ಇಂದು ಮರಾಠಿ ಪ್ರಾಧಿಕಾರ, ನಾಳೆ ತಮಿಳು, ತೆಲುಗು ಭಾಷೆಯ ಪ್ರಾಧಿಕಾರ ಮಾಡುತ್ತಾರೆ. ಕನ್ನಡಿಗರು ಈಗಲೇ ಎಚ್ಚರಗೊಳ್ಳಬೇಕು. ಕಕಜವೇ ರಮೇಶಗೌಡ
ಚನ್ನಪಟ್ಟಣ:ನ/17/20/ಮಂಗಳವಾರ.
ರಾಜ್ಯ ಸರ್ಕಾರವು ಮರಾಠಿ ಪ್ರಾಧಿಕಾರಕ್ಕೆ ಐವತ್ತು ಕೋಟಿ ಹಣ ನೀಡಿ ಪ್ರಾಧಿಕಾರ ರಚಿಸುತ್ತಿರುವುದು ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ. ಈ ಆದೇಶವನ್ನು ಈಗಲೇ ಹಿಂಪಡೆಯಬೇಕೆಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ ಆಗ್ರಹಿಸಿದರು.
ಅವರು ಇಂದು ನಗರದ ಕಾವೇರಿ ವೃತ್ತದಲ್ಲಿ ಸರ್ಕಾರಕ್ಕೆ 'ಥೂ ಥೂ' ಎಂದು ಉಗಿಯುವ ಚಳವಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಐದು ಕೋಟಿ ನೀಡಿದ್ದು, ಮರಾಠಿ ಪ್ರಾಧಿಕಾರ ರಚಿಸಲು ಐವತ್ತು ಕೋಟಿ ನೀಡಿರುವುದು ಕನ್ನಡಿಗರಿಗೆ ದ್ರೋಹ ಬಗೆದಂತಾಗಿದೆ. ಕರ್ನಾಟಕದಲ್ಲಿ ಮರಾಠಿ ಪ್ರಾಧಿಕಾರದ ಅವಶ್ಯಕತೆ ಏನಿದೆ ? ಮರಾಠರ ನಾಡಿನಲ್ಲಿ ಕನ್ನಡಿಗರಿಗೆ ಅಲ್ಲಿನ ಸರ್ಕಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆಯೇ ? ಇಲ್ಲವೆಂದಾದಲ್ಲಿ ಕರ್ನಾಟಕದಲ್ಲಿ ಮರಾಠಿ ಪ್ರಾಧಿಕಾರ ಏಕೆ ಬೇಕು ಎಂದು ಅವರು ಪ್ರಶ್ನಿಸಿದರು.
ಇಂದು ಮರಾಠಿ ಪ್ರಾಧಿಕಾರ ರಚನೆ ಮಾಡುತ್ತಾರೆ. ನಾಳೆ ದೇಶದ ಇನ್ನಿತರ ಭಾಷಿಗರ ಪ್ರಾಧಿಕಾರ ರಚನೆಮಾಡುತ್ತಾರೆ. ಎರಡು ಸಾವಿರ ವರ್ಷಗಳಿಗೂ ಹೆಚ್ಚು ಇತಿಹಾಸ ಉಳ್ಳ ಕನ್ನಡದ ಅಸ್ತಿತ್ವವನ್ನೇ ಅಲುಗಾಡಿಸಲು ಹೊರಟಿರುವುದು ಸರಿಯಿಲ್ಲ ಎಂದರು.
ವಿಧಾನ ಸೌಧದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ, ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸಿದ ಪಾಲಿಕೆಯ ಮೇಲೆ ಬಾವುಟ ಹಾರಿಸಲು ಬಿಡದ ಮರಾಠಿಗರಿಗೆ ಮಣೆ ಹಾಕಿ, ಕನ್ನಡಿಗರಿಗೆ ಅನ್ಯಾಯ ಎಸಗುತ್ತಿರುವ ರಾಜ್ಯ ಸರ್ಕಾರವು ಈ ಆದೇಶವನ್ನು ತಕ್ಷಣವೇ ಹಿಂಪಡೆದು, ನಾಡಿನ ಸಮಸ್ತ ಕನ್ನಡಿಗರ ಕ್ಷಮೆ ಕೇಳಬೇಕು. ಇಲ್ಲವಾದರೆ ರಾಜ್ಯದ ಎಲ್ಲಾ ಕನ್ನಡ ಸಂಘಟನೆಗೊಳಗೂಡಿ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಡಾ ರಾಜಕುಮಾರ್ ಕಲಾಬಳಗದ ತಾಲ್ಲೂಕು ಅಧ್ಯಕ್ಷ ಮಂಜುನಾಥ್ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಈ ಹೋರಾಟದಲ್ಲಿ ಭಾಗಿಯಾಗಬೇಕಿತ್ತು. ಬಾರದಿರುವುದು ಬೇಸರ ತರಿಸಿದೆ. ಮರಾಠಿ ಪ್ರಾಧಿಕಾರವನ್ನು ಸರ್ಕಾರ ರಚಿಸುವ ಮುನ್ನವೇ ತಾಲ್ಲೂಕು ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯ ವರದಿ ನೀಡಬೇಕಾದದ್ದು ಕಸಾಪ ದ ಕರ್ತವ್ಯ. ಈ ಕೂಡಲೇ ಅವರು ಎಚ್ಚೆತ್ತು, ವರದಿ ಸಲ್ಲಿಸಬೇಕು. ಜಾತಿ ಧರ್ಮ ನೋಡದೆ ಕನ್ನಡಿಗರೆಲ್ಲರೂ ಒಗ್ಗೂಡಿ ಹೋರಾಡಬೇಕೆಂದು ಅವರು ಕರೆ ನೀಡಿದರು.
ಇದಕ್ಕೂ ಮೊದಲು 'ಥೂ ಥೂ' ಎಂದು ಉಗುಳಿ ಆಕ್ರೋಶ ವ್ಯಕ್ತಪಡಿಸಿದರು. ಜಾನಪದ ಕಲಾವಿದ ಚೌಪು ಸ್ವಾಮಿ ಯವರು ಕ್ರಾಂತಿಗೀತೆ ಹಾಡುವ ಮೂಲಕ ಕನ್ನಡಿಗರನ್ನು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕಕಜವೇ ಯ ಜಿಲ್ಲಾಧ್ಯಕ್ಷ ಯೋಗೇಶಗೌಡ, ಬೆಂಕಿ ಶ್ರೀಧರ್, ಚೇತನ್ ಕೀಕರ್ ಸೇರಿದಂತೆ ಅನೇಕ ಮಂದಿ ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು