ಬಲಾಢ್ಯರಿಂದ ಖುದ್ದು ನಿಂತು ಒತ್ತುವರಿ ತೆರವುಗೊಳಿಸಿದ ತಹಶಿಲ್ದಾರ್ ನಾಗೇಶ್
ಚನ್ನಪಟ್ಟಣ:ಅ/01/20/ಗುರುವಾರ. ಮೈಲನಾಯಕನಹೊಸಹಳ್ಳಿ ಗ್ರಾಮದಲ್ಲಿ ಕೆಲವು ಬಲಾಢ್ಯರು ಕಾಲುವೆ ಒತ್ತುವರಿ ಮಾಡಿಕೊಂಡು, ಹಿಂದಿನ ಜಮೀನಿಗೆ ಹೋಗಲು ಉಳಿದ ಜಮೀನು ಮಾಲೀಕರಿಗೆ ದಾರಿ ನೀಡದಿರುವುದರ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ತಹಶಿಲ್ದಾರ್ ನಾಗೇಶ್ ರವರು ಖುದ್ದು ನಿಂತು ಜೆಸಿಬಿಗಳ ಮೂಲಕ, ಸಾರ್ವಜನಿಕರ ಸಮ್ಮುಖದಲ್ಲಿ ಒತ್ತುವರಿ ತೆರವುಗೊಳಿಸಿದರು.
ಮೈಲನಾಯಕನಹೊಸಹಳ್ಳಿ ಗ್ರಾಮದ ರೈತ ಮಹಿಳೆಯರು ನಿನ್ನೆ ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟಿಸಿ, ತಹಶಿಲ್ದಾರ್ ರವರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ತಹಶಿಲ್ದಾರ್ ರವರು ಈ ಕ್ರಮ ಕೈಗೊಂಡರು.
ರಾಜ್ಯ ಒಕ್ಕಲಿಗರ ಸಂಘದ ಮಾಜಿ ನಿರ್ದೇಶಕ ಎಂ ಎ ಆನಂದ್ ಸೇರಿದಂತೆ ಹಲವಾರು ಮಂದಿ ಹರೂರು ಕೆರೆಯಿಂದ ಮಳೂರು ಕೆರೆಗೆ ನೀರು ಹರಿದು ಹೋಗುವ ಕಾಲುವೆಯನ್ನು ಒತ್ತುವರಿ ಮಾಡಿಕೊಂಡಿದ್ದರಿಂದ ಹಿಂದಿನ ತಹಶಿಲ್ದಾರ್ ಸುದರ್ಶನ್ ರವರಿಗೆ ಮನವಿ ಸಲ್ಲಿಸಿದರು. ಮನವಿಯ ನಂತರ ಅವರು ಸರ್ವೇ ಮಾಡಿಸಿ ಕಲ್ಲು ಹಾಕಿದ್ದು ಗ್ರಾಮ ಪಂಚಾಯತಿ ಯವರು ತೆರವಿಗೆ ಹೋದ ಸಂದರ್ಭದಲ್ಲಿ ಮತ್ತೆ ತಕರಾರು ತೆಗೆದಿದ್ದನ್ನು ಇಂದಿನ ತಹಶಿಲ್ದಾರ್ ರವರಿಗೆ ಮನವರಿಕೆ ಮಾಡಿಕೊಟ್ಟಿದ್ದರು.
ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾದಿಕಾರಿ, ರೆವಿನ್ಯೂ ಇನ್ಸ್ಪೆಕ್ಟರ್, ಗ್ರಾಮ ಲೆಕ್ಕಾಧಿಕಾರಿ, ಸರ್ವೇಯರ್ ಹಾಗೂ ಮೂರು ಜೆಸಿಬಿಗಳ ಸಮೇತ ಒತ್ತುವರಿ ಜಾಗಕ್ಕೆ ತೆರಳಿದ ಅವರು ನಕ್ಷೆ ಹಿಡಿದು ಬೆಳಿಗ್ಗೆ ಹತ್ತು ಗಂಟೆಗೆ ತೆರಳಿ ಸಂಜೆ ಆರು ಗಂಟೆಯ ವರೆಗೂ ಒತ್ತುವರಿ ತೆರವುಗೊಳಿಸಿದರು.
ಈ ನಡುವೆ ಕೆಲವರು ಗಲಾಟೆಯನ್ನು ಮಾಡಿದ್ದು ಇದಕ್ಕೆ ಸೊಪ್ಪು ಹಾಕದ ಅಧಿಕಾರಿಗಳು ಸರ್ಕಾರದ ಆದೇಶದನ್ವಯ ಕಾಲುವೆ ಒತ್ತುವರಿಯನ್ನು ತೆರವುಗೊಳಿಸಿ ಮೈಲನಾಯಕನಹೊಸಹಳ್ಳಿ ಗ್ರಾಮಸ್ಥರಿಂದ ಪ್ರಶಂಸೆಗೊಳಪಟ್ಟರು.
ನಾನು ಯಾರ ಮುಲಾಜಿಗೂ ಒಳಗಾಗುವುದಿಲ್ಲ. ಸಾರ್ವಜನಿಕರ ಕೆಲಸಮಾಡಲು ನನ್ನನ್ನು ಸರ್ಕಾರ ನಿಯೋಜಿಸಿದೆ. ಅದರಲ್ಲೂ ಸರ್ಕಾರದ ಯಾವುದೇ ಜಾಗವನ್ನು ಯಾರೇ ಒತ್ತುವರಿ ಮಾಡಿಕೊಂಡ ದೂರು ಬಂದರೂ ಸಹ ಶೀಘ್ರ ಕ್ರಮಕೈಗೊಳ್ಳುತ್ತೇನೆ ಎಂದು *ತಹಶಿಲ್ದಾರ್ ನಾಗೇಶ್* ರವರು ತಿಳಿಸಿದರು.
ಇದು ನಮಗೆ ಬಹಳ ವರ್ಷಗಳಿಂದ ಕಗ್ಗಂಟಾಗಿದ್ದು ಗ್ರಾಮಸ್ಥರ ಮನವಿಗೆ ಸ್ಪಂದಿಸಿ, ಒತ್ತುವರಿ ತೆರವುಗೊಳಿಸುತ್ತಿರುವುದು ಸಂತಸದ ವಿಷಯ. ರಸ್ತೆಯ ಹಿಂದಿನ ಜಮೀನಿಗೆ ಹೋಗಲು ದಾರಿಯಿಲ್ಲದೆ ಎಷ್ಟೋ ಮಂದಿ ತಮ್ಮ ಜಮೀನು ಮಾರಿಕೊಂಡ ಉದಾಹರಣೆಗಳಿವೆ. ಇಂದಿನಿಂದ ಜಮೀನು ಮಾಲೀಕರು ವ್ಯವಸಾಯ ಮಾಡಲಡ್ಡಿಯಾಗದು ಎಂದು *ಗ್ರಾಮ ಪಂಚಾಯತಿ ಮಾಜಿ ಸದಸ್ಯ ಅಂಕೇಗೌಡ* ತಿಳಿಸಿದರು.
ಅದು ನನಗೆ ಒತ್ತುವರಿ ಎಂದು ಗೊತ್ತಿಲ್ಲ. ನನ್ನ ಜಮೀನಿಗೆ ಹೋಗಲು ನಾನು ದಾರಿ ಮಾಡಿಕೊಂಡಿದ್ದೆ. ಅದು ಕಾಲುವೆಯ ಜಾಗ ಎಂದು ತಹಶಿಲ್ದಾರ್ ರವರು ದಾಖಲೆ ತೋರಿಸಿ ಗೇಟು ಮತ್ತು ಫೆನ್ಸಿಂಗ್ ಅನ್ನು ತೆರವುಗೊಳಿಸಿದ್ದಾರೆ. ಹದ್ದುಬಸ್ತಿನ ನಂತರ ಸತ್ಯಾಸತ್ಯತೆ ತಿಳಿಯಲಿದೆ ಎಂದು *ಒತ್ತುವರಿದಾರ ಎಂ ಎ ಆನಂದ್* ಹೇಳಿಕೆ ನೀಡಿದರು.
ನಮ್ಮ ಭೂಮಿಯು ರಸ್ತೆಯಿಂದ ದೂರವಿದ್ದು, ಅಲ್ಲಿಗೆ ಹೋಗಿ ಇದುವರೆಗೂ ವ್ಯವಸಾಯ ಮಾಡಲಾಗುತ್ತಿರಲಿಲ್ಲ. ಕನಿಷ್ಠ ಪಕ್ಷ ಜಾನುವಾರುಗಳಿಗೆ ಮೇವು ತರಲಾಗುತ್ತಿರಲಿಲ್ಲ. ನಮ್ಮ ಮನವಿಗೆ ಸ್ಪಂದಿಸಿ ಶೀಘ್ರ ಕ್ರಮಕೈಗೊಂಡ ತಹಶಿಲ್ದಾರ್ ರವರಿಗೆ ನಾವು ಅಭಿನಂದನೆಗಳನ್ನು ತಿಳಿಸುತ್ತೇವೆ.
*ಜ್ಯೋತಿ ಕರಿಗೌಡ. ಗ್ರಾಮಸ್ಥರು.
ಒತ್ತುವರಿ ತೆರವು ವೇಳೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಚಂದ್ರು, ಆರ್ ಐ ಕಾಂತರಾಜು, ವಿಎ ರವಿಕುಮಾರ್, ಸರ್ವೇಯರ್ ಹಾಗೂ ಗ್ರಾಮಸ್ಥರಾದ ರಾಜಶೇಖರ, ಕಾರು ಉಮೇಶ್, ಗಂಗಮ್ಮ ಸೇರಿದಂತೆ ಹಲವರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು