Tel: 7676775624 | Mail: info@yellowandred.in

Language: EN KAN

    Follow us :


450 ಕೋಟಿ ರೂ. ವೆಚ್ಚದ ಶ್ರೀರಂಗ ಏತ ನೀರಾವರಿ ಪರಿಷ್ಕೃತ ಯೋಜನೆಗೆ ಸಂಪುಟ ಒಪ್ಪಿಗೆ

Posted date: 03 Sep, 2020

Powered by:     Yellow and Red

450 ಕೋಟಿ ರೂ. ವೆಚ್ಚದ ಶ್ರೀರಂಗ ಏತ ನೀರಾವರಿ ಪರಿಷ್ಕೃತ ಯೋಜನೆಗೆ ಸಂಪುಟ ಒಪ್ಪಿಗೆ

ಮಾಗಡಿ/ರಾಮನಗರ/ಬೆಂಗಳೂರು:ಸೆ/04/20/ಗುರುವಾರ.


*ಕುಣಿಗಲ್‌ ತಾಲ್ಲೂಕುಗಳ 289 ಗ್ರಾಮಗಳಿಗೆ ಶಾಶ್ವತ ನೀರಿನ ಸೌಲಭ್ಯ ಎಂದ ಡಿಸಿಎಂ*

-------

ರಾಮನಗರ ಜಿಲ್ಲೆಯ ಮಾಗಡಿ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್‌ ತಾಲ್ಲೂಕುಗಳ 83 ಕೆರೆಗಳಿಗೆ ಹೇಮಾವತಿ ನದಿಯಿಂದ ಕುಡಿಯುವ ನೀರನ್ನು ಹರಿಸುವ 450 ಕೋಟಿ ರೂ. ವೆಚ್ಚದ ಪರಿಷ್ಕೃತ ಶ್ರೀರಂಗ ಏತ ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟವು ಒಪ್ಪಿಗೆ ನೀಡಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು.


ಈಗಾಗಲೇ ಯೋಜನೆಗೆ 277 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಯೋಜನೆಗೆ ಮತ್ತಷ್ಟು ಸಂಪನ್ಮೂಲದ ಅಗತ್ಯವಿತ್ತು. ಹೀಗಾಗಿ ಅಗತ್ಯವಿದ್ದ 173 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಈ ಬಗ್ಗೆ ಮಾಡಲಾಗಿದ್ದ ಮನವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುವೆ ಎಂದರು.


ಮೊದಲೇ ಆರಂಭವಾಗಿದ್ದ ಯೋಜನೆಯ ಕಾಮಗಾರಿಯನ್ನು ಅತ್ಯಂತ ವೇಗಗತಿಯಲ್ಲಿ ನಡೆಸಲಾಗುತ್ತಿದ್ದು, ಅಗತ್ಯವಿದ್ದ ಮತ್ತಷ್ಟು ನಿರ್ವಹಣಾ ವ್ಯವಸ್ಥೆ ಹಾಗೂ ಮತ್ತಿತರೆ ಪೂರಕ ವ್ಯವಸ್ಥೆಗಳನ್ನು ಮಾಡುವ ಉದ್ದೇಶದಿಂದ ಪರಿಷ್ಕೃತ ಯೋಜನೆಗೆ ಒಪ್ಪಿಗೆ ಪಡೆಯಲಾಗಿದೆ ಎಂದು ಡಿಸಿಎಂ ಮಾಹಿತಿ ನೀಡಿದರು.


*ಪಂಪ್‌ ಹೌಸ್‌ ಮತ್ತು ವಿದ್ಯುತ್‌ ಸಬ್‌ಸ್ಟೇಷನ್‌:*


195 ಕಿ.ಮೀ ದೂರದಿಂದ ನೀರು ಪೂರೈಕೆಯಾಗಬೇಕಿದ್ದು, ಅದಕ್ಕಾಗಿ ಪ್ರತ್ಯೇಕ ಪಂಪ್‌ ಹೌಸ್‌ ಮತ್ತು ವಿದ್ಯುತ್‌ ಸಬ್‌ಸ್ಟೇಷನ್‌ ನಿರ್ಮಿಸಲು ಉದ್ದೇಶಿಸಲಾಗಿದೆ. ಜತೆಗೆ, ನೀರನ್ನು ಸರಬರಾಜು ಮಾಡುವ ಪಿಎಸ್ಸಿ ಪೈಪುಗಳು ವಿರಳವಾಗಿದ್ದು, ಅವುಗಳನ್ನು ಕಾಲಮಿತಿಯೊಳಗೆ ಖರೀದಿಸಿ ಯೋಜನೆಯನ್ನು ಕಾರ್ಯಗತ ಮಾಡಬೇಕಾಗಿದೆ. ವಿವಿಧೆಡೆ ಭೂಸ್ವಾಧೀನ ಕಷ್ಟವಾಗಿರುವ ಕಾರಣ ಯೋಜನೆಯ ವೆಚ್ಚ ಹೆಚ್ಚಳವಾಗಿದೆ. ಒಟ್ಟಾರೆಯಾಗಿ ಕಾವೇರಿ ನೀರಾವರಿ ನಿಗಮ ಸಲ್ಲಿಸಿರುವ ಪರಿಷ್ಕೃತ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ಉಪ ಮುಖ್ಯಮಂತ್ರಿ ಮಾಹಿತಿ ನೀಡಿದರು.


ಹೇಮಾವತಿ ಯೋಜನೆಯ ತುಮಕೂರು ಶಾಖಾ ನಾಲೆಯಿಂದ ಎರಡೂ ತಾಲ್ಲೂಕುಗಳ ಕೆರೆಗಳಿಗೆ ನೀರು ಹರಿಯಲಿದೆ. ಈ ಯೋಜನೆಯಿಂದ ಎರಡೂ ತಾಲ್ಲೂಕುಗಳ ಜಲಕ್ಷಾಮ ಶಾಶ್ವತವಾಗಿ ನಿವಾರಣೆಯಾಗಲಿದೆ. ಇದರಿಂದ ಆ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಲಿದೆ ಹಾಗೂ ಕೃಷಿ ಚಟುವಟಿಕೆ ಉತ್ತಮವಾಗಿ ಗರಿಗೆದರಲಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು.


*172.19 ಕ್ಯೂಸೆಕ್‌ ನೀರು:*


ಒಟ್ಟು ಉದ್ದೇಶಿತ ಪ್ರದೇಶಗಳಿಗೆ ಒಟ್ಟು 172.19 ಕ್ಯೂಸೆಕ್‌ ನೀರನ್ನು ಹರಿಸಲಾಗುವುದು. ಮಾಗಡಿ ತಾಲ್ಲೂಕಿನ 68 ಕೆರೆಗಳು ಹಾಗೂ ಕುಣಿಗಲ್‌ ತಾಲ್ಲೂಕಿನ ಹುತ್ತರಿದುರ್ಗ ಹೋಬಳಿಯ 15 ಕೆರೆಗಳಿಗೆ ನೀರು ಹರಿಯಲಿದೆ. ಇದರಿಂದ ಸುಮಾರು 289 ಗ್ರಾಮಗಳಲ್ಲಿ ಶಾಶ್ವತವಾಗಿ ಕುಡಿಯುವ ನೀರಿನ ಅಭಾವ ನೀಗಲಿದೆ ಎಂದು ಡಾ. ಅಶ್ವತ್ಥನಾರಾಯಣ ಮಾಹಿತಿ ನೀಡಿದರು.


ರಾಜ್ಯದ ಯಾವುದೇ ಭಾಗದಲ್ಲೂ ಕುಡಿಯುವ ನೀರಿನ ಬಿಕ್ಕಟ್ಟು ಇರಬಾರದು ಎಂಬುದೇ ಸರಕಾರದ ಉದ್ದೇಶವಾಗಿದೆ. ಹೀಗಾಗಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳುವುದರ ಜತೆಗೆ, ಈಗಾಗಲೇ ಕಾರ್ಯಗತವಾಗುತ್ತಿರುವ ಯೋಜನೆಗಳನ್ನು ವೇಗವಾಗಿ ಮುಗಿಸಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑