Tel: 7676775624 | Mail: info@yellowandred.in

Language: EN KAN

    Follow us :


ತಾಲ್ಲೂಕು ಮಟ್ಟದ ಆಡಳಿತಾಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ತಾಲ್ಲೂಕು ಪಂಚಾಯತಿ ಅಧ್ಯಕ್ಷ ರಾಜಣ್ಣ

Posted date: 02 Sep, 2020

Powered by:     Yellow and Red

ತಾಲ್ಲೂಕು ಮಟ್ಟದ ಆಡಳಿತಾಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ತಾಲ್ಲೂಕು ಪಂಚಾಯತಿ ಅಧ್ಯಕ್ಷ ರಾಜಣ್ಣ

ಚನ್ನಪಟ್ಟಣ:ಸೆ/01/20/ಮಂಗಳವಾರ. ತಾಲ್ಲೂಕು ಪಂಚಾಯತಿ ಕಾರ್ಯಾಲಯದಲ್ಲಿ ನಡೆಯುವ ಸಾಮಾನ್ಯ ಮತ್ತು ಕೆಡಿಪಿ ಸಭೆಗೆ ಪದೆಪದೇ ಗೈರುಹಾಜರಿ ಆಗುತ್ತಿರುವ ಅಧಿಕಾರಿಗಳ ಬಗ್ಗೆ ಕೆಂಡಕಾರಿದ ತಾಲ್ಲೂಕು ಅಧ್ಯಕ್ಷ ಹರೂರು ರಾಜಣ್ಣ ನವರು ಅವರಿಗೆ ನೋಟೀಸ್ ಜಾರಿಗೊಳಿಸುವಂತೆ ಆದೇಶಿಸಿದರು.

ರೈತರಿಗೆ ಸಕಾಲದಲ್ಲಿ ಸಿಗದ ರಸಗೊಬ್ಬರ, ಕಾಳ ಸಂತೆಯಲ್ಲಿ ಮಾರಾಟ, ಸರಿಯಾದ ದಾಖಲೆಗಳಿಲ್ಲದೆ ನೋಂದಣಿ ಮಾಡದಂತೆ ಸಬ್ ರಿಜಿಸ್ಟ್ರಾರ್ ಗೆ ಸೂಚನೆ, ತಾಲ್ಲೂಕಿನಲ್ಲಿ ಹೆಚ್ಚು ಅಂಕ ತೆಗೆದ ಹತ್ತನೇ ತರಗತಿಯ ಮಕ್ಕಳ ಬಗ್ಗೆ ಬಿಇಓ ಬೆನ್ನು ತಟ್ಟುಕೊಂಡಿದ್ದೇ ಇಂದಿನ ಸಾಮಾನ್ಯ ಸಭೆಯ ವಿಶೇಷಗಳು.


ಪ್ರತಿಭಾರಿಯ ಸಮಾನ್ಯಸಭೆಯಲ್ಲಿ ಇಲಾಖೆಯ ಅಧಿಕಾರಿಗಳು ಗೈರು ಆಗುತ್ತಿರುವುದರ ಬಗ್ಗೆ, ಸಂಬಂಧಸಿದ ಅಧಿಕಾರಿಗೆ ನೋಟಿಸ್ ನೀಡುವುದರ ಜೊತೆಗೆ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸುವಂತೆ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಹರೂರು ರಾಜಣ್ಣ ತಮ್ಮ ಇಲಾಖೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ, ತಾಲ್ಲೂಕು ಪಂಚಾಯ್ತಿ ಸಮಾನ್ಯ ಸಭೆಯಲ್ಲಿ ನಡೆಯಿತು.


ತಾಲ್ಲೂಕು ಪಂಚಾಯ್ತಿ ಸಾಮಾನ್ಯಸಭೆ ನನಗೋಸ್ಕರ ಅಲ್ಲ, ಅದು ಕ್ಷೇತ್ರದ ಅಭಿವೃದ್ದಿಗೆ ಪೂರಕವಾಗಿದ್ದು, ಇಂತಹ ಸಾಮಾನ್ಯಸಭೆಗೆ ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ಹಾಜರಿದ್ದು ತಮ್ಮ ಇಲಾಖೆಯ ಪ್ರಗತಿಯನ್ನು  ತಿಳಿಸಬೇಕಾದದದ್ದು, ಅವರ ಜವಾಬ್ದಾರಿಯಾಗಿದ್ದು, ಆದರೆ ಸಾಮಾನ್ಯಸಭೆಯಲ್ಲಿ ಬೆರಳಣಿಕೆಯಷ್ಟು ಅಧಿಕಾರಿವರ್ಗ ಇರುವುದನ್ನು ಗಮನಿಸಿದ  ಅಧ್ಯಕ್ಷರು, ತಮ್ಮ ಸಿಬ್ಬಂದಿಯನ್ನು ಮೊದಲು ಸಭೆಗೆ ಗೈರಾಗಿರುವ ಅಧಿಕಾರಿಗಳನ್ನು ಪಟ್ಟಿಮಾಡಿ, ಅವರಿಗೆ ನೋಟಿಸ್ ನೀಡಿ, ನಂತರ ಜಿಲ್ಲಾಧಿಕಾರಿಗಳಿಗೆ ಅಧಿಕಾರಿಗಳ ಕರ್ತವ್ಯಲೋಪದ ಬಗ್ಗೆ ದೂರು ನೀಡಿ ಎಂದು ಕಾರವಾಗಿ ಆದೇಶ ನೀಡಿದರು.


ಪ್ರತಿಯೊಂದು ಇಲಾಖೆಯ ಆಧಿಕಾರಿಗಳು ಜನಮೆಚ್ಚುವ ಕೆಲಸ ಮಾಡಬೇಕು, ನಿಮ್ಮ ಕೆಲಸ ಪ್ರಾಮಾಣಿಕವಾಗಿ ಇದ್ದಾಗ ಸಮಾಜ ಗುರುತಿಸುತ್ತದೆ ಎಂದು ಅಧಿಕಾರಿಗಳಿಗೆ ಮನವಿ ಮಾಡುವುದರ ಮುಖಾಂತರ ಎಚ್ಚರಿಕೆಯನ್ನು ಕೂಡ ನೀಡಿದರು.

ಸಣ್ಣ ನೀರಾವರಿ ಇಲಾಖೆಯವರು ಎಲ್ಲಿದ್ದಾರೆ, ಅವರ ಕಚೇರಿ ಎಲ್ಲಿದೆ ಎಂದು ಯಾರಿಗೂ ಗೊತ್ತಿಲ್ಲ ಆದರೆ ಈ ಇಲಾಖೆಯಿಂದ ಸಾಕಷ್ಟು ಕಾಮಗಾರಿಗಳು ನಡೆಯುತ್ತಿವೆ, ಇದು ಗುಪ್ತವೇ ಎಂದು ಪ್ರಶ್ನೆ ಮಾಡಿದ ಅಧ್ಯಕ್ಷರು ಕೆಲ ಇಲಾಖೆಗಳ ವ್ಯಾಪ್ತಿಯಲ್ಲಿ  ಅಭಿವೃದ್ದಿ ಕೆಲಸಗಳನ್ನು ಮಾಡುತ್ತಿರುವ ನಿರ್ಮಿತಿ ಕೇಂದ್ರಗಳ ಬಗ್ಗೆಯೂ ಕಚೇರಿಗೆ ಅರಿವಿಲ್ಲ ಎಂದು ಆರೋಪ ಮಾಡಿದರು.


ಸಭೆಯಲ್ಲಿ ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿ ನಾಗರಾಜು, ಈ ಭಾರಿಯ ಎಸ್.ಎಸ್.ಎಲ್.ಸಿ.ಫಲತಾಂಶ ಕ್ಷೇತ್ರದಲ್ಲಿ ಆಶಾದಾಯಕವಾಗಿದೆ ಎಂದು ಅಂಕಿಅಂಶಗಳನ್ನು ಸಭೆಯಲ್ಲಿ ತಿಳಿಸಿ, ಪ್ರತಿ ಗ್ರಾಮ ಪಂಚಾಯ್ತಿಯಲ್ಲಿ ಅಭಿವೃದ್ದಿ ಕೆಲಸಗಳ ಪಟ್ಟಿಯಲ್ಲಿ ಆಯಾ ಗ್ರಾಮದ ಸರ್ಕಾರಿ ಶಾಲೆಯ ಯಾವುದಾದರೂ ಅಭಿವೃದ್ದಿಯನ್ನು ಗಮನದಲಿಟ್ಟುಕೊಂಡು ಯೋಜನೆ ರೂಪಿಸುವಂತೆ ಅಧ್ಯಕ್ಷರಲ್ಲಿ ಹಾಗೂ ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳಲ್ಲಿ ಮನವಿ ಮಾಡಿದರು.


ಸರ್ಕಾರಿ ಶಾಲೆಗಳಲ್ಲಿ ಶುಚಿತ್ವದ ಕೊರತೆ ಇದೆ, ಆಯಾ ಶಾಲೆಗಳಿಗೆ ಡಿ.ಗ್ರೂಪ್ ನೌಕರರ ನೇಮಕದ ಬಗ್ಗೆ ಅಧ್ಯಕ್ಷರು ಶಿಕ್ಷಣಾಧಿಕಾರಿಗಳ ಗಮನ ಸೆಳೆದಾಗ, ಸಂಬಂಧಿಸಿದ ಶಾಲೆಯಲ್ಲಿ ಡಿ.ಗ್ರೂಪ್ ಹುದ್ದೆ ಇದ್ದರೆ ಮಾತ್ರ ಸರ್ಕಾರನ ಗಮನ ಸೆಳೆಯಲಾಗುವುದು ಎಂದು ತಿಳಿಸಿದರು.

ಸಭೆಯಯಲ್ಲಿ ಹಾಜರಿದ್ದ ಸುಮಾರು ೧೫ ಇಲಾಖೆಯ ಅಧಿಕಾರಿಗಳು ಗುರುಗಳಿಗೆ ಪಾಠವನ್ನು ಒಪ್ಪಿಸುವಂತೆ ತಮ್ಮ ಇಲಾಖೆಯ ಪ್ರಗತಿಯನ್ನು ಓದಿದರು, ಸಭೆಯ ಮುಂಚಿತವಾಗಿ ದೇಶದ ಮಾಜಿ ರಾಷ್ಟ್ರಪತಿ ಪ್ರಣಬ್‌ಮುಖರ್ಜಿರವರ ಆಕಾಲಿಕ ನಿಧನಕ್ಕೆ ಒಂದು ನಿಮಿಷ ಸಂತಾಪ ಸೂಚಿಸಲಾಯಿತು.


ಗಲ್ಲಿಗೊಂದರಂತೆ ಸರ್ವೇ ನಂಬರ್ ಗಳಲ್ಲಿ ಲೇಔಟ್ ಗಳು ಪ್ರಾರಂಭವಾಗುತ್ತಿದ್ದು, ದಾಖಲೆಗಳನ್ನು ಪರಿಶೀಲಿಸಿ ನೋಂದಣಿ ಮಾಡುವಂತೆ ಸಬ್ ರಿಜಿಸ್ಟ್ರಾರ್ ಗೆ ಸೂಚಿಸಿದರು.

ಈಗ ಮಳೆಗಾಲ ಆರಂಭವಾಗಿದ್ದು, ಒಣಭೂಮಿಯಲ್ಲಿ ರಾಗಿ ಬಿತ್ತಮಾಡಿರುವ ರೈತರಿಗೆ ಸಕಾಲದಲ್ಲಿ ರಸಗೊಬ್ಬರ ಸಿಗುತ್ತಿಲ್ಲ. ಕಾಳ ಸಂತೆಯಲ್ಲಿ ಮಾರಾಟವಾಗುತ್ತಿದೆ. ಇದನ್ನು ತಡೆಗಟ್ಟಿ ರೈತರಿಗೆ ಸಕಾಲದಲ್ಲಿ ರಸಗೊಬ್ಬರ ಸಿಗುವಂತೆ ನೋಡಿಕೊಳ್ಳಬೇಕೆಂದು ಕೃಷಿ ಇಲಾಖೆಗೆ ಸೂಚಿಸಿದರು.


ಸಭೆಯಲ್ಲಿ ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಸಾಕಮಾದಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್ ಹಾಗೂ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಚಂದ್ರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑