Tel: 7676775624 | Mail: info@yellowandred.in

Language: EN KAN

    Follow us :


ವಿಎ ಆತ್ಮಹತ್ಯೆ ಯತ್ನ ಪ್ರಕರಣ: ತಹಶಿಲ್ದಾರ್ ವಿರುದ್ಧ ಪ್ರತಿಭಟನೆ ನಡೆಸಿದ ಕಂದಾಯ ಇಲಾಖೆಯ ಸಿಬ್ಬಂದಿಗಳು.

Posted date: 16 Sep, 2020

Powered by:     Yellow and Red

ವಿಎ ಆತ್ಮಹತ್ಯೆ ಯತ್ನ ಪ್ರಕರಣ: ತಹಶಿಲ್ದಾರ್ ವಿರುದ್ಧ ಪ್ರತಿಭಟನೆ ನಡೆಸಿದ ಕಂದಾಯ ಇಲಾಖೆಯ ಸಿಬ್ಬಂದಿಗಳು.

ಚನ್ನಪಟ್ಟಣ:ಸೆ/16/20/ಬುಧವಾರ.ಸೆಕ್ರೇಟಿಯೇಟ್ ತಹಶಿಲ್ದಾರ್ ನಮಗೆ ಬೇಡ, ಕೆಎಎಸ್ ಮಾಡಿರುವ ಅಧಿಕಾರಿಗಳಿಗೆ ಕಂದಾಯ ಇಲಾಖೆಯ ಆಗುಹೋಗುಗಳ ಅರಿವು ಇರುತ್ತದೆ. ಇವರಿಗೆ ಅಧಿಕಾರ ಬಿಟ್ಟರೆ ಏನೂ ಗೊತ್ತಿರುವುದಿಲ್ಲ. ಪಹಣಿ, ಮ್ಯುಟೇಷನ್, ಸರ್ವೇ ಬಗ್ಗೆ ಕಿಂಚಿತ್ತೂ ಜ್ಞಾನ ಇರುವುದಿಲ್ಲ. ಇಂತಹವರಿಂದಲೇ ಅಧೀನ ಸಿಬ್ಬಂದಿಗಳು ಕಿರುಕುಳ ಅನುಭವಿಸಿ ಆತ್ಮಹತ್ಯೆ ಗೆ ಪ್ರಯತ್ನ ಮಾಡುತ್ತಾರೆ. ಈ ಅಧಿಕಾರಿಯನ್ನು ಈ ಕೂಡಲೇ ಅಮಾನತ್ತು ಮಾಡಬೇಕು. ವಿಧಾನಸೌಧದ ಸಚಿವಾಲಯಕ್ಕೆ ವಾಪಸು ಕರೆಸಿಕೊಳ್ಳಬೇಕು ಎಂದು ಕಂದಾಯ ಇಲಾಖೆ ನೌಕರರ ಸಂಘದ ಜಿಲ್ಲಾಧ್ಯಕ್ಷ ರಮೇಶ್ ಆಗ್ರಹಿಸಿದರು.


ಅವರು ನಿನ್ನೆ ತಗಚಗೆರೆ ಗ್ರಾಮ ಪಂಚಾಯತಿ ಗ್ರಾಮ ಲೆಕ್ಕಾಧಿಕಾರಿ ಕವಿತಾ ಎಂಬುವವರು ತಹಶಿಲ್ದಾರ್ ರವರ ನಿಂದನೆ ನುಡಿಗಳಿಂದ ಬೇಸತ್ತು ಆತ್ಮಹತ್ಯೆ ಗೆ ಪ್ರಯತ್ನಿಸಿದ ಹಿನ್ನೆಲೆಯಲ್ಲಿ, ಇಂದು ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.


*ಡ್ರೈವರ್ ಹೇಳಿದಂತೆ ಕೇಳುತ್ತಾರೆ*

ತಹಶಿಲ್ದಾರ್ ರವರು ಅವರ ಜೀಪ್ ಚಾಲಕ ನಾಗರಾಜು ಹೇಳಿದಂತೆ ಕೇಳುತ್ತಾರೆ. ನಾಗರಾಜು ರವರು ನಮ್ಮ ವಿರುದ್ದ ತಹಶಿಲ್ದಾರ್ ರವರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದು ಡಬಲ್ ಗೇಮ್ ಮಾಡುತ್ತಾರೆ ಎಂದು ಪದಾಧಿಕಾರಿಯೊಬ್ಬರು ಆರೋಪಿಸಿದರು.


ತಾಲ್ಲೂಕು ಸರ್ಕಾರಿ ನೌಕರರ ಅಧ್ಯಕ್ಷ ಚಂದ್ರಶೇಖರ ಮಾತನಾಡಿ ಕೆಳ ಹಂತದ ಸರ್ಕಾರಿ ನೌಕರರನ್ನು ಹಿರಿಯ ಅಧಿಕಾರಿಗಳು ಕೀಳಾಗಿ ನಡೆಸಿಕೊಳ್ಳುತ್ತಿದ್ದು, ಇದು ಹೀಗೆ ಮುಂದುವರೆದರೆ ತಾಲ್ಲೂಕು ಸರ್ಕಾರಿ ನೌಕರರ ಸಂಘದಿಂದ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ. ವಿಎ ಗೆ ಅವಮಾನ ಮಾಡಿರುವ ತಹಶಿಲ್ದಾರ್ ರವರ ನಡೆಯನ್ನು ಖಂಡಿಸುತ್ತೇವೆ ಎಂದರು.


*ನನ್ನ ಪತ್ನಿಗೆ ಆರೋಗ್ಯ ಹದಗೆಟ್ಟರೆ ತಹಶಿಲ್ದಾರರೇ ಹೊಣೆ ಪತಿ*

ಆತ್ಮಹತ್ಯೆ ಗೆ ಪ್ರಯತ್ನಿಸಿದ ಕವಿತಾ ರವರ ಪತಿ ಲಿಂಗರಾಜು ಮಾತನಾಡಿ ಕಳೆದ ಒಂದು ತಿಂಗಳಿನಿಂದಲೂ ತಹಶಿಲ್ದಾರ್ ರವರು ನನ್ನ ಪತ್ನಿಗೆ ಕಿರುಕುಳ ನೀಡುತ್ತಿದ್ದು, ಮಾನಸಿಕವಾಗಿ ನೊಂದಿದ್ದರು. ಮೊನ್ನೆ ದಿನ ಸಾರ್ವಜನಿಕವಾಗಿ ನಿಂದಿಸಿದ್ದರಿಂದ ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಆಕೆ ಗರ್ಭಿಣಿಯಾಗಿದ್ದು, ಮಗುವಿನ ಮೇಲೆ ಪರಿಣಾಮ ಬೀರಲಿದೆ. ಇದಕ್ಕೆ ತಹಶಿಲ್ದಾರ್ ರವರೇ ನೇರ ಹೊಣೆ ಎಂದು ಆರೋಪಿಸಿದರು.


*ವಿಎ ಗಳ ವಿರುದ್ಧ ತಿರುಗಿ ಬಿದ್ದ ಪಬ್ಲಿಕ್*


ವಿಎ ಗಳು ನೇಮಿಸಿದ ಜಾಗದಲ್ಲಿ ಇರುವುದಿಲ್ಲ. ಒಂದು ಸಹಿಗಾಗಿ ಮೂರ್ನಾಲ್ಕು ದಿನಗಳು ಸತಾಯಿಸುತ್ತಾರೆ. ಹಣ ತೆಗೆದುಕೊಳ್ಳದೆ ಯಾವ ಕೆಲಸವನ್ನು ಇವರು ಮಾಡಿಕೊಡುವುದಿಲ್ಲ ಎಂದು ಮಾಧ್ಯಮದವರೆದುರೇ ತಹಶಿಲ್ದಾರ್ ಗೆ ಮನವಿ ಸಲ್ಲಿಸುವ ಮೂಲಕ, ವಿಎಗಳಿಗೆ ಸಾರ್ವಜನಿಕವಾಗಿ ತರಾಟೆಗೆ ತೆಗೆದುಕೊಂಡರು.


*ಪಬ್ಲಿಕ್ ಸಿಡಿದ ಕಾರಣ ಕಛೇರಿಯಲ್ಲಿ ಮಾತನಾಡೋಣಾ ಎಂದ ಪದಾಧಿಕಾರಿಗಳು*

ವಿಎ ಗಳ ವಿರುದ್ಧ ಅವಾಚ್ಯ ಶಬ್ದಗಳಿಂದ ಸಾರ್ವಜನಿಕರು ಮಾತನಾಡಲಾರಂಭಿಸಿದ ನಂತರ ಎಚ್ಚೆತ್ತ ಕಂದಾಯ ಇಲಾಖೆಯ ಪದಾಧಿಕಾರಿಗಳು ತಹಶಿಲ್ದಾರ್ ರವರನ್ನು ನಾಲ್ಕೈದು ಮಂದಿ ಚರ್ಚಿಸಿ ತೀರ್ಮಾನಿಸುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದು ಹಾಸ್ಯಾಸ್ಪದ ಮತ್ತು ಅನುಮಾನಸ್ಪಾದಕ್ಕೆ ಎಡೆಮಾಡಿಕೊಟ್ಟಿತು.


*ಸ್ಪಷ್ಟ ಪಡಿಸಿದ ತಹಶಿಲ್ದಾರ್*

ನಂತರ ಮಾತನಾಡಿದ ತಹಶಿಲ್ದಾರ್ ನಾಗೇಶ್ ರವರು ಸರ್ಕಾರದ ಆದೇಶವನ್ನು ಪಾಲಿಸುವುದು ನನ್ನ ಕರ್ತವ್ಯ. ಸಂಬಂಧಿಸಿದ ಇಲಾಖೆಯ ಮಂತ್ರಿಗಳು ಆದೇಶ ಹೊರಡಿಸಿರುವಂತೆ ನಡೆಯಬೇಕಾಗಿದೆ. ಎಲ್ಲಿ ತಪ್ಪಿದೆಯೋ ಅದನ್ನು ಹೇಳಿ ಮಾಡಿಸುವುದಕ್ಕಾಗಿಯೇ ನಾನು ಇರುವುದು. ನಾನು ಯಾರ ಒತ್ತಡಕ್ಕೂ ಮಣಿಯದೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನಾನು ಆಕೆಗೆ ಯಾವುದೇ ಕಿರುಕುಳ ನೀಡಿಲ್ಲ. ನಾನು ಪ್ರತಿಯೊಬ್ಬರಿಗೂ ಗೌರವ ಕೊಡುವ ವ್ಯಕ್ತಿ ಎಂದರು. ಯಾರದೋ ಒತ್ತಡಕ್ಕಾಗಲಿ, ಬೆದರಿಕೆಗಾಗಲಿ ಬಗ್ಗಿ ನಡೆಯುವುದಿಲ್ಲ. ಎಲ್ಲಿ ಸಮಸ್ಯೆ ಇದೆಯೋ ಆ ಜಾಗಕ್ಕೆ ಹೋಗಿ ಸಮಸ್ಯೆ ಬಗೆಹರಿಸುತ್ತೇನೆ. ಕಛೇರಿಯಲ್ಲಿ ಕುಳಿತು ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.


*ಆತ್ಮಹತ್ಯೆ ಮತ್ತು ಪ್ರತಿಭಟನೆ ಅಪರಾಧವಲ್ಲವೆ*

ನಮ್ಮ ಕಾನೂನು ಪ್ರಕಾರ ಆತ್ಮಹತ್ಯೆ ಅಪರಾಧ, ಆಕೆ ಆತ್ಮಹತ್ಯೆ ಗೆ ಬಳಸಿರುವುದು ನಿಷೇಧವಿರುವ ನೋವಿನ ಮಾತ್ರೆ, ಮೂಲಗಳ ಪ್ರಕಾರ ಆಕೆ  ನೋವಿಗಾಗಿ ಪ್ರತಿದಿನ ಸೇವಿಸುತ್ತಿದ್ದುದಾಗಿ ತಿಳಿದುಬಂದಿದೆ.

ಸರ್ಕಾರಿ ನೌಕರರು ಸಹ ಅವರ ಮೇಲಾಧಿಕಾರಿಗಳಿಗೆ ಮನವಿ ನೀಡಬಹುದೇ ವಿನಹ ಪ್ರತಿಭಟನೆ ನಡೆಸುವ ಹಾಗಿಲ್ಲ. ಆದರೂ ಕಂದಾಯ ಇಲಾಖೆಯ ಎಲ್ಲಾ ನೌಕರರು ಕೆಲಸಕ್ಕೆ ಗೈರು ಹಾಜರಾಗಿ ಪ್ರತಿಭಟನೆ ನಡೆಸಿದ್ದು ಯಾಕೆ ?

ಇವರೆಲ್ಲರೂ ತಿಳುವಳಿಕೆ ನೀಡುವ ಮಂದಿ ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ನಡೆಸುವ ವೇಳೆ ಬೆರಳೆಣಿಕೆ ಮಂದಿ ಬಿಟ್ಟರೆ ಬಹುತೇಕರು ಮಾಸ್ಕ್ ಧರಿಸಿರಲಿಲ್ಲ. ಸಾಮಾಜಿಕ ಅಂತರವನ್ನಂತೂ ಓದುಗರೇ ಪೋಟೋವನ್ನು ಗಮನಿಸಬಹುದು.


ನಂತರ ಕಂದಾಯ ಇಲಾಖೆಯ ನೌಕರರ ಸಂಘದ ಪದಾಧಿಕಾರಿಗಳು ರಾಮನಗರದ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ತಹಶಿಲ್ದಾರ್ ವಿರುದ್ಧ ದೂರು ನೀಡಿದ್ದಾಗಿ ತಿಳಿದುಬಂದಿದೆ.


ಪ್ರತಿಭಟನೆಯಲ್ಲಿ 

ನೌಕರರ ಸಂಘದ ಜಿಲ್ಲಾ ಉಪಾಧ್ಯಕ್ಷ ಹರ್ಷ, ತಾಲ್ಲೂಕು ಸಂಘದ ಮೋಹನ್, ತಂಗರಾಜು,ವೆಂಕಟೇಶ್, ರಾಜಶೇಖರ, ಗಿರೀಶ್ ಶಿವು ಹಾಗೂ ಕಂದಾಯ ಇಲಾಖೆಯ ನೌಕರರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑