ರಸ್ತೆ ಅಪಘಾತ ತಡೆಗೆ ವೈಜ್ಞಾನಿಕ ಕ್ರಮ : ಜಿಲ್ಲಾಧಿಕಾರಿ
ರಾಮನಗರ:ಸೆ/07/20/ಸೋಮವಾರ. ಜಿಲ್ಲೆಯಲ್ಲಿ ಹಾದು ಹೋಗುವ ಹೆದ್ದಾರಿ, ರಾಜ್ಯ ಹೆದ್ದಾರಿ ಮತ್ತು ಜಿಲ್ಲೆಯ ಒಳಗಿರುವ ರಸ್ತೆಗಳಲ್ಲಿ ಸಂಭವಿಸುವ ಅಪಘಾತಗಳನ್ನು ತಪ್ಪಿಸಲು ಬ್ಲಾಕ್ ಸ್ಪಾಟ್ಗಳನ್ನು ಗುರುತಿಸುವಂತೆ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷರಾಗಿರುವ ಎಂ.ಎಸ್. ಅರ್ಚನಾ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ಅಧಿಕವಾಗಿ ಅಪಘಾತ ಸಂಭವಿಸುವಂಥ ’ಕಪ್ಪು ವಲಯ’ಗಳನ್ನು ಗುರುತಿಸಿ, ಅಂತಹ ಕಡೆಗಳಲ್ಲಿ ವಾಹನ ಚಾಲಕರು, ಸವಾರರು ಮತ್ತು ಪಾದಚಾರಿಗಳಿಗೆ ಎಚ್ಚರಿಕೆ ನೀಡುವ ಮತ್ತು ಸುರಕ್ಷತಾ ಕ್ರಮಗಳನ್ನು ಅಳವಡಿಸುವಂತೆ ತಿಳಿಸಿದರು.
*’ಯು’ ತಿರುವು:* ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ನಡುವೆ ಬರುವಂತಹ ರಸ್ತೆ ವಿಭಜಕಗಳಿರುವ ಕಡೆಗಳಲ್ಲಿ ಗಿಡ-ಗಂಟಿ ಹಾಗೂ ಮರಗಳು ಬೆಳೆದು ಕೊಂಡಿವೆ. ಇದರಿಂದ ವಾಹನ ಚಾಲಕರಿಗೆ ರಸ್ತೆ ನಡುವೆ ಇರುವ ’ಯು’ ತಿರುವುಗಳು ಕಾಣಿಸದೆ ಅಪಘಾತವಾಗುತ್ತಿದೆ. ಇದನ್ನು ತಪ್ಪಿಸಲು ಬೆಳೆದಿರುವ ಮರಗಳು ಮತ್ತು ಸಸ್ಯಗಳನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಾನಪದ ಲೋಕದ ಬಳಿ ಇರುವ ಯು ತಿರುವು ಚಿಕ್ಕದಾಗಿದ್ದು, ವಾಹನ ಚಾಲಕರಿಗೆ ತಿರುವು ತೆಗೆದುಕೊಳ್ಳಲು ಕಷ್ಟವಾಗುತ್ತಿದೆ. ರಸ್ತೆಯು ಸಹ ಸರಿಯಾಗಿ ಕಾಣಿಸುವುದಿಲ್ಲ. ಇಲ್ಲಿರುವ ಯು ತಿರುವನ್ನು ವೈಜ್ಞಾನಿಕವಾಗಿ ಸರಿಪಡಿಸಲು ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರಿಗೆ ಅವರು ತಿಳಿಸಿದರು.
*ಪಾದಚಾರಿ ಮಾರ್ಗ:* ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಕಡೆಗಳಲ್ಲಿ ಅಧಿಕ ಜನ ಸಂದಣಿ ಇರುವ ಪ್ರದೇಶಗಳ ಬಳಿ ಪಾದಚಾರಿ ಮಾರ್ಗಗಳನ್ನು ನಿರ್ಮಿಸಲು ಒತ್ತು ನೀಡಬೇಕು. ಹಾಗೆಯೇ, ಇಂತಹ ಹೆದ್ದಾರಿಗಳಲ್ಲಿ ಮೋಟಾರ್ ಸೈಕಲ್ ಮತ್ತು ಸೈಕಲ್ಗಳಿಗೆ ಪ್ರತ್ಯೇಕ ಟ್ಯ್ರಾಕ್ಗಳನ್ನು ನಿರ್ಮಿಸುವಂತೆ ಅರ್ಚನಾ ಅವರು ಸಲಹೆ ನೀಡಿದರು.
*ಅಪಘಾತ ಕಡಿಮೆ:* ಜಿಲ್ಲೆಯಲ್ಲಿ ಕಳೆದ ಆರು ತಿಂಗಳಲ್ಲಿ ಅಪಘಾತದ ಪ್ರಮಾಣದಲ್ಲಿ ಶೇ. 10ರಷ್ಟು ಕಡಿಮೆ ಆಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್ಡೌನ್ ಜಾರಿಯಾಗಿದ್ದರಿಂದ ಅಪಘಾತದ ಸಂಖ್ಯೆಯಲ್ಲಿ ಇಳಿಮುಖವಾಗಿದೆಯೇ ಇಲ್ಲವೆ ಅಳವಡಿಸಿಕೊಂಡ ಸುರಕ್ಷತಾ ಕ್ರಮಗಳಿಂದ ಅಪಘಾತ ಕಡಿಮೆಯಾಗಿದೆಯೇ ಎನ್ನುವುದರ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವುದರ ಜೊತೆಗೆ, ಚಾಲಕರು, ಸವಾರರಿಗೆ ಮತ್ತು ಪಾದಚಾರಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಅಪಘಾತಗಳನ್ನು ಇನ್ನಷ್ಟು ಕಡಿಮೆ ಮಾಡುವುದರ ಬಗ್ಗೆ ವರದಿಯನ್ನು ನೀಡುವಂತೆ ತಿಳಿಸಿದರು.
*ಅನಧಿಕೃತ ಅಂಗಡಿ ತೆರವು:* ಜಿಲ್ಲೆಯಲ್ಲಿ ಹಾದು ಹೋಗುವ ಹೆದ್ದಾರಿಗಳ ಎರಡೂ ಬದಿಯಲ್ಲಿ ಇರುವ ಅನಧಿಕೃತ ಅಂಗಡಿಗಳು ಮತ್ತು ಕಾಫಿ - ಟೀ ಮಾರುವವರನ್ನು ಆಯಾ ಆಯಾ ಗ್ರಾಮ ಪಂಚಾಯಿತಿಗಳು ತಕ್ಷಣವೇ ಖಾಲಿ ಮಾಡಿಸಲು ಕ್ರಮ ಕೈಗೊಳ್ಳುವಂತೆ ಅವರು ಹೇಳಿದರು.
*ಟ್ರಾಮಾ ಸೆಂಟರ್:* ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸುವ ಅಪಘಾತಗಳಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡಲು ಅನುವಾಗುವಂತೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ತುರ್ತು ಚಿಕಿತ್ಸೆಗಾಗಿ ಟ್ರಾಮಾ ಸೆಂಟರ್ ಅನ್ನು ಸ್ಥಾಪಿಸುವ ಬಗ್ಗೆ ಪ್ರಸ್ತಾವನೆಯನ್ನು ನೀಡುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಗಿರೀಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಪ್ರಮುತೇಶ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಕಾರ್ಯಪಾಲಕ ಅಭಿಯಂತರರು, ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಲೋಕೋಪಯೋಗಿ ಇಲಾಖೆಯ ಅಭಿಯಂತರರು, ಭೂ ವಿಜ್ಞಾನ ಮತ್ತು ಗಣಿ ಇಲಾಖೆಯ ಅಧಿಕಾರಿಗಳು ಮತ್ತು ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯ ಸದಸ್ಯರು ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು