ರಾಜಕೀಯ ಟೀಕೆಯನ್ನು ರಾಜಕೀಯವಾಗಿ ಎದುರಿಸಬೇಕು, ವೈಯುಕ್ತಿಕ ಟೀಕೆ ಸಲ್ಲ. ದಾಖಲೆ ತೋರಿಸಿ ಟೀಕಿಸಲಿ ರಾಂಪುರ ಮಲ್ಲೇಶ್
ಚನ್ನಪಟ್ಟಣ:ಜು/29/20/ಬುಧವಾರ. ನಾನು ವೈಯುಕ್ತಿಕವಾಗಿ ಯಾರನ್ನೂ ತೆಗಳಿಲ್ಲ, ಜನಪ್ರಿಯ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಯವರ ಪರ ಮಾತನಾಡಿದ್ದೇನೆ, ಆದರೆ ಬಿಜೆಪಿ ಯವರು ನನ್ನನ್ನು ವೈಯುಕ್ತಿಕವಾಗಿ ತೇಜೋವಧೆ ಮಾಡಿರುವುದು ತಪ್ಪು. ಅವರು ನನ್ನ ಬಗ್ಗೆ ಸುಳ್ಳು ಆರೋಪಗಳನ್ನು ಹೊರಿಸಿದ್ದಾರೆ, ಅವರ ಆರೋಪಗಳಲ್ಲಿ ಹುರುಳಿಲ್ಲ. ನಾನು ಎರಡು ಸರ್ಕಾರಿ ಹುದ್ದೆಗಳನ್ನು ಏಕಕಾಲದಲ್ಲಿ ನಿರ್ವಹಿಸಿಲ್ಲ. ಬಡ್ತಿ ಮತ್ತು ಪ್ರಶಸ್ತಿಗಳು ನನ್ನ ಪ್ರಾಮಾಣಿಕ ಸೇವೆಗೆ ಸಂದಿರುವಂತಹವು. ನಾನು ಅಪ್ರಮಾಣಿಕ ಎನ್ನುವುದಕ್ಕೆ ಇವರ ಬಳಿ ದಾಖಲೆ ಇದ್ದರೆ ತಂದು ಆಪಾದಿಸಲಿ. ಆಗ ನಾನು ತಲೆ ಬಾಗಿಸುತ್ತೇನೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಂಪುರ ಮಲ್ಲೇಶ್ (ರೈಲ್ವೇ ಮಲ್ಲೇಶ್) ಬಿಜೆಪಿ ಮುಖಂಡರ ಆಪಾದನೆಗೆ ಉತ್ತರಿಸಿದ ಪರಿ ಇದು.
ಅವರು ನಿನ್ನೆ ದಿನ ಸ್ಥಳೀಯ ಬಿಜೆಪಿ ಮುಖಂಡರು ಆರೋಪ ಮಾಡಿದ ಹಿನ್ನೆಲೆಯಲ್ಲಿ ನಗರದ ಯೂನಿಯನ್ ಬ್ಯಾಂಕ್ ನ ಕಟ್ಟಡದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.
ರೈಲ್ವೇ ಪೋಲಿಸ್ ಇಲಾಖೆಯಲ್ಲಿ ನನ್ನ ಬೆಳವಣಿಗೆ ಸಹಿಸಲಾರದೆ ಯಾರೋ ಕಿಡಿಗೇಡಿಗಳು ನನ್ನ ವಿರುದ್ದ ಸುಳ್ಳು ಸುದ್ದಿ ಹಬ್ಬಿಸಿದ್ದರು. ಸುದ್ದಿ ಹಬ್ಬಿಸಿದವರ ವಿರುದ್ದ ಈಗಾಗಲೇ ನ್ಯಾಯಾಲಯದ ಮೆಟ್ಟಿಲೇರಿದ್ದೇನೆ. ಸುಳ್ಳು ಸುದ್ದಿಯನ್ನೆ ನಿಜ ಎಂದು ನಂಬಿ ಬಿಜೆಪಿ ಪಕ್ಷದ ಸ್ಥಳೀಯ ಮುಖಂಡರು ನನ್ನನ್ನು ವೈಯುಕ್ತಿಕವಾಗಿ ಟೀಕಿಸಿರುವುದನ್ನು ಸಹಿಸಲಾಗುವುದಿಲ್ಲ ಎಂದರು. ನಾನು ರಾಜಕೀಯವಾಗಿ ಟೀಕಿಸಿದ್ದೇನೆಯೆ ವಿನಹ ಯಾರನ್ನೂ ವೈಯುಕ್ತಿಕವಾಗಿ ಟೀಕಿಸಿಲ್ಲ. ಅವರು ಸಹ ರಾಜಕೀಯವಾಗಿ ಟೀಕಿಸಲಿ, ವೈಯುಕ್ತಿಕವಾಗಿ ಟೀಕಿಸುವುದು ಎಷ್ಟು ಸರಿ ಎಂದರು. ಆರ್ ಎನ್ ಮಲವೇಗೌಡರಿಗೆ ನನ್ನ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಅವರಂತೆ ಅಧಿಕಾರದಾಸೆಗೆ ಪಕ್ಷಾಂತರ ಮಾಡಿಲ್ಲ. ನರೆಗಾ ದುರುಪಯೋಗ ಮಾಡಿದ್ದಾರೆ ಎಂದು ಹೇಳಿದ್ದಾರೆ. ದುರುಪಯೋಗದ ಒಂದೇ ಒಂದು ಪ್ರಕರಣ ತೋರಿಸಲಿ ಎಂದರು.
ನಾನು ಯಾವುದೇ ಕಾರಣಕ್ಕೂ ಎರಡು ಹುದ್ದೆ ಹೊಂದಿರಲಿಲ್ಲ, ಸಸ್ಪೆಂಡ್ ಆಗಿಲ್ಲ. ರೈಲ್ವೆ ಇಲಾಖೆಯು ನನ್ನ ಕೆಲಸ ಮೆಚ್ಚಿ ಪ್ರಶಸ್ತಿ ಮತ್ತು ಅವಾರ್ಡ್ ನೀಡಿದ್ದಾರೆ. ಇದರಲ್ಲಿ ಯಾವುದೇ ಲೋಪವಾಗಿಲ್ಲ. ನನ್ನದು ಸುಳ್ಳು ಎಂದಾದರೆ ಆರೋಪ ಮಾಡಿರುವರು ಸೂಕ್ತ ದಾಖಲೆ ತಂದು ಮಾತನಾಡಲಿ. ನಾನು ವೈಯುಕ್ತಿಕವಾಗಿ ಮಾತನಾಡಿಲ್ಲ, ಮಾತನಾಡುವುದು ಇಲ್ಲ. ರಾಜಕೀಯವಾಗಿ ಎದುರಿಸಲಾಗದೆ ವೈಯುಕ್ತಿಕವಾಗಿ ತೇಜೋವಧೆಗಿಳಿದಿರುವುದು ಅವರ ರಾಜಕೀಯ ನಡೆಯನ್ನು ತೋರಿಸುತ್ತದೆ. ಮೊದಲು ಇದನ್ನು ಬಿಡಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದಪ್ಪ, ದೊಡ್ಡಯ್ಯ ಇದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು