Tel: 7676775624 | Mail: info@yellowandred.in

Language: EN KAN

    Follow us :


ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಬೋರ್ವೆಲ್ ಹಾಕಿಸಿ ಒಣ ಭೂಮಿಯಲ್ಲಿ ಭತ್ತ ಬೆಳೆಯುತ್ತಿರುವ ನೀಲಕಂಠನಹಳ್ಳಿ ರೈತರು

Posted date: 31 Aug, 2020

Powered by:     Yellow and Red

ಗಂಗಾಕಲ್ಯಾಣ ಯೋಜನೆಯಡಿಯಲ್ಲಿ ಬೋರ್ವೆಲ್ ಹಾಕಿಸಿ ಒಣ ಭೂಮಿಯಲ್ಲಿ ಭತ್ತ ಬೆಳೆಯುತ್ತಿರುವ ನೀಲಕಂಠನಹಳ್ಳಿ ರೈತರು

ಚನ್ನಪಟ್ಟಣ:ಆ/29/20/ಶುಕ್ರವಾರ. ವಿಶ್ವದಾದ್ಯಂತ ಬಹು ಬೇಗ ಹರಡಿದ ಕೊರೊನಾ ಎಂಬ ಮಹಾ ಮಾರಿ ವಿಶ್ವದ ಹಲವಾರು ದೇಶಗಳನ್ನು ಆರ್ಥಿಕವಾಗಿ ದುಸ್ತರಗೊಳಿಸಿದ್ದಲ್ಲದೆ, ಸಣ್ಣ ಪ್ರಮಾಣದ ಕಾರ್ಖಾನೆಗಳು ಸೇರಿದಂತೆ ಬೃಹತ್ ಕೈಗಾರಿಕಾ ಘಟಕಗಳು, ಖಾಸಗಿ ಶಾಲೆಗಳು ಮುಚ್ಚುವ ಮೂಲಕ ಉದ್ಯೋಗವನ್ನೇ ನೆಚ್ಚಿಕೊಂಡು ತಮ್ಮ ಬದುಕನ್ನು ರೂಪಿಸಿಕೊಂಡಿದ್ದ ಕೆಳ ಮತ್ತು ಮಧ್ಯಮ ವರ್ಗದ ಜನರನ್ನು ಆರ್ಥಿಕವಾಗಿ, ಮಾನಸಿಕವಾಗಿ ಕುಗ್ಗಿಸಿದೆ. ಇವುಗಳಿಗೆಲ್ಲಾ ಸಡ್ಡು ಹೊಡೆದ ನೀಲಕಂಠನಹಳ್ಳಿ ಗ್ರಾಮದ ರೈತರು, ಒಣಭೂಮಿಯಲ್ಲಿ ಭತ್ತ ಬೆಳೆಯುವ ಮೂಲಕ ಇತರ ನಿರುದ್ಯೋಗಿಗಳಿಗೆ ಮಾದರಿಯಾಗುತ್ತಿದ್ದಾರೆ.


ಬೆಂಗಳೂರು ಸೇರಿದಂತೆ ಅನೇಕ ನಗರಗಳಲ್ಲಿ ಬದುಕು ಕಟ್ಟಿಕೊಂಡಿದ್ದ ಯುವಕರು ಮತ್ತು ಖಾಸಗಿ ನೌಕರರು ಕೊರೊನಾ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದಂತೆ, ಒಬ್ಬೊಬ್ಬರಾಗಿ ತಮ್ಮ ಸ್ವಗ್ರಾಮವನ್ನು ಸೇರಿಕೊಂಡು ತಮ್ಮ ಆರೋಗ್ಯದ ಜೊತೆಗೆ ತಮ್ಮ ಬದುಕನ್ನು ಕಟ್ಡಿಕೊಳ್ಳಲು ಮುಂದಾದರು.


ನಗರದಲ್ಲಿ ಎಂಟತ್ತು ಗಂಟೆ ಕೆಲಸ ಮಾಡಿಕೊಂಡು ಶೋಕಿಯಾಗಿ ತಿರುಗಾಡಿಕೊಂಡಿದ್ದ ಇವರು ಹಳ್ಳಿಗೆ ಬಂದ ನಂತರ ಬದುಕಲು ನೇರಕ್ಕೆ ಕಂಡದ್ದು ತಮ್ಮ ತಂದೆ ಅಥವಾ ತಮ್ಮ ಕುಟುಂಬದ ಹಿರಿಯರು ಸಂಪಾದಿಸಿಟ್ಟು ಹೋದ ಭೂಮಿ. ಅದು ಇವರು ನಗರ ಸೇರಿಕೊಂಡ ನಂತರ ಪಾಳು ಭೂಮಿಯಾಗಿ ಪರಿವರ್ತಿತವಾಗಿದ್ದು, ಗಿಡಗಂಟಿಗಳು ಬೆಳೆದು ನಿಂತಿದ್ದ ಒಣ ಭೂಮಿಗಳು. ಈ ಭೂಮಿಯೇ ತಾಲ್ಲೂಕಿನ ನೀಲಕಂಠನಹಳ್ಳಿ ಗ್ರಾಮದ ಹಲವರಿಗೆ ಚಿನ್ನದ ಮೊಟ್ಟೆ ಇಡುವ ಭೂಮಿಯನ್ನಾಗಿ ಪರಿವರ್ತನೆ ಮಾಡಿಕೊಳ್ಳುವುದರ ಜೊತೆಗೆ ತಮ್ಮ ಆರೋಗ್ಯ ಮತ್ತು ಆಯಸ್ಸನ್ನು ಹೆಚ್ಚಿಸಿಕೊಳ್ಳಲು ಸಫಲರಾಗಿದ್ದಾರೆ.


ನಗರದ ಹೊರಭಾಗದಲ್ಲಿದ್ದರೂ ನಗರಕ್ಕೆ ಹೊಂದಿಕೊಂಡಂತಿರುವ ನೀಲಕಂಠನಹಳ್ಳಿ ಗ್ರಾಮದ ರೈತರು, ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಕೆಲವರು ಹಾಗೂ ತಮ್ಮ ಸ್ವಂತ ಹಣದಿಂದ ಕೆಲವರು ಬೋರ್ ವೆಲ್ ಕೊಳವೆ ಬಾವಿಗಳನ್ನು ಕೊರೆಸಿ, ಭೂಮಿಯನ್ನು ಮಟ್ಟ ಮಾಡಿಸಿ, ಮೊದಲ ಪ್ರಯತ್ನವಾಗಿ ಭತ್ತ ಬೆಳೆಯುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಕೆಲ ರೈತರು ಈಗಾಗಲೇ ಒಂದೆರಡು ಭತ್ತದ ಬೆಳೆ ತೆಗೆದಿದ್ದರೆ ಮತ್ತೆ ಕೆಲವರು ಹೊಸದಾಗಿ ಪ್ರಯತ್ನಿಸುತ್ತಿದ್ದಾರೆ. ಇವರಲ್ಲಿ ನಗರ ಬಿಟ್ಟು ಬಂದವರ ಜೊತೆಗೆ ನಿವೃತ್ತರು ಸಹ ಉತ್ಸಾಹದಿಂದ ಭತ್ತವನ್ನು ಬೆಳೆಯುತ್ತಿದ್ದಾರೆ.


ಮಿಕ್ಕೆಲ್ಲಾ ಬೆಳೆಗಳಿಗೆ ಹೋಲಿಸಿದರೆ ಭತ್ತದ ಬೆಳೆಯು ಶೇಕಡಾ 90 ರಷ್ಟು ನೀರನ್ನು ಹೆಚ್ಚು ಕೇಳುತ್ತಾದರೂ ಬೆಳೆಯುವ ಪರಿ ಮಾತ್ರ ತೀರಾ ಸುಲಭ ಹಾಗೂ ಮೂರು ತಿಂಗಳ ಬೆಳೆಯಾದ್ದರಿಂದ ವರ್ಷದಲ್ಲಿ ಮೂರು ಬೆಳೆ ತೆಗೆಯಲಡ್ಡಿಯಿಲ್ಲ. ಒಣಭೂಮಿಯನ್ನು ಫಲವತ್ತಾದ ಭೂಮಿಯಾಗಿ ಪರಿವರ್ತನೆ ಮಾಡಿದ ನಂತರ ಒಂದು ಮಟ್ಟಕ್ಕೆ ತರಲು (ಸಮತಟ್ಟು ಮಾಡಲು) ಮೊದಲಿಗೆ ಭತ್ತದ ಬೆಳೆಯೇ ಸೂಕ್ತ ಎನ್ನುವುದು ಇಲ್ಲಿನ ರೈತರ ಅನಿಸಿಕೆಯಾಗಿದೆ.


ನಾನು ಪೋಲೀಸ್ ಇಲಾಖೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ನಿವೃತ್ತಿ ಹೊಂದಿದ್ದೇನೆ. ಇಲಾಖೆಯಲ್ಲಿ ಶಿಸ್ತನ್ನು ಮೈಗೂಡಿಸಿಕೊಂಡಿದ್ದ ನನಗೆ ನಿವೃತ್ತಿಯ ನಂತರ ಮನೆಯಲ್ಲಿ ಕೂರಲು ಸಾಧ್ಯವಾಗಲಿಲ್ಲ. ಹಾಗಾಗಿ ನಮ್ಮ ತಂದೆಯ ಜಮೀನಿನಲ್ಲಿ ಆಗಿಂದಾಗ್ಗೆ ಮಳೆಗಾಲದಲ್ಲಿ ಹುರುಳಿ ಅಥವಾ ರಾಗಿ ಬೆಳೆದುಕೊಳ್ಳುತ್ತಿದ್ದೆವು. ನಿವೃತ್ತಿಯ ನಂತರ ಭತ್ತವನ್ನು ಬೆಳೆಯುತ್ತಿದ್ದೇನೆ.

ಶಿವಣ್ಣ. ನಿವೃತ್ತ ಸಬ್ ಇನ್ಸ್‌ಪೆಕ್ಟರ್. ನೀಲಕಂಠನಹಳ್ಳಿ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑