ಚಾಲನೆಯಲ್ಲಿದ್ದಾಗಲೇ ಪಾರ್ಶ್ವವಾಯು, ಸಮಯ ಪ್ರಜ್ಞೆ ಮೆರೆದ ಚನ್ನಪಟ್ಟಣ ಮೂಲದ ಚಾಲಕ
ಸುಳ್ಯ/ಚನ್ನಪಟ್ಟಣ:ಆ/13/20/ಗುರುವಾರ. ಪುತ್ತೂರು ಡಿಪೋದ ಕೆ.ಎಸ್ ಆರ್.ಟಿ.ಸಿ.ಬಸ್ ( KA21 F0166) ಬೆಳಗ್ಗಿನ ಜಾವ ಪುತ್ತೂರಿನಿಂದ ಮೈಸೂರಿಗೆ ಪ್ರಯಾಣಿಕರನ್ನು ಕೊಂಡೊಯ್ದು ಪುನಃ ಸಂಜೆ ಹಿಂತಿರುಗುವ ವೇಳೆ ಜೋಡುಪಾಲ ಸಮೀಪಿಸುತ್ತಿದ್ದಂತೆ ಬಸ್ ಚಾಲಕ ಸದಾಶಿವ ಎಂಬವರು ಪಾರ್ಶವಾಯು ಬಾಧಿಸಿ ತೀರ್ವ ಅಸೌಖ್ಯಕ್ಕೊಳಗಾದರು. ಬಸ್ ನಲ್ಲಿ ಇದ್ದ ಪ್ರಯಾಣಿಕರ ಜೀವ ಮತ್ತು ಜೀವನವನ್ನು ಗಣನೆಗೆ ತೆಗೆದುಕೊಂಡ ಚಾಲಕ, ತಮ್ಮ ದೇಹಕ್ಕೆ ಪಾರ್ಶ್ವವಾಯು ತಗುಲಿದರೂ ಸಹ ಗಾಬರಿಯಾಗದೆ ಬಸ್ಸನ್ನು ಬದಿಗೆ ಸರಿಸಿ ನಿಲ್ಲಿಸಿ, ಪ್ರಯಾಣಿಕರ ಜೀವವನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಪಾರ್ಶ್ವವಾಯು ಆದ ಸಂದರ್ಭದಲ್ಲಿ ಧೈರ್ಯ ಕಳೆದುಕೊಳ್ಳದ ಚಾಲಕ ಬಸ್ಸನ್ನು ರಸ್ತೆ ಯ ಒಂದು ಬದಿಯಲ್ಲಿ ನಿಲ್ಲಿಸಿದ್ದು, ಬಸ್ ನಿಂತ ಕೂಡಲೇ ಚಾಲಕ ಶೀಟಿನಲ್ಲಿ ಕುಸಿದು ಬಿದ್ದದ್ದನ್ನು ಗಮನಿಸಿದ ನಿರ್ವಾಹಕ ಕೂಡಲೇ ಧಾವಿಸಿ ಅವರನ್ನು ಸಹಪ್ರಯಾಣಿಕರ ಸಹಕಾರ ದಿಂದ ಪಕ್ಕದಲ್ಲಿ ಮಲಗಿಸಿದರು. ತನ್ನ ಜೀವದ ಹಂಗು ತೊರೆದು ಬಸ್ಸಿನಲ್ಲಿದ್ದ 16 ಪ್ರಯಾಣಿಕರ ಜೀವ ರಕ್ಷಿಸುವಲ್ಲಿ ಯಶಸ್ವಿಯಾದದ್ದನ್ನು ಗಮನಿಸಿದ ನಿರ್ವಾಹಕ ಮತ್ತು ಪ್ರಯಾಣಿಕರು ನಿಟ್ಟುಸಿರು ಬಿಟ್ಟು, ಚಾಲಕ ಶೀಘ್ರವಾಗಿ ಗುಣಮುಖರಾಗಲೆಂದು ಸ್ಥಳದಲ್ಲಿಯೇ ಪ್ರಾರ್ಥನೆ ಸಲ್ಲಿಸಿರುವುದಾಗಿ ವರದಿಯಾಗಿದೆ.
ತದ ನಂತರ ನಿರ್ವಾಹಕ ಬಸ್ಸನ್ನು ಚಲಾಯಿಸಿಕೊಂಡು ಸುಳ್ಯಕ್ಕೆ ಬಂದಿದ್ದು ಹಿರಿಯ ಅಧಿಕಾರಿಗಳ ಸಹಕಾರದಿಂದ ಸುಳ್ಯದ ಆಸ್ಪತ್ರೆಯಲ್ಲಿ ಸದಾಶಿವ ರನ್ನು ಚಿಕಿತ್ಸೆಗೆ ಒಳಪಡಿಸಿರುತ್ತಾರೆ. ಎಂದು ತಿಳಿದುಬಂದಿದೆ. ಚಾಲಕನ ಈ ಸಮಯಪ್ರಜ್ಞೆ ಗೆ ಅಧಿಕಾರಿಗಳು ಹಾಗೂ ಪ್ರಯಾಣಿಕರು ಪ್ರಶಂಸೆ ವ್ಯಕ್ತಪಡಿಸಿದ್ದು, ನಮ್ಮ ಜೀವರಕ್ಷಿಸಿದ ಚಾಲಕರ ಆರೋಗ್ಯ ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಚಾಲಕ ಸದಾಶಿವ ರವರು ಚನ್ನಪಟ್ಟಣ ತಾಲ್ಲೂಕಿನ ಅಕ್ಕೂರು ಗ್ರಾಮದ ನಿವಾಸಿಯಾಗಿದ್ದು ಸದ್ಯ ಪುತ್ತೂರು ಕೆ ಎಸ್ ಆರ್ ಟಿ ಸಿ ಡಿಪೋ ದಲ್ಲಿ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಸಮಯ ಪ್ರಜ್ಞೆಯನ್ನು ತಾಲ್ಲೂಕಿನ ಕೆಎಸ್ಆರ್ಟಿಎಸ್ ಚಾಲಕ ಸಹೋದ್ಯೋಗಿಗಳು ಪ್ರಶಂಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು