ರಾಜ್ಯ ಸರ್ಕಾರಿ ನೌಕರರ ಹಿತ ಕಾಪಾಡುವುದೇ ನನ್ನ ಕಾಯಕ. ನಿಮ್ಮೆಲ್ಲರ ಸಹಕಾರವೂ ಅತ್ಯಗತ್ಯ, ಷಡಕ್ಷರಿ
ಚನ್ನಪಟ್ಟಣ:ನ/05/20/ಗುರುವಾರ.
ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷನಾಗಿ ನಿಮ್ಮೆಲ್ಲರ ಜವಾಬ್ದಾರಿ ನನ್ನ ಮೇಲಿದೆ. ಸರ್ಕಾರದಿಂದ ಪ್ರಾಮಾಣಿಕವಾಗಿ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ತಮಗೆ ಒದಗಿಸಲು ಹೋರಾಡುತ್ತೇನೆ. ಇದು ನನ್ನೊಬ್ಬನಿಂದ ಆಗುವ ಕೆಲಸವಲ್ಲ. ಬೆನ್ನೆಲುಬಾಗಿ ನೀವು ನನ್ನ ಜೊತೆಯಲ್ಲಿದ್ದರೇ ಮಾತ್ರ ಸಾಧ್ಯ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಅಭಿಪ್ರಾಯ ಪಟ್ಟರು.
ಅವರು ಇಂದು ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಸರ್ಕಾರಿ ನೌಕರರ ಸಮಸ್ಯೆಗಳನ್ನು ಆಲಿಸಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಉತ್ತಮ ಆಸ್ಪತ್ರೆಯಲ್ಲಿ ನೌಕರ ಮತ್ತು ಆತನ ಕುಟುಂಬಕ್ಕೆ ಆರೋಗ್ಯಭಾಗ್ಯ ಸಿಗಬೇಕು, 2023 ಕ್ಕೆ ಕೇಂದ್ರ ಸರ್ಕಾರದ ನೌಕರರಿಗೆ ನೀಡುವಷ್ಟೇ ಸಂಬಳ ರಾಜ್ಯ ಸರ್ಕಾರಿ ನೌಕರರಿಗು ಸಿಗುವಂತೆ ಮಾಡುವುದು ನನ್ನ ಆದ್ಯ ಕರ್ತವ್ಯ. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯ ನೌಕರರಗಿಂತ ಶಿಕ್ಷಕರ ಪರ ಅತಿ ಹೆಚ್ಚು ಹೋರಾಟ ಮಾಡಬೇಕಾಗಿದೆ. ಎನ್ ಪಿ ಎಸ್ ಬಗ್ಗೆ ಹೆಚ್ಚು ಕಾಳಜಿ ವಹಿಸಿದ್ದೇನೆ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದಲ್ಲೂ ಸಹ ಗುಂಪು ರಾಜಕೀಯವಿದೆ, ಇದು ಮೊದಲು ತೊಲಗಬೇಕು. ಆಯಾಯ ಅಧ್ಯಕ್ಷರ ಮೇಲೆ ಅಸಮಾಧನವಿದ್ದರೆ, ಕುಳಿತು ಪರಿಹರಿಸಿಕೊಳ್ಳಿ, ಅಥವಾ ನಮ್ಮ ಗಮನಕ್ಕೆ ತನ್ನಿ. ಎಲ್ಲಾ ನೌಕರರು ಒಗ್ಗೂಡಿ ಕೆಲಸ ಮಾಡಿದರೆ ಮಾತ್ರ ಸಂಘಟನೆಯ ಆಶೋತ್ತರಗಳು ಈಡೇರಲಿವೆ.
ಸಂಘದ ಅಧ್ಯಕ್ಷ ಸ್ಥಾನವನ್ನು ದುರುಪಯೋಗ ಪಡಿಸಿಕೊಳ್ಳುವ ಜಾಯಮಾನ ನನ್ನದಲ್ಲ. ಕೇವಲ ಒಂದು ವರ್ಷದಲ್ಲಿ ನಿಮ್ಮದೇ ಆದಂತಹ ಒಂಭತ್ತು ಕೋಟಿ ಹಣವನ್ನು ಜಮೆ ಮಾಡಿದ್ದೇನೆ. ಇದುವರೆಗೂ ಒಳ್ಳೆಯ ಕೆಲಸ ಮಾಡಿದ್ದೇವೆ ಮುಂದೆಯೂ ಸಹಕಾರ ನೀಡಿ. ಸರ್ಕಾರಿ ನೌಕರರ ಎಲ್ಲಾ ಧ್ಯೇಯೋದ್ದೇಶಗಳನ್ನು ಈಡೇರಿಸಿತ್ತೇನೆ. ಸರ್ಕಾರವು ನಮ್ಮ ಪರವಾಗಿದೆ, ಮುಖ್ಯಮಂತ್ರಿಗಳು ನೌಕರರ ಪರ ಇದ್ದಾರೆ. ಸರ್ಕಾರಿ ನೌಕರರ ಸಂಘ ಎಂದರೆ ಒಗ್ಗಟ್ಟಿನ ಸಂಘ ಎಂಬ ಭಯ ಇದೆ ಎನ್ನುವ ವಾತಾವರಣ ನಿರ್ಮಾಣ ಮಾಡಿದ್ದೇವೆ ಎಂದರು.
ಸರ್ಕಾರಿ ನೌಕರರ ಸಂಘದ ಸಾಧನೆ ನೋಡಿ ಮಿಕ್ಕ ಸಂಘಟನೆಗಳು ಒಗ್ಗೂಡಿ, ಎಚ್ಚೆತ್ತು ಕೊಂಡು ಕೆಲಸ ಮಾಡುವಂತಹ ಸಾಧನೆಯನ್ನು ನಮ್ಮ ಸಂಘ ಮಾಡಿ ತೋರಿಸಲಿದೆ. ಇನ್ನು ಮುಂದೆ ಎಲ್ಲರೂ ಒಗ್ಗೂಡಿ ಕೆಲಸಮಾಡುವ ಮೂಲಕ ರಾಜ್ಯ ಸರ್ಕಾರಿ ನೌಕರರ ಸಂಘವು ಮಾದರಿಯಾಗಲಿದೆ ಎಂದರು.
ಅಧ್ಯಕ್ಷರ ಜೊತೆ ಕಾರ್ಯದರ್ಶಿ ಜಗದೀಶ್ ಗೌಡಪ್ಪ ಪಾಟೀಲ್, ಖಜಾಂಚಿ ಆರ್ ಶ್ರೀನಿವಾಸ, ಗೌರವ ಅಧ್ಯಕ್ಷ ಶಿವರುದ್ರಯ್ಯ, ಹೆಚ್ ಗಿರಿಗೌಡ. ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ್, ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ಭರತ್, ಬಿಇಓ, ಚಂದ್ರಶೇಖರ, ಹರಿದಾಸ, ಕಂದಾಯ ಇಲಾಖೆಯ ಸಿಬ್ಬಂದಿಗಳು, ಶಿಕ್ಷಕರು ಮತ್ತಿತರ ಇಲಾಖೆಯ ಸರ್ಕಾರಿ ನೌಕರರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು