ಯೋಗೇಶ್ವರ್ ಜನ್ಮದಿನದಂದು ಬೃಹತ್ ರಕ್ತದಾನ ಶಿಬಿರ. 200 ಕ್ಕೂ ಹೆಚ್ಚು ಮಂದಿಯಿಂದ ರಕ್ತದಾನ
ಚನ್ನಪಟ್ಟಣ:ಆ/29/20/ಶನಿವಾರ. ಕೊರೊನಾ ನಡುವೆಯು ಅದ್ದೂರಿಯಾಗಿ ಹುಟ್ಟಿದ ಹಬ್ಬ ಆಚರಣೆ ಮಾಡಿಕೊಳ್ಳುತ್ತಿರುವುದಕ್ಕೆ ನನಗೆ ವೈಯುಕ್ತಿಕವಾಗಿ ನೋವಾಗಿದೆ. ಆದರೆ ತಾಲ್ಲೂಕು ಮತ್ತು ಜಿಲ್ಲೆಯ ಅಭಿಮಾನಿಗಳ ಅಭಿಮಾನಕ್ಕೆ ನಾನು ತಲೆಬಾಗಿ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಸಿ ಪಿ ಯೋಗೇಶ್ವರ್ ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆ, ಹುತಾತ್ಮರ ದಿನಾಚರಣೆಯೊಟ್ಟಿಗೆ ತಮ್ಮ57 ನೇ ಜನ್ಮ ದಿನಾಚರಣೆಯನ್ನು ರಾಷ್ಟ್ರೋತ್ಥಾನ ಸಂಸ್ಥೆ, ತಾಲ್ಲೂಕಿನ ಬಿಜೆಪಿ ಮುಖಂಡರು ಹಾಗೂ ತಮ್ಮ ಅಭಿಮಾನಿ ಬಳಗದೊಂದಿಗೆ ಏರ್ಪಡಿಸಿದ್ದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡು ಮಾತನಾಡಿದರು.
ಕುಟುಂಬ ಹಾಗೂ ತಾಲ್ಲೂಕಿನ ಮುಖಂಡರೊಟ್ಟಿಗೆ, ಮಹದೇಶ್ವರ ಬೆಟ್ಟಕ್ಕೆ ತೆರಳಿ, ಪೂಜೆ ಸಲ್ಲಿಸಿ ಹಿಂತಿರುಗುವ ವೇಳೆ ಸಿ ಪಿ ಯೋಗೇಶ್ವರ್ ಅಭಿಮಾನಿಗಳು ಮತ್ತು ಪಕ್ಷದ ಮುಖಂಡರು, ಕೊಳ್ಳೆಗಾಲ, ಮಳವಳ್ಳಿ, ಭಾರತಿನಗರ (ಕೆ ಎಂ ದೊಡ್ಡಿ) ಮದ್ದೂರು ಬಿ ಎಂ ರಸ್ತೆಯ ಹಲವಾರು ಹೋಟೆಲ್ ಗಳು ಹಾಗೂ ಗ್ರಾಮಗಳಲ್ಲಿ ತಮ್ಮ ನಾಯಕನ ಹುಟ್ಟು ಹಬ್ಬವನ್ನು ಆಚರಿಸಿದರು. ನಗರದ ಐದನೇ ಕ್ರಾಸ್ ನ ತಮ್ಮ ಮನೆಯಲ್ಲಿ ತಂದೆ ತಾಯಿಗಳಿಗೆ ನಮಸ್ಕರಿಸಿದ ನಂತರ ಮಹದೇಶ್ವರ ದೇವಾಲಯಕ್ಕೆ ಪೂಜೆ ಸಲ್ಲಿಸಿ, ರಕ್ತದಾನ ಶಿಬಿರದ ಸ್ಥಳಕ್ಕೆ ಆಗಮಿಸಿದ ಸಿಪಿವೈ ಅಭಿಮಾನಿಗಳು ತಂದಿದ್ದ ಬೃಹತ್ ಕೇಕನ್ನು ಕಟ್ ಮಾಡುವ ಮೂಲಕ ತನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.
ನಂತರ ರಕ್ತದಾನಿಗಳಿಗೆ ಶುಭಕೋರಿ ಮಾತನಾಡಿದ ಅವರು ಇಂದು ನನ್ನ ಜನ್ಮ ದಿನಕ್ಕೆ ತಾಲ್ಲೂಕಿನ ಪಕ್ಷದ ಮುಖಂಡರು, ಹಾಗೂ ಅಭಿಮಾನಿಗಳು ಸೇರಿ ರಕ್ತದಾನ ಏರ್ಪಡಿಸಿರುವುದು ತುಂಬಾ ಖುಷಿ ತಂದಿದೆ. ನನ್ನ ಜನ್ಮ ದಿನದಂದು ಹಲವಾರು ರೋಗಿಗಳಿಗೆ ರಕ್ತ ನೀಡುವ ಮೂಲಕ ಆಚರಣೆಗೆ ಅನುವು ಮಾಡಿಕೊಟ್ಟಿರುವುದಕ್ಕೆ ಪಕ್ಷದ ಕಾರ್ಯಕರ್ತರಿಗೆ ಮತ್ತು ಅಭಿಮಾನಿಗಳಿಗೆ ಕೃತಘ್ನತೆ ಸಲ್ಲಿಸಿದರು.
ನಗರದ ಹೊರವಲಯದಲ್ಲಿರುವ ಎಲ್ ಎನ್ ಕಲ್ಯಾಣ ಮಂಟಪದಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಬೃಹತ್ ಸಂಖ್ಯೆಯಲ್ಲಿ ಅಭಿಮಾನಿಗಳು, ಸಂಘಪರಿವಾರ ಮತ್ತು ಬಿಜೆಪಿ ಪಕ್ಷದ ಯುವ ಮುಖಂಡರು ಪಾಲ್ಗೊಂಡು ಸರತಿ ಸಾಲಿನ ಮೂಲಕ ರಕ್ತದಾನ ಮಾಡಿ ಶಿಬಿರವನ್ನು ಯಶಸ್ವಿಗೊಳಿಸಿದರು.
ಇದೇ ವೇಳೆ ಚನ್ನಪಟ್ಟಣ ಮತ್ತು ರಾಮನಗರ ತಾಲ್ಲೂಕಿನ ಅನೇಕ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು