೀಕೆರೆ ಮಧ್ಯದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 275 ಕ್ಕೆ ಸಂಭಂದಿಸಿದ ವಿಚಾರವಾಗಿ ಈ ಎರಡು ಗ್ರಾಮಗಳ ಮಧ್ಯೆ (ಅಂಡರ್ ಪಾಸ್) ಕೆಳ ಸೇತುವೆ ಮಾಡುವ ಬದಲಾಗಿ ಗ್ರಾಮದಿಂದ ಸುಮಾರು ಅರ್ಧ ಕಿಲೋ ಮೀಟರ್ ದೂರದಲ್ಲಿ ಅಂಡರ್ ಪಾಸ್ ಸೇತುವೆ ಮಾಡುವುದು ಅವೈಜ್ಞಾನಿಕ ಎಂದು ಎರಡು ಗ್ರಾಮದ 300 ಕ್ಕೂ ಹೆಚ್ಚು ಮಂದಿ ಹೊಸದಾಗಿ ಅಂಡರ್ ಪಾಸ್ ಸೇತುವೆ ನಿರ್ಮಾಣ ಕಾಮಗಾರಿ ತಡೆದು ಒಂದು ಗಂಟೆ ಪ್ರತಿಭಟನೆ ನಡೆಸಿದರು.
ಈ ಅವೈಜ್ಞಾನಿಕ ಸೇತುವೆ ಮಾಡುವುದರಿಂದ ಮತ್ತೀಕೆರೆ ಶೆಟ್ಟಿಹಳ್ಳಿ ಯಲ್ಲಿ ಇರುವ ಆದರ್ಶ ಶಾಲೆ, ಕುವೆಂಪು ಪ್ರಾಥಮಿಕ ಪಾಠ ಶಾಲೆ, ಸಾರ್ವಜನಿಕ ಹೈಸ್ಕೂಲ್, ಕಾಲೇಜು ವಿದ್ಯಾರ್ಥಿಗಳು ಪ್ರತಿ ದಿನ ಶಾಲಾ ಕಾಲೇಜಿಗೆ ಬರಲು ಸುಮಾರು ಅರ್ಧ ಕಿಲೋ ಮೀಟರ್ ದೂರದಲ್ಲಿ ತಿರುಗಿಕೊಂಡು ಬರಬೇಕಾಗಿದೆ. ಪ್ರಮುಖವಾಗಿ ಮತ್ತೀಕೆರೆ ಯಲ್ಲಿ ಗ್ರಾಮ ಪಂಚಾಯಿತಿ ಇರುವುದರಿಂದ ಮತ್ತೀಕೆರೆ, ಶೆಟ್ಟಿಹಳ್ಳಿ, ಸಂಕಲಗೆರೆ, ವಳಗೆರೆದೊಡ್ಡಿ, ಹೊಸೂರುದೊಡ್ಡಿ, ದೇವರಹಳ್ಳಿ ಗ್ರಾಮದ ನಾಗರಿಕರು ಪ್ರತಿ ದಿನ ತಮ್ಮ ಕೆಲಸ ಕಾರ್ಯನಿಮಿತ್ತ ಪಂಚಾಯಿತಿ ಗೆ ಬರುಬೇಕಾಗಿದ್ದು ಸಾಕಷ್ಟು ತೊಂದರೆ ಅನುಭವಿಸುವಂತಾಗುತ್ತದೆ.
ಅದೆ ರೀತಿಯಾಗಿ ಮತ್ತೀಕೆರೆ ಗ್ರಾಮದಲ್ಲಿ ವ್ಯವಸಾಯ ಸೇವಾ ಸಹಕಾರಿ ಪತ್ತಿನ ಸಂಘ ಕೂಡ ಇದ್ದು ಸುಮಾರು 15 ಗ್ರಾಮಗಳಿಗೆ ಸೇರಿರುವುದರಿಂದ ಈ ಗ್ರಾಮದ ನಾಗರಿಕರಿಗೂ ಕೂಡ ಬಹಳಷ್ಟು ತೊಂದರೆ ಎದುರಿಸುವಂತಾಗಿದೆ. ಮತ್ತೀಕೆರೆ ಶೆಟ್ಟಿಹಳ್ಳಿ ಸಂಭಂಧಿಸಿದ ಹಾಲಿನ ಡೈರಿ ಹಾಲು ಘಟಕಕ್ಕೆ ನಿತ್ಯ ಬೆಳಿಗ್ಗೆ ಸಂಜೆ ಹಾಲು ಹಾಕಲು, ಖರೀದಸಲು ಊರಿನ ಗ್ರಾಮಸ್ಥರು ರಸ್ತೆ ದಾಟುವಾಗ ಅಪಘಾತವಾಗುವ ಸಂಭವ ಹೆಚ್ಚಿದೆ, ಹೀಗಾಗಲೆ ಸಾಕಷ್ಟು ಅಪಘಾತ ಕೂಡ ಆಗಿ ಸಾವು ನೋವುಗಳು ಆಗಿರುತ್ತದೆ.
*ಮಾಜಿ ಮುಖ್ಯಮಂತ್ರಿ ಪತ್ರಕ್ಕೆ ಬೆಲೆ ಇಲ್ಲವೆ*
ಮೇಲಿನ ಸಮಸ್ತ ಸಮಸ್ಯೆಗಳ ಬಗ್ಗೆ
ಮತ್ತೀಕೆರೆ ಶೆಟ್ಟಿಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಅಂದಿನ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರ ಮೇರೆಗೆ ಮುಖ್ಯಮಂತ್ರಿಗಳು ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಪತ್ರ ಕೂಡ ಬರೆದಿದ್ದರು. ಆ ಪತ್ರದ ಆಧಾರದ ಮೇಲೆ ಮತ್ತೀಕೆರೆ ಶೆಟ್ಟಿಹಳ್ಳಿ ಬಳಿಯಲ್ಲಿ ಸೇತುವೆ ನಿರ್ಮಾಣ ಮಾಡಲು ರಾಷ್ಟ್ರೀಯ ಹೆದ್ದಾರಿ ಸಂಭವಿಸಿದ ಅಧಿಕಾರಿಗಳು ಸ್ಥಳ ಕೂಡ ಗುರುತಿಸಲಾಗಿತ್ತು. ಅಂದಿನ ರಾಜ್ಯ ಸರ್ಕಾರ ಪತನಗೊಂಡ ನಂತರ ಸದರಿ ಸೇತುವೆ ನಿರ್ಮಾಣ ಕಾಮಗಾರಿ ಸ್ಥಗಿತಗೊಳಿಸಿ ಮತ್ತೀಕೆರೆ ಶೆಟ್ಟಿಹಳ್ಳಿ ಗ್ರಾಮದಿಂದ ಸುಮಾರು ಅರ್ಧ ಕಿಲೋ ಮೀಟರ್ ದೂರದಲ್ಲಿ ಸೇತುವೆ ಕಾಮಗಾರಿ ಪ್ರಾರಂಭ ಮಾಡಿದ್ದಾರೆ.
ಹೊಸದಾಗಿ ಸೇತುವೆ ಕಾಮಗಾರಿ ನಿರ್ಮಾಣ ಬಗ್ಗೆ ಗ್ರಾಮಸ್ಥರು ಸೇತುವೆ ಕಾಮಗಾರಿ ತಡೆದು ತೀವ್ರವಾಗಿ ಪ್ರತಿಭಟನೆ ಮಾಡಲಾಯಿತು. ರಾಷ್ಟ್ರೀಯ ಹೆದ್ದಾರಿಗೆ ಸಂಬಂಧಿಸಿದ ಸಚಿವರು, ಅಧಿಕಾರಿಗಳು ಮತ್ತೀಕೆರೆ ಶೆಟ್ಟಿಹಳ್ಳಿ ಗ್ರಾಮದ ಬಳಿ ಸೇತುವೆ ಮಾಡಲು ಮುಂದಾಗಬೇಕು. ಈ ವಿಚಾರದಲ್ಲಿ ನ್ಯಾಯ ಸಿಗುವವರೆಗೆ ಹೋರಾಟ ಮಾಡಲು ಮುಂದಾಗುವುದು. ಸಂಬಂಧಪಟ್ಟವರು ಇತ್ತ ಗಮನ ಕೊಡಬೇಕು. ವಿಳಂಬ ನೀತಿ ಅನುಸರಿಸಿದ್ದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲು ಮುಂದಾಗುವುದಾಗಿ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಮೇಹರೀಶ್, ಹೈಕೋರ್ಟ್ ನ್ಯಾಯವಾದಿ ಪ್ರಕಾಶ್, ಗ್ರಾಮ ಪಂಚಾಯತಿ ಸದಸ್ಯ ಎಸ್. ಸಿ. ವಿಜೇಂದ್ರ, ಎಂ. ಕೆ. ಜಯರಾಜ್, ಭೀಮೇಶ್, ಧರ್ಮ ನಂದನ್, ಕಸಾಪ ಅಧ್ಯಕ್ಷ ಮತ್ತೀಕೆರೆ ಚಲುವರಾಜ್, ಮಂಜೇಶ್ ಬಾಬು.ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷರುಗಳಾದ ಶ್ರೀನಿವಾಸ್, ಉಮೇಶ್. ವಕೀಲ ಮನು ಮತ್ತಿತರರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು