Tel: 7676775624 | Mail: info@yellowandred.in

Language: EN KAN

    Follow us :


ಅಯೋಧ್ಯೆಯಲ್ಲಿ ಶಿಲನ್ಯಾಸ, ತಾಲ್ಲೂಕಿನಲ್ಲಿ ಸಂಭ್ರಮ

Posted date: 05 Aug, 2020

Powered by:     Yellow and Red

ಅಯೋಧ್ಯೆಯಲ್ಲಿ ಶಿಲನ್ಯಾಸ, ತಾಲ್ಲೂಕಿನಲ್ಲಿ ಸಂಭ್ರಮ

ಚನ್ನಪಟ್ಟಣ:ಆ/05/20/ಬುಧವಾರ. ರಾಮ ರಾಮ ಜಯರಾಮ, ಜೈಶ್ರೀರಾಮ, ಸೀತಾರಾಮ ಜೈ ಎಂಬ ಘೋಷಣೆಗಳು, ನಗರ‌ ಮತ್ತು ಗ್ರಾಮಾಂತರ ಪ್ರದೇಶದ ಹಲವಾರು ದೇವಾಲಯಗಳಲ್ಲಿ, ಮೊಳಗುವ ಮೂಲಕ ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ನ ದೇಗುಲದ ಭೂಮಿ ಪೂಜೆಗನುಸಾರವಾಗಿ, ರಾಮನ ಭಕ್ತರನೇಕರು ಇಂದು ಶ್ರೀರಾಮ ನ ಘೋಷಣೆ ಕೂಗುವ ಮೂಲಕ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿದರು.


ಉತ್ತರ ಪ್ರದೇಶ ರಾಜ್ಯದಲ್ಲಿರುವ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಇಂದು ವೈಭವದ ರಾಮಮಂದಿರ ನಿರ್ಮಾಣಕ್ಕೆ  ಭೂಮಿಪೂಜೆ ನೆರವೇರಿದ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಹಿಂದೂಗಳು ವಿಶೇಷವಾಗಿ ಶ್ರೀರಾಮ ಭಕ್ತರು ಸಂಭ್ರಮಾಚರಣೆ ನಡೆಸಿದರು.

ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಸಂಭ್ರಮಾಚರಣೆ ನಡೆಸಿದ ರಾಮಭಕ್ತರು, ವಿವಿಧ ದೇವಾಲಯಗಳಲ್ಲಿ ಶ್ರೀರಾಮನ ಭಾವಚಿತ್ರವಿರಿಸಿ, ಪೂಜೆ ಸಲ್ಲಿಸಿ,ರಾಮಮಂದಿರ ನಿರ್ಮಾಣ ಕಾರ್ಯವನ್ನು ಸ್ವಾಗತಿಸಿದರು. ಇದೇ ವೇಳೆ ಜೈಶ್ರೀರಾಮ್, ಪ್ರಧಾನಿ ನರೇಂದ್ರ ಮೋದಿ, ಅಡ್ವಾಣಿ, ಯೋಗಿ ಆದಿತ್ಯನಾಥ ಅವರಿಗೆ ಜಯವಾಗಲಿ ಎಂದು ಜಯಘೋಷ ಮೊಳಗಿಸಿದರು.


ಇನ್ನು ರಾಮಮಂದಿರ ಭೂಮಿಪೂಜೆಯ ಹಿನ್ನೆಲೆಯಲ್ಲಿ ತಾಲೂಕಿನ ಇತಿಹಾಸ ಪ್ರಸಿದ್ಧ ಕೆಂಗಲ್ ಆಂಜನೇಯ ಸೇರಿದಂತೆ ಬಹುತೇಕ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಕೂಡ್ಲೂರು ಶ್ರೀರಾಮದೇವರ ದೇವಾಲಯ, ದೇವರಹೊಸಹಳ್ಳಿ ಯ ಸಂಜೀವರಾಯ ದೇವಾಲಯ, ಕೋಡಂಬಳ್ಳಿ, ಹೊಂಗನೂರು ಗ್ರಾಮ ಸೇರಿದಂತೆ ಹನುಮಾನ್ ದೇವಾಲಯಗಳು, ವಿವಿಧೆಡೆ ಇರುವ ರಾಮಮಂದಿರದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಿದವು.


ನಗರದಲ್ಲಿ ಐದುನೂರು ಲಾಡು ವಿತರಣೆ: ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಿದ ಹಿನ್ನೆಲೆಯಲ್ಲಿ ನಗರದ ಕೋದಂಡರಾಮ ಬಡಾವಣೆಯ ನಿವೃತ್ತ ಬ್ಯಾಂಕ್ ಅಧಿಕಾರಿ ರಾಮಚಂದ್ರು ಮತ್ತವರ ಪುತ್ರ ಹಿಂಜಾವೆ ತಾಲೂಕು ಸಂಚಾಲಕ ಧನಂಜಯ ರವರು ಐದುನೂರು ಮಂದಿ ಭಕ್ತರಿಗೆ ಲಾಡು ವಿತರಿಸುವ ಮೂಲಕ ಸಂತಸ ಹಂಚಿಕೊಂಡರು. ದೇವಾಲಯಗಳಲ್ಲದೆ ಮನೆಗಳಲ್ಲೂ ತಳಿರು ತೋರಣಗಳಿಂದ ಸಿಂಗರಿಸಿ ಮನೆಯ ಮುಂಭಾಗ ಶ್ರೀರಾಮನ ಭಾವಚಿತ್ರವಿರಿಸಿ, ದೀಪ ಬೆಳಗಿ ಪೂಜೆ ಸಲ್ಲಿಸುವ ಮೂಲಕ ರಾಮಜನ್ಮ ಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ಸಂಭ್ರಮ ವ್ಯಕ್ತಪಡಿಸಿದರು.


ಸಾಮೂಹಿಕ ಭಜನೆ: ರಾಮಮಂದಿರ ನಿರ್ಮಾಣದ ಅಂಗವಾಗಿ ತಾಲೂಕಿನ ಕೆಲ ಗ್ರಾಮಗಳಲ್ಲಿ ಭಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಮಂಗಳ ವಾದ್ಯಗಳೊಂದಿಗೆ ಭಾಗವತರು, ದಾಸರು, ಕಲಾವಿದರು ಭಜನೆ ಮಾಡುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರ ದೇವರ ಭಾವಚಿತ್ರ ಹಿಡಿದ ಭಕ್ತರು ಅವರೊಂದಿಗೆ ಭಜನೆ ಕಾರ್ಯದಲ್ಲಿ ದನಿಗೂಡಿಸುತ್ತಾ ಹೆಜ್ಜೆ ಇರಿಸಿದ್ದು ವಿಶೇಷ ವೆನಿಸಿತ್ತು.



ಜಾಲತಾಣದಲ್ಲಿ ಶುಭ ಕೋರಿದ ಯೋಗೇಶ್ವರ್

ನೂತನ ಮೇಲ್ಮನೆ ಸದಸ್ಯರಾದ ಸಿ ಪಿ ಯೋಗೇಶ್ವರ್ ರವರು ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ನೆರವೇರಿದ ಹಿನ್ನೆಲೆಯಲ್ಲಿ ಸಂಭ್ರಮ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣದ ಮೂಲಕ ಕಾರ್ಯಕ್ರಮಕ್ಕೆ ಶುಭ ಕೋರಿರುವ ಅವರು, ರಾಮಮಂದಿರ ನಿರ್ಮಾಣವಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.


ತಮ್ಮ ಅಧಿಕೃತ ಫೇಸ್‌ಬುಕ್, ವಾಟ್ಸ್‌ಆಪ್ ಹಾಗೂ ಟ್ವೀಟರ್‌ನಲ್ಲಿ ಈ ಬಗ್ಗೆ ಸಂದೇಶ ನೀಡಿರುವ ಯೋಗೇಶ್ವರ್, ಕೋಟ್ಯಾಂತರ ಭಾರತೀಯರ ಕನಸ್ಸು ಇದೀಗ ನನಸಾಗುತ್ತಿದ್ದು, ಮರ್ಯಾದ ಪುರುಷ ರಾಮನ ಸ್ಮರಣೆಗೆ ಭವ್ಯ ರಾಮಮಂದಿರ ತಲೆ ಎತ್ತುತಿದೆ. ಈ ಕಾರ್ಯ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಮಸ್ತರಿಗೆ ಅಭಿನಂದನೆ ತಿಳಿಸಿದ್ದಾರೆ.

ತಾಲ್ಲೂಕಿನಾದ್ಯಂತ ಬಿಜೆಪಿ ಮುಖಂಡರು, ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಪೂಜೆ ಸಲ್ಲಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑