ಪಿತೃಪಕ್ಷ ಹಬ್ಬಕ್ಕೆ ಜನರ ತೀವ್ರಾಶಕ್ತಿ: ವ್ಯಾಪಾರ ವಹಿವಾಟು ನಿರಾಶಕ್ತಿ
ಚನ್ನಪಟ್ಟಣ:ಸೆ/17/20/ಗುರುವಾರ. ರಾಜ್ಯದಲ್ಲಿ ಕೋವಿಡ್ ನಿಯಮ ಜಾರಿಯಲ್ಲಿ ಇದೆ. ಅದು ಮದುವೆ, ತಿಥಿಗಳು ಹಾಗೂ ಸಾರ್ವಜನಿಕ ಸಮಾರಂಭಗಳಿಗೆ ಸೀಮಿತವಾಗಿವೆ.
ಪಿತೃಪಕ್ಷ ಹಬ್ಬವೂ ಪ್ರತಿ ವರ್ಷವೂ ಸಹ ಬರುವಂತಹದ್ದು, ತಮ್ಮ ಅಗಲಿದ ಜನ್ಮದಾತರಿಗೆ ಎಡೆ ಹಾಕುವುದು ಸಾಂಪ್ರದಾಯಿಕವಾಗಿ ಬೆಳೆದು ಬಂದಿದೆ.
ಈ ಪಕ್ಷವು ಬಾದ್ರಪದ ಮಾಸದ ಪೌರ್ಣಮಿಯಿಂದ ಶುರುವಾಗಿ, ಮಹಾಲಯ ಅಮಾವಾಸ್ಯೆ ಯವರೆಗೆ ಮುಂದುವರೆಯುತ್ತದೆ. ಅದರಲ್ಲಿಯೂ ಕೆಲವರು ವಿಜಯ ದಶಮಿಯವರೆಗೂ ಮುಂದುವರಿಸುತ್ತಾರೆ.
ಕುಟುಂಬದಲ್ಲಿ ಯಾವುದೇ ವ್ಯಕ್ತಿ ಸತ್ತ ಒಂದು ವರ್ಷದವರೆಗೂ ಮನೆಯಲ್ಲಿ ಎಡೆ ಹಾಕುವ ಸಂಪ್ರದಾಯವಿಲ್ಲ. ಗಂಡು ಮಕ್ಕಳಿಗೆ ಮದುವೆ ಮಾಡುವುದಿಲ್ಲ. ಆದರೆ ಹೆಣ್ಣು ಮಕ್ಕಳಿಗೆ ಮದುವೆ ಮಾಡಬಹುದು. ಯಾಕೆಂದರೆ ಅದು ಕನ್ಯಾದಾನವಾಗುತ್ತದೆ.
ಹಿರಿಯರ ಸ್ಮರಣೆಯೇ
ಪಿತೃಪಕ್ಷ. ಅಂದರೆ ತಮ್ಮ ಕುಟುಂಬದಲ್ಲಿ ಆವರೆಗೆ ಯಾರ್ಯಾರು ಸತ್ತಿದ್ದಾರೋ ಅವರೆಲ್ಲರಿಗೂ ಸೇರಿ ಪಿಂಡಹಾಕುವುದು ಮೂಲ ಉದ್ದಿಶ್ಯ.
ಬೇರೆ ಬೇರೆ ಧರ್ಮದವರೂ ಸಹ ಬೇರೆ ಬೇರೆ ಸಂದರ್ಭದಲ್ಲಿ ತಮ್ಮ ಹಿರಿ ಯರನ್ನು ಸ್ಮರಿಸಿಕೊಳ್ಳುವ ಸಂದರ್ಭವನ್ನು ಸೃಷ್ಟಿಸಿಕೊಂಡಿದ್ದಾರೆ. ಜನ್ಮದಾತರನ್ನು ಸ್ಮರಿಸುವುದು ಉತ್ತಮ ಬೆಳವಣಿಗೆ. ಆದರೆ ಜೀವಂತವಿದ್ದಾಗ ಸರಿಯಾಗಿ ನೋಡಿ ಕೊಳ್ಳಬೇಕಾಗಿದೆ.
ಕಳೆದ ವರ್ಷ ಪಿತೃ ಪಕ್ಷದ ಸಂದರ್ಭದಲ್ಲಿ ಗ್ರಾಮಾಂತರ ಪ್ರದೇಶ ಹಾಗೂ ಪಟ್ಟಣ ಪ್ರದೇಶ ದಲ್ಲಿ ವಿಶೇಷವಾದ ರೀತಿಯಲ್ಲಿ ಹಬ್ಬ ಆಚರಿಸಲಾಗುತ್ತಿತ್ತು.
ನಮ್ಮಲ್ಲಿ ಒಂದು ಗಾದೆ ಮಾತಿದೆ ‘ಮಗನನ್ನು ಮಾರಿಯಾದರೂ ಪಕ್ಷ ಆಚರಿಸು’ ಎಂಬುದು. ಅದನ್ನು ಆಧಾರವಾಗಿಟ್ಟು ಕೊಂಡು ಸಾಕಷ್ಟು ಜನರ ಮನೆಯಲ್ಲಿ ಎಂತಹದ್ದೇ ಸಮಸ್ಯೆ ಇದ್ದರೂ ಸಹ ಪಕ್ಷಾಚರಣೆಯನ್ನು ಮಾಡುವುದು ವಾಡಿಕೆಯಲ್ಲಿದೆ.
ಹಿಂದಿನ ವರ್ಷಗಳಿಗೆ ಹೋಲಿಕೆ ಮಾಡಿಕೊಂಡರೆ ಈ ಸಾರಿ ಪಿತೃಪಕ್ಷದ ಭರಾಟೆಯು ಕಡಿಮೆ ಇದೆ ಎಂದು ಭಾವಿಸಲಾಗಿದೆ.
ಆದರೂ ಚನ್ನಪಟ್ಟಣ ಪೇಟೆಯಲ್ಲಿ ಕಳೆದ 8 ತಿಂಗಳ ಈಚೆಗೆ ಹೋಲಿಸಿಕೊಂಡರೆ, ಈ ಒಂದು ಸಂದರ್ಭಕ್ಕೆ ವ್ಯಾಪಾರ ವಹಿವಾಟು ವಾಸಿ ಎಂತಲೇ ಹೇಳುತ್ತಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು