Tel: 7676775624 | Mail: info@yellowandred.in

Language: EN KAN

    Follow us :


ಸಿ ಪಿ ಯೋಗೇಶ್ವರ್ ವಿಧಾನ ಪರಿಷತ್ ಆಯ್ಕೆ, ಬೆಂಬಲಿಗರಲ್ಲಿ ಉತ್ಸಾಹ

Posted date: 22 Jul, 2020

Powered by:     Yellow and Red

ಸಿ ಪಿ ಯೋಗೇಶ್ವರ್ ವಿಧಾನ ಪರಿಷತ್ ಆಯ್ಕೆ, ಬೆಂಬಲಿಗರಲ್ಲಿ ಉತ್ಸಾಹ

ಚನ್ನಪಟ್ಟಣ:ಜು/೨೨/೨೦/ಬುಧವಾರ. ಕಳೆದ ವಿಧಾನಸಭೆ ಚುನಾವಣೆಯ ನಂತರ ಒಂದಲ್ಲಾ ಒಂದು ರೀತಿಯಲ್ಲಿ ಸೋಲನ್ನೇ ಅನುಭವಿಸಿ‌ದ ತಾಲ್ಲೂಕಿನ ಮಾಜಿ ಶಾಸಕ, ಕರ್ನಾಟಕ ಸರ್ಕಾರದ ಮಾಜಿ ಸಚಿವ, ತಾಲ್ಲೂಕಿನ ನೀರಾವರಿ ಹರಿಕಾರ ಎಂದೇ ಬಿಂಬಿತವಾಗಿರುವ ಸಿ ಪಿ ಯೋಗೇಶ್ವರ್ ರವರನ್ನು ರಾಜ್ಯ ಸರ್ಕಾರದ ಶಿಫಾರಸ್ಸು ಮೇರೆಗೆ ರಾಜ್ಯಪಾಲ ವಜುಭಾಯಿ ಪಟೇಲ್ ರವರು ವಿಧಾನ ಪರಿಷತ್ ನೂತನ ಸದಸ್ಯರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.


ಸಿ ಪಿ ಯೋಗೇಶ್ವರ್ ರವರ ಜೊತೆಯಲ್ಲೇ ಕಳೆದ ವಿಧಾನ ಸಭೆಯ ಚುನಾವಣೆಯ ನಂತರ ಬಹುತೇಕ ಯೋಗೇಶ್ವರ್ ರವರ ಕೆಲವು ಗೆಲುವಿಗೆ ಅಡ್ಡಗಾಲಾಗಿದ್ದ ಅಡಗೂರು ಹೆಚ್ ವಿಶ್ವನಾಥ್, ಭಾರತಿಶೆಟ್ಟಿ, ಶಾಂತರಾಮ ಬುಡ್ನಾಸಿದ್ಧಿ ಮತ್ತು ಡಾ ತಲ್ವಾರ್ ಸಾಬಣ್ಣ ನವರನ್ನು ಸಹ ವಿಧಾನ ಪರಿಷತ್ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಿಸಲಾಗಿದೆ.


ಕಳೆದ ಲೋಕಸಭಾ ಕ್ಷೇತ್ರ ಮತ್ತು ವಿಧಾನಸಭೆಯಲ್ಲಿ ಸೋಲು ಅನುಭವಿಸಿದ್ದ ಸಿಪಿವೈ, ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಟಿಕೆಟ್ ಆಕಾಂಕ್ಷಿಯಾಗಿದ್ದರು. ಮಾಜಿ ಸಚಿವ ಅಡಗೂರು ಹೆಚ್ ವಿಶ್ವನಾಥ್ ರವರೇ ಹಠದಿಂದ ಟಿಕೆಟ್ ಪಡೆದಿದ್ದರಿಂದ ಒಂದು ರೀತಿಯಲ್ಲಿ ಅಲ್ಲೂ ಸಹ ಸೋಲನ್ನನುಭವಿಸಿದರು. ತದ ನಂತರ ಮೊದಲ ಹಂತದ ವಿಧಾನ ಪರಿಷತ್ ನಾಮ ನಿರ್ದೇಶನದಲ್ಲಿಯೂ ಸಹ ಇದೇ ವಿಶ್ವನಾಥ್ ರವರ ಚಿತಾವಣೆಯಿಂದ ನಾಮ ನಿರ್ದೇಶನಗೊಳ್ಳದೆ, ಕೆಲವೇ ಕ್ಷಣಗಳಲ್ಲಿ ಮಂತ್ರಿ ಪದವಿಯನ್ನು ತಪ್ಪಿಸಿಕೊಂಡಿದ್ದರು.


ಇದರಿಂದ *ಸ್ವಲ್ಪ ಮಂಕಾಗಿದ್ದ ಸಿಪಿವೈ ಆರ್ ಎಸ್ ಎಸ್ ಸರಸಂಘದ ನಾಯಕರು, ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ಬಿಜೆಪಿ ಪಕ್ಷವು ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಿಯಲು ಇವರ ಸಮ್ಮುಖದಲ್ಲಿ ಕರೆತಂದಿದ್ದ ಕೆಲ ಮಂತ್ರಿಮಹೋದಯರನ್ನು ಹೊರತುಪಡಿಸಿ ಬೇರೆಲ್ಲಾ ನಾಯಕರಿಂದ ದೂರ ಉಳಿದಿದ್ದರು.* ಕೊರೊನಾ ಸಮಯದಲ್ಲೂ ಸಹ ಸ್ಥಳೀಯ ಮತದಾರರ ಕಷ್ಟಕ್ಕೂ ಸ್ಪಂದಿಸದೇ ಬೆಂಗಳೂರಿನಲ್ಲೇ ಉಳಿದಿದ್ದರು. ಆಕಸ್ಮಾತ್ ನಗರಕ್ಕೆ ಬಂದಾಗ ತಮ್ಮ ಆತ್ಮೀಯರು, ಕೆಲ ಬೆಂಬಲಿಗರು, ಪಕ್ಷದ ಬೆಂಬಲಿಗರನ್ನು ಬಿಟ್ಟರೆ ಬೆರಳೆಣಿಕೆ ಮಂದಿಯ ಸಾವಿಗೆ ಅಷ್ಟೇ ಬಂದು ಹೋಗಿದ್ದರು.


ಜಿಲ್ಲಾ ಪದಾಧಿಕಾರಿಗಳನ್ನು ಇತ್ತೀಚೆಗೆ ಬದಲಾಯಿಸಿದ ನಂತರ ತಾಲ್ಲೂಕಿನ ಪದಾಧಿಕಾರಿಗಳನ್ನು, ಅವರ ಸಮ್ಮುಖದಲ್ಲಿ ಬದಲಾಯಿಸಿದ್ದರು. ಬಿಜೆಪಿ ನಾಯಕನಾಗಿ ಹಾಗೂ ವೈಯುಕ್ತಿಕವಾಗಿ ತಮ್ಮದೇ ವರ್ಚಸ್ಸು ಹೊಂದಿರುವುದರಿಂದ, ಅವರಿಗೆ ಅಧಿಕಾರವೂ ಇಲ್ಲದ್ದರಿಂದ, ಬಹುತೇಕ ಅವರ ಹಿಂಬಾಲಕರೆಲ್ಲರೂ ಸಾಮಾಜಿಕ ಜಾಲತಾಣ ಹೊರತುಪಡಿಸಿ, ಸಾರ್ವಜನಿಕವಾಗಿ ಮುಗುಮ್ಮಾಗಿ ಉಳಿದಿದ್ದರು. ಈಗ ವಿಧಾನ ಪರಿಷತ್ ಸದಸ್ಯರಾಗಿ ಹೊರಹೊಮ್ಮಿದ ನಂತರ ಇವರೆಲ್ಲರಲ್ಲೂ  ಹಸಿವು ತಾಳಾರದೆ ಬಿಲದಿಂದ ಹೊರಬಂದ ಹಾವಿನಂತಾಗಿರುವುದು ಸುಳ್ಳಲ್ಲ.


*ಕೇವಲ ವಿಧಾನ ಪರಿಷತ್ ಸದಸ್ಯರಾಗಿ ಉಳಿಯುವುದಿದ್ದರಷ್ಟೇ ಆಗಿದ್ದರೆ, ಸಿಪಿವೈ ಯಾವುದೇ ಕಾರಣಕ್ಕೂ ಇದಕ್ಕೆ ಒಪ್ಪಿಕೊಳ್ಳುತ್ತಿರಲಿಲ್ಲ. ಇದರ ಹಿಂದೆ ರಾಷ್ಟ್ರೀಯ,  ರಾಜ್ಯ ಬಿಜೆಪಿ ಪಕ್ಷದ ಧುರೀಣರು ಹಾಗೂ ಆರ್ ಎಸ್ ಎಸ್ ನಾಯಕರು ಒಂದು ದೊಡ್ಡ ಬದಲಾವಣೆ ಬಯಸಿಯೇ ಸಿಪಿವೈ ಗೆ ಸ್ಥಾನ ನೀಡಿದ್ದಾರೆ. ಕೇವಲ ಕೆಲವೇ ದಿನಗಳಲ್ಲಿ (ಕೊರೊನಾ ಆಜೂಬಾಜೂ) ಮಂತ್ರಿ ಪದವಿ, ಜಿಲ್ಲಾ ಉಸ್ತುವಾರಿ ಹಾಗೂ ಒಂದು ಪಕ್ಷ ಮತ್ತು ಆ ಪಕ್ಷದ ನಾಯಕರ ವಿರುದ್ಧ ಕಾರ್ಯಾಚರಣೆಗೆ ಇಳಿಸಲು ನಿಗೂಢ ತಂತ್ರ ಎಣೆಯುವ ಸಲುವಾಗಿಯೇ ಅವರಿಗೆ ಈ ಸ್ಥಾನ ನೀಡಲಾಗಿದೆ ಎಂದೇ ವ್ಯಾಖ್ಯಾನಿಸಬಹುದಾಗಿದೆ.*


ಆದೇಶದ ನಂತರ ರಾಮನಗರ ಜಿಲ್ಲಾ ಮತ್ತು ಚನ್ನಪಟ್ಟಣ ತಾಲ್ಲೂಕಿನಾದ್ಯಂತ ಅವರ ಬೆಂಬಲಿಗರು ಮತ್ತು ಪಕ್ಷದ ಧುರೀಣರು ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑