ದೇಶ ಭಕ್ತಿ ಎಂಬುದು ನಿರಂತರವಾಗಿರಬೇಕು ವಕೀಲ ಶಿವಶಂಕರ್
ಚನ್ನಪಟ್ಟಣ:ಆ/15/20/ಶನಿವಾರ. ದೇಶ ಭಕ್ತಿ ಎಂಬುದು ಪ್ರತಿಯೊಬ್ಬ ಪ್ರಜೆಯಲ್ಲೂ ನಿರಂತರವಾಗಿರಬೇಕು, ಆಗಲೇ ನಮಗೆ ಸ್ವತಂತ್ರ ತಂದುಕೊಟ್ಟಂತಹ ಮಹನೀಯರಿಗೆ ನಾವು ಕೃತಘ್ನತೆ ಸಲ್ಲಿಸಲು ಸಾಧ್ಯ ಎಂದು ವಕೀಲ ಶಿವಶಂಕರ್ ತಿಳಿಸಿದರು.
ಅವರು ಇಂದು ಸ್ನೇಹ ಸಿಂಚನ ಕುಟುಂಬದ ವತಿಯಿಂದ ಪ್ರಪ್ರಥಮ ಬಾರಿಗೆ ನಗರದ ಪುಷ್ಪರತನ್ ಕಾಂಪ್ಲೆಕ್ಸ್ ನಲ್ಲಿ ಹಮ್ಮಿಕೊಂಡಿದ್ದ ಹೆಮ್ಮೆಯ ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ದೇಶ ಭಕ್ತಿ ಎಂಬುದು ದೇಶದ ಪ್ರತಿಯೊಬ್ಬ ನಾಗರೀಕರಲ್ಲೂ ರಕ್ತಗತವಾಗಿ ಬರಬೇಕು. ಶಾಲೆಯಲ್ಲಿ ಶಿಕ್ಷಕರು ಹಾಗೂ ಮನೆಗಳಲ್ಲಿ ಪೋಷಕರು ದೇಶದ ಇತಿಹಾಸ ಮತ್ತು ಪುರಾಣಗಳನ್ನು ಮಕ್ಕಳಿಗೆ ಬೋಧಿಸುವ ಮೂಲಕ ರಾಷ್ಟ್ರ ಪ್ರಜ್ಞೆಯನ್ನು ಮೂಡಿಸಬೇಕು ಎಂದು ಕರೆ ನೀಡಿದರು.
ವನಿತಾ ಸ್ಯಾರಿ ಸೆಲೆಕ್ಷನ್ ನ ವಿಜಯಕುಮಾರ್ ಗುಲೇಚಾ ರವರು ಮಾತನಾಡಿ ದೇಶ ಉದ್ದಾರವಾಗಲು ಯುವಶಕ್ತಿ ಅತ್ಯಮೂಲ್ಯ. ದೇಶಕ್ಕೆ ಅವರ ಕೊಡುಗೆ ಅಪಾರವಾಗಿ ಬೇಕಾಗಿದೆ. ಪ್ರಪಂಚದ ಎಲ್ಲಾ ದೇಶಗಳಿಗೆ ಹೋಲಿಸಿ ನೋಡಿದಾಗ ನಮ್ಮಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಅವರು ದೇಶದ ಸಂಪತ್ತು ಹಾಗೂ ಏಳ್ಗೆಗಾಗಿ ದುಡಿದರೆ ವಿಶ್ವದ ಭೂಪಟದಲ್ಲಿ ನಮ್ಮ ಭಾರತ ದೇಶ ಚಿರಸ್ಥಾಯಿಯಾಗಿ ಉಳಿಯಲಿದೆ ಎಂದರು.
ಸ್ನೇಹ ಸಿಂಚನ ಕುಟುಂಬದ ಮುಖ್ಯಸ್ಥ ಸತೀಶ್ ಕೆಲಗೆರೆ ಮಾತನಾಡಿ ನಮ್ಮೆಲ್ಲರ ಸ್ನೇಹಿತರ ಸಹಕಾರದಿಂದ ಕೊರೊನಾ ಲಾಕ್ಡೌನ್ ಸಮಯದಲ್ಲಿ 39 ದಿನಗಳ ಕಾಲ ಎರಡು ಹೊತ್ತು ಹಸಿದವರಿಗೆ ಅನ್ನ ನೀಡುವ ಮೂಲಕ ಸಮಾಜ ಸೇವೆಗೆ ಪಾದಾರ್ಪಣೆ ಮಾಡಿದ್ದೇವೆ. ಇನ್ನೂ ಮುಂದೆ ನಾಡು, ನುಡಿ, ರಾಷ್ಟ್ರಕ್ಕೆ ಸಂಬಂಧಿಸಿದ ಎಲ್ಲಾ ಹಬ್ಬಗಳನ್ನು ಆಚರಿಸಲಾಗುತ್ತದೆ. ಕೇವಲ ಆಡಂಬರಕ್ಕಾಗಿ ಆಚರಿಸದೆ ಬಡಬಗ್ಗರಿಗೆ ಸಹಾಯ ಮಾಡುವ ದೃಷ್ಟಿಯಿಂದ ಹಬ್ಬಗಳನ್ನು ಆಚರಿಸಲಾಗುವುದು ಎಂದರು.
ಕರ್ನಾಟಕ ಜಾನಪದ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಗೋ ರಾ ಶ್ರೀನಿವಾಸ, ಆಸರೆ ಸೇವಾ ಟ್ರಸ್ಟ್ ನ ಅಧ್ಯಕ್ಷ ರವಿಕುಮಾರ್ ಹಾಗೂ ಮಳೂರು ಗ್ರಾಮದ ಯೋಗೇಶ್ ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಪೂರ್ವಿಕಾ ಮೊಬೈಲ್ ಅಂಗಡಿಯ ಸಿಬ್ಬಂದಿಗಳು, ಲೋಕೇಶ್, ಕಿಟ್ಟಿ ಕಾರ್ನರ್ ಮಾಲೀಕ ಕಿಟ್ಟಿ, ಸಂದೀಪ್, ಬಾಲಾಜಿ ಜಾಧವ್, ಕುಮಾರ್, ಸತೀಶ್, ಮಧು ದೀಕ್ಷಿತ್, ರವಿ, ದಿನೇಶ ಚೆರ್ರಿ, ಅನಿಲ್, ಪಾಷಾ, ಪಾರ್ಥಸಾರಥಿ, ದಶರಥ ತಲ್ವಾರ್ ಮತ್ತಿತರರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು