ಗಾಂಧಿಗೆ 151 ಆದರೂ, ಶಿಥಿಲಾವಸ್ಥೆಯಲ್ಲೇ ಮುಂದುವರೆದ ಗಾಂಧಿಭವನ
ಚನ್ನಪಟ್ಟಣ:ಅ/01/20/ಗುರುವಾರ. ನಗರದ ಹೃದಯ ಭಾಗದಲ್ಲಿರುವ ಗಾಂಧಿಭವನವನ್ನು ಸ್ವಾತಂತ್ರ್ಯ ಪೂರ್ವದಲ್ಲಿ, ಗಾಂಧೀಜಿಯವರ ಭೇಟಿಯ ನೆನಪಿಗಾಗಿ ನಿರ್ಮಿಸಿ, ಇಂದು ಶಿಥಿಲಾವಸ್ಥೆ ತಲುಪಿರುವ ಗಾಂಧಿಭವನಕ್ಕೆ ಕಾಯಕಲ್ಪ ನೀಡದಿರುವುದರಿಂದ ಭೂತ ಬಂಗಲೆಯಾಗಿ ಪರಿವರ್ತಿತಗೊಂಡಿದೆ.
ಕಳೆದ ವರ್ಷ ಅಂದರೆ 150 ನೇ ಗಾಂಧಿ ಜಯಂತಿಯಂದು ಹಿರಿಯ ಪತ್ರಕರ್ತ ಸು ತ ರಾಮೇಗೌಡ ಮತ್ತು ಗೋ ರಾ ಶ್ರೀನಿವಾಸ ಹಾಗೂ ಕೆಲ ಸಮಾನ ಮನಸ್ಕರು ಒಗ್ಗೂಡಿ ಗಾಂಧಿ ಭವನದ ಮುಂದೆ ಸತ್ಯಾಗ್ರಹ ನಡೆಸಿದ್ದರು.
ಇದು ಪತ್ರಿಕೆಗಳಲ್ಲಿ ಪ್ರಕಟವಾದ ನಂತರ ಅಂದಿನ ವಾರ್ತಾಧಿಕಾರಿ ಶಂಕರಪ್ಪ ನವರು ಪತ್ರಕರ್ತ ಗೋ ರಾ ಶ್ರೀನಿವಾಸ ರವರಿಗೆ ಕರೆ ಮಾಡಿ ನಮ್ಮ ಇಲಾಖೆಯ ವತಿಯಿಂದ ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ಗಾಂಧಿಭವನವನ್ನು ನಿರ್ಮಿಸಿಕೊಡಲಾಗುವುದು ಎಂದು ತಿಳಿಸಿದ್ದರು.
ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ ರವರು ಸಹ ಇದಕ್ಕೆ ಹಸಿರು ನಿಶಾನೆ ನೀಡಿದ್ದಾರೆ ಎಂದು ಹೇಳಿದ್ದರು. ಅವರು ವರ್ಗವಾಗಿ ಹೋದ ನಂತರ ಬಂದ ಅಧಿಕಾರಿಗಳು ಇದರ ಬಗ್ಗೆ ಗಮನ ನೀಡದಿರುವುದು ಸಹ ಗಾಂಧಿಜೀಗೆ ಮಾಡಿದ ಅಪಮಾನವಾಗಿದೆ.
ಗಾಂಧೀಜಿಯವರು ಭೇಟಿ ನೀಡಿದ ನೆನಪಿಗಾಗಿ ಈ ಜಾಗವನ್ನು ಆರ್ಯಮೂರ್ತಿ ಎಂಬುವವರು ಗಾಂಧಿ ಭವನವನ್ನು ನಿರ್ಮಿಸಲು ಉದಾರವಾಗಿ ನೀಡಿದ್ದರು. ಆರ್ಯಮೂರ್ತಿಯವರ ಮಗು ಸಹ ಜೊತೆಯಲ್ಲೇ ಇದ್ದುದರಿಂದ ಆ ಮಗುವಿಗೆ ಸ್ವತಃ ಗಾಂಧೀಜಿಯವರೇ ಅಭಯ ಮೂರ್ತಿ ಎಂದು ಹೆಸರನ್ನಿಟ್ಟರು. ತದ ನಂತರ ಈ ಭೂಮಿಯು ಅನಧಿಕೃತವಾಗಿ ಉಳ್ಳವರ ಪಾಲಾಗಿ, ಆ ಜಾಗದಲ್ಲಿರುವ ಅಂಗಡಿ ಮಳಿಗೆಗಳ ಬಾಡಿಗೆಯನ್ನು ಪಡೆದುಕೊಳ್ಳುತ್ತಿದ್ದರೂ ಸಹ ಗಾಂಧಿಭವನಕ್ಕೆ ಕಾಯಕಲ್ಪ ನೀಡದಿರುವುದು ಚನ್ನಪಟ್ಟಣ ತಾಲ್ಲೂಕಿಗೆ ಮಾಡಿದ ಅಪಮಾನ ಎನ್ನುತ್ತಾರೆ ಹಿರಿಯ ಪತ್ರಕರ್ತ ಸು ತ ರಾಮೇಗೌಡರು.
ಸೆಪ್ಟೆಂಬರ್ 23 ನೇ ತಾರೀಖಿನಲ್ಲಿ ಗಾಂಧಿ ಭವನದ ಎಲ್ಲಾ ಪ್ರಕ್ರಿಯೆ ಮುಗಿದಿದೆ. ಜಿಲ್ಲಾಧಿಕಾರಿಗಳ ಬಳಿ ಸಭೆ ನಡೆಸಲು ಸಮಯ ಕೇಳಲಾಗಿದೆ. ನಮ್ಮಲ್ಲಿ ಹಣ ಇದ್ದು ನವೆಂಬರ್ ತಿಂಗಳ ಮೂರನೇ ವಾರದ ವೇಳೆಗೆ ಹಳೆಯ ಕಟ್ಟಡವನ್ನು ಉರುಳಿಸಿ ಹೊಸ ಕಟ್ಟಡ ನಿರ್ಮಿಸಲು ಯೋಜಿಸಲಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ನವೀನ್ ಕುಮಾರ್ ರವರು ತಿಳಿಸಿದರು.
ಗಾಂಧೀಜಿಯವರ ನೆನಪು ಶಾಶ್ವತವಾಗಿ ಉಳಿಯಬೇಕಾದರೆ ಮೂಲ ದಾಖಲಾತಿಗಳನ್ನು ಕ್ರೋಢೀಕರಿಸಿ, ಬಲಾಢ್ಯರ ಕಪಿ ಮುಷ್ಠಿಯಿಂದ ಬಿಡಿಸಿ, ಸರ್ಕಾರವೇ ಮುಂದೆ ನಿಂತು ಗಾಂಧಿಭವನವನ್ನು ಮರುನಿರ್ಮಿಸಬೇಕಾಗಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು