ಕೊರೊನಾ: ಕಾರ್ಯನಿರ್ವಹಣೆಯ ಬಗ್ಗೆ ಜಾಗೃತಿ ಮೂಡಿಸಿದ ನಗರಸಭೆ
ಚನ್ನಪಟ್ಟಣ:ಜು./೨೦/೨೦/ಸೋಮವಾರ. ನಗರದ ಪುರಭವನ ಮತ್ತು ಹೊರ ಆವರಣದಲ್ಲಿ ಪೌರ ಸೇವಾ ನೌಕರರಿಗೆ, ಸೇವಾ ಸಿಬ್ಬಂದಿಗೆ, ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಶಿಕ್ಷಕಿಯರಿಗೆ ಕೋವಿಡ್-೧೯ರ ನಿರ್ವಹಣೆ ಹಾಗೂ ಸೋಂಕಿತರನ್ನು ಯಾವ ರೀತಿಯಲ್ಲಿ ಗುರುತಿಸುವುದು, ಅದೇ ರೀತಿಯಲ್ಲಿ ಅವರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸುವ ಬಗ್ಗೆ, ಮುನ್ನೆಚ್ಚರಿಕೆ ಕುರಿತು ಇಲಾಖೆಯ ನಿಯಮದ ಪ್ರಕಾರ ತರಬೇತಿ ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ನಗರ ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ಕೋವಿಡ್-೧೯ ಹರಡುವಿಕೆಯ ಪ್ರಮಾಣ ಹೆಚ್ಚಾಗುತ್ತಿದ್ದು, ಇದರ ನಿಯಂತ್ರಣ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ 283 ನಗರ ಸ್ಥಳೀಯ ಸಂಸ್ಥೆಗಳು (ಮಹಾನಗರ ಪಾಲಿಕೆಗಳು ಮತ್ತು ಬಿ.ಬಿ.ಎಂ.ಪಿ ಹೊರತು ಪಡಿಸಿ) ನಗರ ಸಭೆಗಳಲ್ಲಿನ-59, ಪುರಸಭೆಗಳಲ್ಲಿ ೧೧೬, ಪಟ್ಟಣ ಪಂಚಾಯಿತಿಗಳಲ್ಲಿ ೯೮ ರಲ್ಲಿ ರಚಿಸಲಾಗಿರುವ ವಾರ್ಡ್ ಮಟ್ಟದ ಕಾರ್ಯಾಚರಣೆ ಪಡೆ (Wಐಖಿಈ) ಹಾಗೂ ಬೂತ್ ಮಟ್ಟದ ಸಮಿತಿಗಳ(ಃಐಅ) ಸದಸ್ಯರುಗಳಿಗೆ ಸಾಮಾರ್ಥ್ಯಾಭಿವೃದ್ಧಿ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಸರ್ಕಾರವು ಈಗಾಗಲೇ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುತ್ತದೆ. ಆದಾಗ್ಯೂ ಸಹ ಕೊರೊನಾ ವೈರಸ್ ಹರಡುವಿಕೆಯ ಸರಣಿ ನಿರ್ಬಂಧಿಸಲು ವಾರ್ಡ್ ಮತ್ತು ಭೂತ್ ಮಟ್ಟದಲ್ಲಿ ಸಭೆಗಳನ್ನು ಏರ್ಪಡಿಸಬೇಕು.
ಇದನ್ನು ಯಾವ ಯಾವ ರೀತಿಯಲ್ಲಿ ಸಂಘಟಿಸಬೇಕು ಎಂಬುದರ ಬಗ್ಗೆ ಸ್ಥಳೀಯ ಪೌರ ಸೇವಾ ನೌಕರರಿಗೆ ವೀಡಿಯೋ ಪ್ರದರ್ಶನ ಮಾಡುವ ಮೂಲಕ ಅರಿವು ಮೂಡಿಸಲಾಯಿತು.
ಇದನ್ನು ಕ್ರಿಯಾತ್ಮಕವಾಗಿ ಜಾರಿಗೊಳಿಸಿ ಕೋವಿಡ್-೧೯ ಅಷ್ಟೇ ಅಲ್ಲ, ಬೇರೆ ಬೇರೆ ಸಾಂಕ್ರಾಮಿಕ ರೋಗಗಳನ್ನು ಕ್ರಮಬದ್ಧವಾಗಿ ನಿರ್ವಹಿಸುವ ಒಂದು ಕೆಲಸವನ್ನು ಮಾಡಬೇಕು ಎಂಬುದನ್ನು ಮನವರಿಕೆ ಮಾಡಿಕೊಡಲಾಯಿತು.
ಈ ಕಾರ್ಯ ಮಾಡುವುದರ ಸಂದರ್ಭದಲ್ಲಿ ಕಾರ್ಮಿಕರೂ ಸಹ ತಮ್ಮ ತಮ್ಮ ಆರೋಗ್ಯ ಮತ್ತು ಶುಚಿತ್ವದ ಕಡೆಗೆ ಗಮನಹರಿಸಬೇಕು. ಇದರಲ್ಲಿ ಸಾರ್ವಜನಿಕರ ಸಹಕಾರ ಬಹಳ ಮುಖ್ಯ, ಅದನ್ನೂ ರೂಢಿಸಿಕೊಳ್ಳಬೇಕು ಎಂದು ಸೂಚನೆ ನೀಡಲಾಯಿತು.
ಸಂದರ್ಭದಲ್ಲಿ ಪೌರಾಯುಕ್ತ ಶಿವನಾಂಕಾರಿಗೌಡ, ಆರೋಗ್ಯ ನಿರೀಕ್ಷಕರು, ಕಂದಾಯ ನಿರೀಕ್ಷಕರು, ತಾಂತ್ರಿಕ ವಿಭಾಗದ ಎಲ್ಲರೂ ಉಪಸ್ಥಿತರಿದ್ದು ವೀಡಿಯೋದಲ್ಲಿ ಬರುವ ವಿಷಯಗಳನ್ನು ಗಮನಿಸಿ ಕೊಂಡರು. ನಗರಸಭೆಯ ಮಾಜಿ ಸದಸ್ಯರು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು