ರೈತರನ್ನು ಅಲೆದಾಡಿಸಿದರೆ ಬಾರುಗೋಲು ಚಳುವಳಿ ನಡೆಸಬೇಕಾಗುತ್ತದೆ : ಕೆ.ಎಸ್. ಲಕ್ಷ್ಮಣಸ್ವಾಮಿ ಎಚ್ಚರಿಕೆ
ಕನಕಪುರ : ನಗರದ ಆರ್.ಇ.ಎಸ್. ಮೈದಾನದಲ್ಲಿ ರೈತಸಂಘ ಹಾಗೂ ಹಸಿರು ಸೇನೆ ವತಿಯಿಂದ ಹಮ್ಮಿಕೊಂಡಿದ್ದ ರೈತ ಜಾಗೃತಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು.
ಸಮಾವೇಶವನ್ನು ಉದ್ಘಾಟಿಸಿದ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್. ಲಕ್ಷ್ಮಣಸ್ವಾಮಿ ಮಾತನಾಡಿ ತಾಲೂಕು ಕಚೇರಿ ಮತ್ತು ಕೃಷಿ ಇಲಾಖೆ ಸೇರಿದಂತೆ ಎಲ್ಲ ಇಲಾಖೆಯಲ್ಲಿ ರೈತರನ್ನು ತಮ್ಮ ಕೆಲಸಗಳಿಗೆ ಅಲೆದಾಡಿಸುವ ಕೆಲಸ ನಡೆಯುತ್ತಿದೆ ಇನ್ನೂ ಮುಂದೆ ರೈತರನ್ನು ಅಲೆದಾಡಿಸಿದರೆ ಹಿಂದಿನ ಬಾರುಗೋಲು ಚಳುವಳಿಯನ್ನು ಮುಂದುವರೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ರೈತರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಆದರೆ ಇಲಾಖೆಯ ಅಧಿಕಾರಿಗಳು ರೈತರ ಸಮಸ್ಯೆಗೆ ಸ್ವಂದಿಸುತ್ತಿಲ್ಲ ಇದರಿಂದ ಪ್ರತಿನಿತ್ಯ ರೈತರು ತಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ಅಲೆದಾಡುವ ಸ್ಥಿತಿ ನಿರ್ಮಾಣ ಗೊಂಡಿದೆ ಇನ್ನೂ ಮುಂದೆ ರೈತರನ್ನು ಅಲೆದಾಡಿಸಿದರೆ ಬಾರುಗೋಲು ಚಳುವಳಿ ಮುಂದುವರೆಸಬೇಕಾಗುತ್ತದೆ ಎಂದು
ತಿಳಿಸಿದರು.
ಸರಕಾರರೈತರಿಗೆ ಅನೇಕ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ ಯಾವ ಸಾಲವನ್ನು ಮನ್ನಾ ಮಾಡಿದ್ದಾರೆ ಎಂದು ರೈತರಿಗೆ ತಿಳಿಸುವ ಕೆಲಸವಾಗಬೇಕು, ರಯತರು ಸಾಲವನ್ನು ಮಾಡಿ ಬಡ್ಡಿ ಕಟ್ಟಲಾಗದೆ ಆತ್ಮಹತ್ಯೆಯ ದಾರಿಯನ್ನು ಮುಂದುವರೆಸಿದ್ದಾರೆ ಅದನ್ನು ನಿಲ್ಲಿಸುವ ಕೆಲಸವಾಗಬೇಕು, ಮಾಜಿ ಸಿ.ಎಂ. ಕುಮಾರಸ್ವಾಮಿ ಅವರು ನಮ್ಮ ಸರಕಾರವನ್ನು ಅಧಿಕಾರಕ್ಕೆ ತಂದರೆ ರೈತರ ಸಾಲವನ್ನು ಪೂರ್ಣ ಮನ್ನಾ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ ಅದನ್ನು ಯಾವ ರೀತಿ ಮನ್ನಾ ಮಾಡುತ್ತಾರೇ ಎಂಬುವುದನ್ನು ಜನರಿಗೆ ತಿಳಿಸುವ ಕೆಲಸವಾಗಬೇಕು ಎಂದು ಒತ್ತಾಯಿಸಿದರು.
ರಾಜ್ಯ ಕೃಷಿ ಪ್ರಶಸ್ತಿ ವಿಜೇತ ಕಿರಣಗೆರೆಜಗದೀಶ್ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ಅನೇಕ ತಂತ್ರಜ್ಞಾನಗಳು ಬರುತ್ತಿದೆ ಇದರಿಂದ ರೈತರಿಗೆ ವ್ಯವಸಾಯವನ್ನು ಮಾಡಲು ಸಾಧ್ಯವಾಗುತ್ತಿಲ್ಲ ಹಾಗಾಗಿ ರೈತರಿಗೆ ತರಬೇತಿಯ ಅವಶ್ಯಕತೆ ಇದೆ ಎಂದು ತಿಳಿಸಿದರು.
ರೈತರು ಬೆಳೆದ ಬೆಲೆಗೆ ಬೆಂಬಲ ಬೆಲೆ ನೀಡುವಂತೆ ಸರಕಾರವನ್ನು ಒತ್ತಾಯ ಮಾಡುವುದರ ಜತೆಗೆ ತಮ್ಮ ಕೃಷಿ ಕೆಲಸವನ್ನು ಮಾಡಲು ತಂತ್ರಜ್ಞಾನವನ್ನು ಬಳಸಿ ಕೊಂಡು ಮಾಡಬೇಕು ಸರಕಾರ ರೈತರು ಬೆಳೆದ ಬೆಲೆಗೆ ವೈಜ್ಞಾನಿಕ ಬೆಲೆಯನ್ನು ನಿಗದಿ ಮಾಡಿದರೆ ಆರ್ಥಿಕವಾಗಿ ಅಭಿವೃದ್ದಿ ಹೊಂದಲಿದ್ದಾರೆ ಎಂದು ಅಭಿಪ್ರಾಯಪಟ್ಟರು.
ರೈತ ಸಂಘದ ತಾಲೂಕು ಉಸ್ತುವಾರಿ ಅಧ್ಯಕ್ಷ ದುಂಡಯ್ಯ ಮಾತನಾಡಿ ತಾಲೂಕಿನಲ್ಲಿ ಇಲಾಖೆಯ ಅಧಿಕಾರಿಗಳು ಅಲೆದಾಡಿಸುವ ಕೆಲಸವನ್ನು ಮಾಡುತ್ತಿದ್ದಾರೆ ಅದನ್ನು ತಡೆಯುವ ಕೆಲಸವನ್ನು ಮೊದಲು ಮಾಡಬೇಕು ರೈತ ಸಂಘಟನೆಯನ್ನು ಮತ್ತಷ್ಟು ಬಲ ಪಡಿಸುವ ಕೆಲಸವನ್ನು ಮಾಡಬೇಕು ಸರಕಾರದ ಪೊಳ್ಳು ಭರವಸೆಗಳಿಗೆ ಕಿವಿಗೊಡದೆ ನಮ್ಮ ಹಕ್ಕುಗಳನ್ನು ಪಡೆದು ಕೊಳ್ಳಲು ಹೋರಾಟವನ್ನು ನಡೆಸಬೇಕು ಇಲ್ಲದಿದ್ದಾರೆ ನಮ್ಮ ಹಕ್ಕು ಸಿಗುವುದಿಲ್ಲ ಅದನ್ನು ರೈತರಲ್ಲಿ ಜಾಗೃತಿ ಮೂಡಿಸಲು ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಜಿಲ್ಲಾ ಕಾರ್ಯದರ್ಶಿ ಬೈರೇಗೌಡ ಮಾತನಾಡಿ ದೇಶಕ್ಕೆ ಅನ್ನ ನೀಡುವ ರೈತನ ಸ್ಥಿತಿ ಚಿಂತಜನಾಕವಾಗಿದೆ ರೈತರು ತಮ್ಮ ಕೃಷಿಯನ್ನು ಬೆಳೆಯುವುದನ್ನು ಬಿಟ್ಟರೆ ದೇಶದ ಆಹಾರ ಭದ್ರತೆ ಕುಂಠಿತವಾಗುತ್ತದೆ ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಳೆಯನ್ನು ಸರಕಾರ ನಿಗದಿ ಮಾಡುವುದರ ಜತೆಗೆ ಡಾ.ಸ್ವಾಮಿನಾಥನ್ ವರದಿಯನ್ನು ಕೂಡಲೇ ಜಾರಿ ಮಾಡಲೇ ಬೇಕು ಎಂದು ಆಗ್ರಹಿಸಿದರು.
ರಾಜ್ಯ ಪ್ರಧಾನಕಾರ್ಯದರ್ಶಿ ಡಾ.ಚೌಕಿಮಠ, ತಾಲೂಕು ಅಧ್ಯಕ್ಷ ಅನಂತ್ರಾವ್ಪ್ರಸಾದ್, ಸಂಘಟನಾಕಾರ್ಯದರ್ಶಿನಲ್ಲಹಳ್ಳಿಶ್ರೀನಿವಾಸ್, ರೈತ ಮುಖಂಡರಾದ ನಾಗಮ್ಮ, ಸುರೇಶ್, ಶಿವಲಿಂಗೇಗೌಡ, ರಾಜು, ನಾಗರಾಜು, ಶಿವಣ್ಣ, ಶಕುಂತಲಮ್ಮ, ಅಶೋಕ, ರಾಮಣ್ಣ, ಮಲ್ಲವೀರಯ್ಯ, ಜಯರಾಮು, ರಾಜು, ದೊಡ್ಡತಮ್ಮಯ್ಯಣ್ಣ ಉಪಸ್ಥಿತರಿದ್ದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು