ಸಿಎಂಸಿ ಲೇಔಟ್ ನಲ್ಲಿ ಅಕ್ರಮ ಎಂದು ದೂರಿದ ಹಿನ್ನೆಲೆಯಲ್ಲಿ ತಳಪಾಯ ತೆರವುಗೊಳಿಸಿದ ಸ್ಲಂ ಬೋರ್ಡ್ ನ ಅಧಿಕಾರಿಗಳು
ಚನ್ನಪಟ್ಟಣ:ಅ/14/20/ಬುಧವಾರ.
ನಗರದ ಸಿಎಂಸಿ ಲೇಔಟ್ ನಲ್ಲಿ ಕೊಳಚೆ ನಿರ್ಮೂಲನಾ ಮಂಡಳಿಯವರು ಮನೆಗಳನ್ನು ನಿರ್ಮಿಸಲು ತಳಪಾಯ ಹಾಕಿದ್ದು, ನಗರಸಭೆಯ ಪೌರಾಯುಕ್ತರ ಮೌಖಿಕ ಆದೇಶ ಮೇರೆಗೆ ಇಂದು ತಳಪಾಯವನ್ನು ತೆರವುಗೊಳಿಸಿ ಯಥಾಸ್ಥಿತಿ ಕಾಪಾಡಿಕೊಳ್ಳಲು ಮುಂದಾಗಿದ್ದಾರೆ.
ನಗರಸಭೆಗೆ ಸೇರಿದ ಆಸ್ತಿಯಲ್ಲಿ ಸ್ಲಂ ಬೋರ್ಡ್ ನವರು ಮನೆ ನಿರ್ಮಾಣಕ್ಕೆ ತಳಪಾಯ ಹಾಕಿದ್ದನ್ನು ಗಮನಿಸಿದ ಸಾರ್ವಜನಿಕರು ನಗರಸಭೆ ಗೆ ಮೌಖಿಕ ದೂರು ನೀಡಿದರು. ಸ್ಥಳಕ್ಕೆ ಆಗಮಿಸಿದ ಪೌರಾಯುಕ್ತ ಶಿವನಂಕಾರಿಗೌಡ ಮತ್ತು ಅಧಿಕಾರಿಗಳು ಸ್ಲಂ ಬೋರ್ಡ್ ನ ಇಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ದಾಖಲೆಗಳ ಇತ್ಯರ್ಥವಾಗುವ ತನಕ ತಳಪಾಯವನ್ನು ತೆರವುಗೊಳಿಸಬೇಕೆಂದು ಆದೇಶ ನೀಡಿದ್ದರು.
ಸ್ಪಂದಿಸಿದ ಕೊಳಚೆ ನಿರ್ಮೂಲನಾ ಮಂಡಳಿಯ ಇಂಜಿನಿಯರ್ ಶಶಿಕುಮಾರ್ ಮತ್ತು ಗುತ್ತಿಗೆದಾರ ಸಚಿನ್ ರವರು ಇಂದು ಬೆಳಿಗ್ಗೆ ತಳಪಾಯ ತೆರವುಗೊಳಿಸಿ, ಯಥಾಸ್ಥಿತಿ ಕಾಪಾಡುವ ಮೂಲಕ ಸಾರ್ವಜನಿಕರ ಆಪಾದನೆಗೆ ಅಂತ್ಯ ಹಾಡಿದರು.
ನಾವು ಮನೆ ನಿರ್ಮಿಸಲು ಬೇಕಾದ ದಾಖಲೆಗಳನ್ನು ಫಲಾನುಭವಿಗಳು ತಲುಪಿಸಿರುವುದರಿಂದ ನಮ್ಮ ಗುತ್ತಿಗೆದಾರರು ತಳಪಾಯ ನಿರ್ಮಿಸಿದ್ದರು. ನಗರಸಭೆಯ ಆಯುಕ್ತರ ಮೌಖಿಕ ಆದೇಶದ ಮೇರೆಗೆ ಹಾಗೂ ಪತ್ರಿಕೆಯಲ್ಲಿ ಪ್ರಕಟವಾದ ನಂತರ ತೆರವುಗೊಳಿಸಿದ್ದೇವೆ. ನಗರಸಭೆಯವರು ಫಲಾನುವಿಯದೇ ಜಾಗ ಎಂದು ಪತ್ರ ನೀಡುವವರೆಗೂ ನಾವು ಯಥಾಸ್ಥಿತಿ ಕಾಪಾಡುತ್ತೇವೆ.
*ಶಿವಕುಮಾರ್. ಎಇ, ಸ್ಲಂ ಬೋರ್ಡ್.*
ಫಲಾನುಭವಿಗಳಾದವರು, ಕಂದಾಯದ ರಶೀತಿ, ಅಥವಾ ಗ್ರಾಮಪಂಚಾಯಿತಿ ಖಾತೆಯನ್ನೇ ಅಧಿಕೃತ ಎಂದು ತಿಳಿದುಕೊಂಡಿದ್ದರೆ ಅದು ದಾಖಲೆಯಾಗುವುದಿಲ್ಲ. ನಗರಸಭೆಯಿಂದ ಖಾತೆ ಆಗಿರಬೇಕು. ಅವರು ಈ ನಿವೇಶನ ಹೇಗೆ ಪಡೆದುಕೊಂಡಿದ್ದಾರೆ ಎಂಬುದಕ್ಕೆ ಮೂಲ ದಾಖಲೆಗಳಿರಬೇಕು. ಎಲ್ಲಾ ದಾಖಲೆಗಳನ್ನು ತಂದು ಕೊಟ್ಟ ನಂತರ ಪರಿಶೀಲಿಸಿ ಕ್ರಮಕೈಗೊಳ್ಳುತ್ತೇವೆ.
*ಶಿವನಂಕಾರಿಗೌಡ. ಪೌರಾಯುಕ್ತರು, ನಗರಸಭೆ*
ನಾವು ದಾಖಲೆಗಳನ್ನು ಪರಿಶೀಲಿಸಿಯೇ ಇಲ್ಲಿ ಕೆಲಸ ಪ್ರಾರಂಭಿಸಿದ್ದೇವೆ. ನಗರಸಭೆ ಮತ್ತು ಫಲಾನುಭವಿಗಳ ಮಧ್ಯ ದಾಖಲೆಯ ಗೊಂದಲ ಇರುವುದರಿಂದ ಇಂದು ತೆರವುಗೊಳಿಸುತ್ತಿದ್ದೇವೆ. ದಾಖಲೆ ಸರಿಯಾಗಿದ್ದರೆ ಮಾತ್ರ ಕೆಲಸ ಮುಂದುವರೆಸುತ್ತೇವೆ. ಇಲ್ಲವಾದರೆ ಈ ಜಾಗ ಯಥಾಸ್ಥಿತಿಯಲ್ಲಿಯೇ ಇರುತ್ತದೆ.
*ಸಚಿನ್, ಗುತ್ತಿಗೆದಾರ.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು