Tel: 7676775624 | Mail: info@yellowandred.in

Language: EN KAN

    Follow us :


ಕುಡಿಕೆಯಲ್ಲಿ ಟೀ ಕೊಡುವ ಮೂಲಕ ಕುಂಬಾರರ ಬದುಕಿಗೆ ನೆರವಾದ ಕಲ್ಪತರು ಟೀ ಅಂಗಡಿ ಮಾಲೀಕ

Posted date: 12 Aug, 2020

Powered by:     Yellow and Red

ಕುಡಿಕೆಯಲ್ಲಿ ಟೀ ಕೊಡುವ ಮೂಲಕ ಕುಂಬಾರರ ಬದುಕಿಗೆ ನೆರವಾದ ಕಲ್ಪತರು ಟೀ ಅಂಗಡಿ ಮಾಲೀಕ

ಕುಡಿಕೆಯಲ್ಲಿ ಟೀ ಕೊಡುವ ಮೂಲಕ ಕುಂಬಾರರ ಬದುಕಿಗೆ ನೆರವಾದ ಕಲ್ಪತರು ಟೀ ಅಂಗಡಿ ಮಾಲೀಕ

ಚನ್ನಪಟ್ಟಣ:ಆ/12/20/ಬುಧವಾರ. ಆಧುನಿಕ ಜೀವನಕ್ಕೆ ಕಾಲಿಟ್ಟ ಮನುಜ ದಿನೆದಿನೇ ಉತ್ತಮ ಆರೋಗ್ಯಕ್ಕೆಂದೇ ಬಳಸುತ್ತಿದ್ದ ಮಣ್ಣಿನ ಮಡಿಕೆಗಳನ್ನು ಬದಿಗೊತ್ತಿ, ಸ್ಟೀಲ್, ಪ್ಲಾಸ್ಟಿಕ್ ಗೆ ಒಗ್ಗಿಕೊಂಡು ತನ್ನ ಆರೋಗ್ಯವನ್ನು ಹಾಳು ಮಾಡಿಕೊಳ್ಳುವುದರ, ಜೊತೆಗೆ ತಲತಲಾಂತರಿಂದ ಕುಲ ಕಸುಬನ್ನೇ ತನ್ನ ಜೀವನಕ್ಕಾಗಿ ರೂಪಿಸಿಕೊಂಡು ಬರುತ್ತಿದ್ದ, ಅನೇಕ ಕುಟುಂಬಗಳು ಬೀದಿಗೆ ಬರುವಂತಾಯಿತು. ಕೊರೊನಾ ಸಂದರ್ಭದಲ್ಲಿಯಂತೂ ಅವರನ್ನು ಕೇಳುವವರಿಲ್ಲದೆ ಅವರ ಬದುಕು ಮೂರಾಬಟ್ಟೆಯಾಯಿತು. ಇಂತಹ ಸಂದರ್ಭದಲ್ಲಿ ಕುಂಬಾರರಿಗೆ ಅನುಕೂಲವಾಗುವಂತೆ ಹಾಗೂ ಗ್ರಾಹಕರ ಆರೋಗ್ಯ ದೃಷ್ಟಿಯಿಂದಲೂ ಇಲ್ಲೊಬ್ಬ ಯುವಕ ಮಣ್ಣಿನ ಕುಡಿಕೆಗಳಲ್ಲಿ ಟೀ (ಲೆಮನ್ ಟೀ ಮಾತ್ರ) ನೀಡುವ ಮೂಲಕ ಮಾದರಿಯಾಗಿದ್ದಾನೆ.


ನಗರದ ಹೊರವಲಯದಲ್ಲಿರುವ ಸಾತನೂರು ರಸ್ತೆಯ ಹೌಸಿಂಗ್ ಬೋರ್ಡ್ ಬಳಿಯ ಕಲ್ಪತರು ಹೋಟೆಲ್ ಮುಂಭಾಗದಲ್ಲಿ ಇರುವ ಈ ಅಂಗಡಿಯ‌ನ್ನು ತಾಲ್ಲೂಕಿನ ನೇರಳೂರು ಗ್ರಾಮದ ಮರಿಸ್ವಾಮಿ ಎಂಬ ಯುವಕ, ಕಲ್ಪತರು ಹೋಟೆಲ್ ನ ಮಾಲೀಕ ವಿವೇಕ್ ಮಾರ್ಗದರ್ಶನದಲ್ಲಿ ಸಣ್ಣ ಕುಡಿಕೆಗಳ ಮೂಲಕ ಲೆಮನ್ ಟೀ ನೀಡುತ್ತಿದ್ದು, ಇದು ಇಂದಿನ ಕೊರೊನಾ ಸೋಂಕನ್ನು ತಡೆಯಲು ಸಹ ರೋಗ ನಿರೋಧಕ ಶಕ್ತಿಯಾಗಿ ಬಳಕೆಯಾಗುತ್ತಿದೆ, ಕಾಫಿಡೇ ಗೆ ಮುಗಿ ಬೀಳುತ್ತಿದ್ದ ಅನೇಕ ಯುವಕರು, ಹೆದ್ದಾರಿಯ ಪ್ರಯಾಣಿಕರು ಹಾಗೂ ಸ್ಥಳೀಯರು ಸಹ ಬಂದು ಟೀ ಸವಿಯುತ್ತಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವುದಾಗಿ ಮರಿಸ್ವಾಮಿ ಸಂತಸ ವ್ಯಕ್ತಪಡಿಸುತ್ತಾರೆ.


ಕುಡಿಕೆಯಲ್ಲಿ ಟೀ ಕೊಡುವ ಮೂಲಕ ಕುಂಬಾರರ ಬದುಕಿಗೆ ನೆರವಾದ ಕಲ್ಪತರು ಟೀ ಅಂಗಡಿ ಮಾಲೀಕ


ಮನುಷ್ಯ ಇತ್ತೀಚಿಗೆ ತನ್ನ ಅತ್ಯಮೂಲ್ಯ ‌ಆರೋಗ್ಯವನ್ನು ಗಣನೆಗೆ ತೆಗೆದುಕೊಳ್ಳದೆ ಯಂತ್ರಗಳ ಮೂಲಕವೇ ತನ್ನ ಆಧುನಿಕ ಜೀವನವನ್ನು ರೂಪಿಸಿಕೊಳ್ಳುತ್ತಿದ್ದು, ತನ್ನ ಆರೋಗ್ಯ ಹದಗೆಟ್ಟಾಗಲೂ ಸಹ ಯಂತ್ರದ (ಮೈ ಬಗ್ಗಿಸಿ ದುಡಿಯದೆ ಬೊಜ್ಜು ಕರಗಿಸಲು ಯಂತ್ರಗಳಿರುವ ಜಿಮ್) ಮೊರೆ ಹೋಗುತ್ತಿರುವುದು ದುರದೃಷ್ಟಕರ. ಆರೋಗ್ಯ ದೃಷ್ಟಿಯಿಂದ ಹಾಗೂ ಕುಲಕಸುಬಿನವರಿಗೆ ನೆರವಾಗುವ ಮೂಲಕ ಇಂತಹವರನ್ನು ಪ್ರೋತ್ಸಾಹಿಸಬೇಕು ಎಂದು ಗ್ರಾಹಕರಾದ ಭೂಹಳ್ಳಿ ಸುರೇಶ್, ನಂದೀಶ್, ರೋಹಿತ್, ಮಹೇಶ್, ಚೇತನ್ ಇನ್ನಿತರರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.


ಈ ಮೊದಲೇ ನಮ್ಮ ಕುಲಕಸುಬು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತೆ ನಡೆಯುತ್ತಿತ್ತು. ಕೊರೊನಾ ಸಂದರ್ಭದಲ್ಲಿ ಕೇಳುವವರೇ ಇರಲಿಲ್ಲ. ಇಂತಹ ಸಂದರ್ಭದಲ್ಲಿ ಪ್ರತಿನಿತ್ಯ ಕನಿಷ್ಠ ಮೂರುನೂರು ಕುಡಿಕೆಗಳನ್ನು ಖರೀದಿಸುವ ಮೂಲಕ ನಮಗೂ ನೆರವಾಗಿದ್ದಾರೆ. ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ಅವರ ಆರೋಗ್ಯ ದೃಷ್ಟಿಯಿಂದ ಪುರಾತನ ವಸ್ತುಗಳನ್ನು ಬಳಸಿದರೆ ಕುಲಕಸುಬು ಮತ್ತು ಆರೋಗ್ಯ ಎರಡೂ ಉಳಿಯಲು ಸಾಧ್ಯ ಎನ್ನುತ್ತಾರೆ ಕುಂಬಾರ ವೃತ್ತಿಯ ಬೇವೂರು ಗ್ರಾಮದ ಶ್ರೀನಿವಾಸ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑