ನಾಗವಾರ ಗ್ರಾಮದ ಬಸವರಾಜು ರವರಿಗೆ ಶ್ರದ್ಧಾಂಜಲಿ ಅರ್ಪಿಸಿದ ಹಿರಿಯರು
ಚನ್ನಪಟ್ಟಣ:ನ/12/20/ಮಂಗಳವಾರ.
ತಾಲ್ಲೂಕಿನ ನಾಗವಾರ ಗ್ರಾಮದ ಎಲ್ ಬಸವರಾಜು ಅವರು ಇತ್ತೀಚಿಗೆ ನಿಧನರಾದರು. ಅವರಿಗೆ ಇಂದು ಡಿ ಟಿ ರಾಮು ಪ್ರತಿಷ್ಠಾನ ವತಿಯಿಂದ ಅವರ ವಾರಿಗೆಯ ಸ್ನೇಹಿತರು ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು.
ಶ್ರೀಯುತರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದರು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಷತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.
ಶ್ರೀಯುತರು ಚನ್ನಪಟ್ಟಣ ಎಪಿಎಂಸಿ ಅಧ್ಯಕ್ಷರಾಗಿ, ಟಿಎಪಿಸಿಎಂಎಸ್, ಕಲ್ಪವೃಕ್ಷ ಪತ್ತಿನ ಸಹಕಾರ ಸಂಘ, ನಾಗವಾರ ಹಾಲು ಉತ್ಪಾದಕರ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಶ್ರೀಯತರು ಮಾಜಿ ಶಾಸಕ ದಿವಂಗತ ಡಿ.ಟಿ ರಾಮು ಸ್ಮಾರಕ ಪ್ರತಿಷ್ಠಾನದ ಟ್ರಸ್ಟಿಯಾಗಿ ೧೫ ವರ್ಷಗಳಿಂದಲೂ ಕೆಲಸ ಮಾಡುತ್ತಿದ್ದರು.
ಇವರಿಗೆ ಡಿ.ಟಿ ರಾಮು ಸ್ಮಾರಕ ಪ್ರತಿಷ್ಠಾನ ನಡೆಸುತ್ತಿರುವ ನ್ಯೂ ಆಕ್ಸ್ಪರ್ಡ್ ಶಾಲೆಯ ಆವರಣದಲ್ಲಿ ಪ್ರತಿಷ್ಠಾನದ ವತಿಯಿಂದ ಶ್ರದ್ಧಾಂಜಲಿ ಸಭೆಯನ್ನು ಏರ್ಪಡಿಸಲಾಗಿತ್ತು.
ಶ್ರೀಯತ ಬಸವರಾಜು ಯಾವುದೇ ಕೆಲಸ ಹೇಳಿದರೂ ಶಿಸ್ತು ಹಾಗೂ ಪ್ರಾಮಾಣಿಕತೆಯಿಂದ ಮಾಡುತ್ತಿದ್ದರು, ಇವರ ಪ್ರಾಮಾಣಿಕತೆಯನ್ನು ಗಮನಿಸಿದ ಪಕ್ಷದ ನಾಯಕರಾಗಲಿ, ಸಾರ್ವಜನಿಕ ಕ್ಷೇತ್ರದಲ್ಲಿ ಇದ್ದವರಾಗಲಿ, ಅವರ ಬಗ್ಗೆ ಗೌರವ ತೋರುತ್ತಿದ್ದರು. ಅಲ್ಲದೆ, ಯಾವುದೇ ಕೆಲಸ ಮಾಡಿದರೂ ಅಚ್ಚು ಕಟ್ಟುತನ ಇತ್ತು, ಕೊನೆಯವರೆಗೂ ಕೈಬಾಯಿ ಕೆಡಿಸಿಕೊಂಡವರಲ್ಲ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಸು.ತ ರಾಮೇಗೌಡ ಹೇಳಿದರು.
೨ ನಿಮಿಷ ಮೌನ ಆಚರಿಸಿ ಅವರ ಆತ್ಮಕ್ಕೆ ಶಾಂತಿ ಕೋರಲಾಯ್ತು, ಟ್ರಸ್ಟಿಗಳಾದ ಹೆಚ್.ವಿ ಚಂದ್ರು, ಹುಲುವಾಡಿ ಸಿದ್ದೇಗೌಡ, ಪ್ರೊ. ಎಂ.ಡಿ ಚಾಮರಾಜು, ಬೊಮ್ಮಯ್ಯ ಅವರು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಚಿರಶಾಂತಿ ಬಯಸಿದರು. ಅವರ ಅಭಿಮಾನಿ ನಾಗೇಗೌಡ ಅವರು ಹಾಗೂ ಅವರ ಮಿತ್ರರು, ಅಭಿಮಾನಿಗಳು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು