Tel: 7676775624 | Mail: info@yellowandred.in

Language: EN KAN

    Follow us :


ರಾಮನಗರ ಟೂರಿಸಂ ಫೋಟೊ ಕಾಂಟೆಸ್ಟ್ 2020 ರಲ್ಲಿ ವಿಜೇತರಿಗೆ ಪ್ರಶಸ್ತಿಪತ್ರ & ನಗದು ಬಹುಮಾನ ವಿತರಿಸಿದ - ರಾಮನಗರ ಜಿ.ಪಂ. ಸಿ.ಇ.ಒ ಇಕ್ರಮ್

Posted date: 29 Sep, 2020

Powered by:     Yellow and Red

ರಾಮನಗರ ಟೂರಿಸಂ ಫೋಟೊ ಕಾಂಟೆಸ್ಟ್ 2020 ರಲ್ಲಿ ವಿಜೇತರಿಗೆ ಪ್ರಶಸ್ತಿಪತ್ರ & ನಗದು ಬಹುಮಾನ ವಿತರಿಸಿದ - ರಾಮನಗರ ಜಿ.ಪಂ. ಸಿ.ಇ.ಒ ಇಕ್ರಮ್

ರಾಮನಗರ ಜಿಲ್ಲಾ ಪಂಚಾಯಿತಿಯು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಜಿಲ್ಲೆಯಲ್ಲಿರುವ ಪ್ರವಾಸಿ ಸ್ಥಳಗಳನ್ನು ಹುಡುಕಲು ಫೇಸ್‌ಬುಕ್‌ನಲ್ಲಿ ಜುಲೈ 24 ರಂದು ಛಾಯಚಿತ್ರ ಸ್ಪರ್ಧೆಗೆ ಚಾಲನೆ ನೀಡಲಾಗಿತ್ತು. ಈ ಸ್ಪರ್ಧೆಯಲ್ಲಿ ಸುಮಾರು 150ಕ್ಕೂ ಹೆಚ್ಚು ಅಭ್ಯರ್ಥಿಗಳು ಪಾಲ್ಗೊಳ್ಳುವ ಮೂಲಕ ಸುಮಾರು 500 ಕ್ಕೂ ಹೆಚ್ಚು ಪೋಟೊಗಳನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದರು. ಈ ಛಾಯಚಿತ್ರ ಸ್ಪರ್ಧೆ ರಾಮನಗರದ ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್  ಸಹಕಾರ ನೀಡಿದೆ ಜೊತೆಗೆ  ಟೆಕ್ನಿಕಲ್ ಸಹಾಯವನ್ನು ಯೆಲ್ಲೊ ಅಂಡ್ ರೆಡ್ ಸರ್ವೀಸ್.ಪ್ರೈ.ಲಿ. ನೀಡಿದೆ.


ದಿನಾಂಕ: 29/09/2020 ರ ಮಂಗಳವಾರ  ಜಿಲ್ಲಾ ಪಂಚಾಯ್ತಿ ಮೀಟಿಂಗ್ ಹಾಲ್ ನಲ್ಲಿ  ಛಾಯಚಿತ್ರ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಸಿ.ಇ.ಒ ಆದ ಶ್ರೀ ಇಕ್ರಮ್‌ರವರು, ರಾಮನಗರ ಪ್ರವಾಸೋದ್ಯ ಅಭಿವೃದ್ದಿ ಅಧಿಕಾರಿ ಇಮ್ರಾನ್, ಹಾಗೂ ಯೆಲ್ಲೊ ಅಂಡ್ ಫೌಂಡೇಷನ್ಸ್  ಅಧ್ಯಕ್ಷರಾದ ಆರ್.ರಾಘವೇಂದ್ರ, ಸಂಸ್ಥಾಪನಾ ಅಧ್ಯಕ್ಷರಾದ ಅಮಿತ್‌ರಾಜ್‌ಶಿವಾ ಹಾಗೂ ಸಂಸ್ಥೆಯ ಡೈರೆಕ್ಟರ್ ಗಳಲ್ಲಿ ಒಬ್ಬರಾದ ಶ್ರೀಮತಿ ಅನುರಾಧ ರವರು ಪಾಲ್ಗೊಂಡಿದ್ದರು.


ಸ್ಪರ್ಧೆಯಲ್ಲಿ ಅತ್ಯುತ್ತಮ ಛಾಯಚಿತ್ರ ತೆಗೆದ ಶಶಿಕುಮಾರ್ ಬಿ, ಚೇತನ್ ಸಿದ್ದು, ಅಜಯ್ ಗೌಡ ಮತ್ತು ರಘುಕುಮಾರ್ ಸಿ. ಇವರಿಗೆ ಇಕ್ರಮ್ ರವರು ಪ್ರಶಸ್ತಿಪತ್ರ ಹಾಗೂ 1 ಸಾವಿರ ನಗದು ಬಹುಮಾನ ವಿತರಿಸಿ ಅಭಿನಂದನೆ ಹೇಳಿದರು. ಹಾಗೂ ಇನ್ನುಳಿದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ ಪ್ರೋತ್ಸಾಹಿಸಲಾಯಿತು. ಎಲ್ಲಾ ಛಾಯಚಿತ್ರ ಅಭ್ಯರ್ಥಿಗಳನ್ನು ಕುರಿತು ಸಿ.ಇ.ಒ ಅವರು ರಾಮನಗರ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರವಾಸಿ ತಾಣಗಳನ್ನು ಗುರುತಿಸಿ ಬೆಳಕಿಗೆ ತರಲು ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ ನಿಮಗೆ ಯಾವುದೇ ರೀತಿಯ ಸಹಕಾರ ಬೇಕಾದಲ್ಲಿ ನಮ್ಮ ಪ್ರವಾಸೋದ್ಯಮ ವಿಭಾಗದ ಅಧಿಕಾರಿಗಳನ್ನು ಸಂಪರ್ಕಿಸಿ ಎಂದು ಹೇಳಿದರು. 


ಅಭ್ಯರ್ಥಿಗಳಲ್ಲಿ ಕೆಲವರು ತಮ್ಮ ಅನಿಸಿಕೆ ಮತ್ತು ಅಭಿಪ್ರಾಯಗಳನ್ನು ಹಂಚಿಕೊಳ್ಳುವ ಮೂಲಕ ರಾಮನಗರ ಜಿಲ್ಲೆಯಲ್ಲಿ ಇರುವ ಪ್ರವಾಸಿ ಸ್ಥಳಗಳ ಸ್ವಚ್ಚತೆ ಮತ್ತು ಸುವ್ಯವಸ್ಥಿತ ರಸ್ತೆಯ ಸೌಲಭ್ಯವನ್ನು ಒದಗಿಸಬೇಕು. ಹಾಗೂ ಬೆಳಕಿಗೆ ಬರದೇ ಇರುವ ಅದೆಷ್ಟೂ ಪ್ರವಾಸಿ ಸ್ಥಳಗಳ ಪುನರುಜ್ಜೀವನಕ್ಕಾಗಿ ಆಡಳಿತ ವರ್ಗ ಸಹಕರಿಸಬೇಕೆಂದರು.

 

ಇನ್ನುಳಿದಂತೆ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಸಿಬ್ಬಂಧಿವರ್ಗ ಮತ್ತು ಯೆಲ್ಲೊ ಅಂಡ್ ರೆಡ್ ಫೌಂಡೇಷನ್ಸ್ ಸಂಸ್ಥೆಯ ಸದಸ್ಯರು ಪಾಲ್ಗೊಂಡಿದ್ದರು. 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑