ಎಲ್ಲಾ ಪಕ್ಷಗಳಿಂದಲೂ ದಲಿತರಿಗೆ ಅನ್ಯಾಯ, ಹೀಗೆ ಮುಂದುವರೆದರೆ ಪಕ್ಷಾತೀತವಾಗಿ ಹೋರಾಟ ಮಾಡುತ್ತೇವೆ ಎಂದ ತಾಲೂಕಿನ ದಲಿತ ಮುಖಂಡರ ಒಕ್ಕೊರಲ ದನಿ
ಎಲ್ಲಾ ಪಕ್ಷಗಳಿಂದಲೂ ಅಧಿಕಾರ ದೃಷ್ಟಿಯಿಂದ ದಲಿತರಿಗೆ ಅನ್ಯಾಯವಾಗಿದೆ. ಅದರಲ್ಲೂ ತಾಲೂಕಿನಲ್ಲಿ ನಮನ್ನು ಕೇವಲ ಮತಕ್ಕಾಗಿ ಬಳಸಿಕೊಂಡು ನಾಯಕರಾದವರಿಂದಲೇ ಹೆಚ್ಚು ಅನ್ಯಾಯವಾಗಿದೆ. ತಾಲ್ಲೂಕಿಗೆ ಸಂಬಂಧಿಸಿದ ಯಾವುದೇ ಆಡಳಿದಲ್ಲಿ ಇದುವರೆಗೂ ಸಾಂವಿಧಾನಿಕ ಹುದ್ದೆ ನೀಡದಿರುವುದೇ ಇದಕ್ಕೆ ಸಾಕ್ಷಿ ಎಂದು ತಾಲೂಕಿನ ಸರ್ವ ಪಕ್ಷಗಳ ಮುಖಂಡರು ಆರೋಪಿಸಿದರು.
ಅವರು ಇಂದು ನಗರದ ಹೊರವಲಯದಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದರು.
ತಾಲ್ಲೂಕು ಪಂಚಾಯತಿಯ ಮಾಜಿ ಸದಸ್ಯ ಹನುಮಂತಯ್ಯ ಮಾತನಾಡಿ ತಾಲೂಕಿನ ಯಾವ ನಾಯಕರೂ ಸಹ ತಮ್ಮ ಅಧಿಕಾರಾವಧಿಯಲ್ಲಿ ಸಹಕಾರ, ಕೃಷಿ ಮಾರುಕಟ್ಟೆ, ಅಭಿವೃದ್ಧಿ ಪ್ರಾಧಿಕಾರ ಮತ್ತು ವಿಎಸ್ಎಸ್ ನಂತಹ ಹಲವು ಸಂಸ್ಥೆಗಳಿಗೆ ಅಧ್ಯಕ್ಷನನ್ನಾಗಿ ನೇಮಿಸಿಲ್ಲ. ಪ್ರತಿ ಬಾರಿಯೂ ನಮ್ಮ ಮತಕ್ಕಾಗಿ ಭಾವನಾತ್ಮಕವಾಗಿ ಬಿಂಬಿಸಿ ತಮ್ಮ ಬೇಳೆ ಬೇಯಿಸಿಕೊಂಡು ನಾಯಕರಾಗುತ್ತಾರೆ. ನಿಜವಾಗಿಯೂ ದಲಿತರ ಮೇಲೆ ನಿಮಗೆ ಪ್ರಾಮಾಣಿಕ ಕಾಳಜಿ ಇದ್ದರೆ ಅಧ್ಯಕ್ಷರನ್ನಾಗಿ ನೇಮಿಸಲಿ ಎಂದರು.
ಇಲ್ಲವಾದರೆ ತಾಲೂಕಿನ ಎಲ್ಲಾ ಪಕ್ಷದ ದಲಿತ ನಾಯಕರು, ದಲಿತ ಮುಖಂಡರು ಸೇರಿದಂತೆ ಪ್ರತಿಯೊಬ್ಬರೂ ಒಗ್ಗೂಡಿ ಚುನಾವಣಾ ಸಮಯದಲ್ಲಿ ರಾಜಕೀಯವಾಗಿ ನಮ್ಮದೇ ಒಂದು ದೃಢ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಸ್ಪಷ್ಟ ಪಡಿಸಿದರು.
ಜೆಡಿಎಸ್ ಪಕ್ಷದ ಮುಖಂಡ ಜಯಕಾಂತಚಾಲುಕ್ಯ ಮಾತನಾಡಿ, ಇದುವರೆಗೂ ಯಾವ ನಾಯಕ ನಮ್ಮನ್ನು ನಂಬಿ ಬಂದಿದ್ದರೋ ಅವರನ್ನೆಲ್ಲಾ ನಾವು ನಾಯಕನನ್ನಾಗಿ ಮಾಡಿದ್ದೇವೆ. ಆದರೆ ತಾಲೂಕಿನಲ್ಲಿ ದಲಿತನೊಬ್ಬನನ್ನು ಯಾವ ಪಕ್ಷದವರು ಸಹ ನಾಯಕರನ್ನಾಗಿ ರೂಪಿಸಲಿಲ್ಲ. ಯಾವುದೇ ಪಕ್ಷದ ಸ್ಥಳೀಯ ನಾಯಕರು ನಮ್ಮಲ್ಲಿ ಯಾವ ಪಕ್ಷದವರೊಬ್ಬರನ್ನು ತಾಲೂಕಿನ ಸಾಂವಿಧಾನಿಕವಾಗಿ ಇರುವ ಸಂಸ್ಥೆಗಳಿಗೆ ಅಧ್ಯಕ್ಷನನ್ನಾಗಿ ನೇಮಿಸಿದರೆ ನಾವೆಲ್ಲರೂ ಒಗ್ಗೂಡಿ ಸ್ವಾಗತಿಸುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ದಲಿತ ನಾಯಕರು, ದಲಿತ ಮುಖಂಡರಾದ ವೆಂಕಟಾಚಲಯ್ಯ, ಸಿದ್ದರಾಮು, ಕುಮಾರ್, ನಾಗೇಶ್ ಸೇರಿದಂತೆ ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮಿ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು