ಭಾಷೆಗಳನ್ನು ಪ್ರೀತಿಸಿ ಗೌರವಿಸಬೇಕು. ನ್ಯಾ ಯರಮಾಲ್ ಕಲ್ಪನಾ
ಚನ್ನಪಟ್ಟಣ.ನ:21/20/ಶನಿವಾರ. ಅನ್ಯ ಭಾಷೆಗಳನ್ನು ಮಾತನಾಡುವಾಗ ಸಂಕುಚಿತ ಭಾವನೆ ಇರಬಾರದು, ಎಲ್ಲಾ ಭಾಷೆಗಳನ್ನು ಪ್ರೀತಿಸಬೇಕು.ಗೌರವಿಸಬೇಕು. ಪ್ರಪಂಚದಲ್ಲಿ ಆರು ಸಾವಿರ ಭಾಷೆಗಳಿವೆ. ಭಾರತ ದೇಶದಲ್ಲಿ ಮೂರು ಸಾವಿರ ಭಾಷೆಗಳಿವೆ. ಎಲ್ಲವನ್ನೂ, ಎಲ್ಲರನ್ನೂ, ಎಲ್ಲರೂ ಗೌರವಿಸಬೇಕು ಎಂದು ಹಿರಿಯ ಸಿವಿಲ್ ಮತ್ತು ಜೆ ಎಂ ಎಫ್ ಸಿ ನ್ಯಾಯಾಧೀಶೆ ಯರ್ ಮಾಲ್ ಕಲ್ಪನಾ ರವರು ನುಡಿದರು.
ಅವರು ಇಂದು ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ತಾಲ್ಲೂಕು ಆಡಳಿತ ತಾಲ್ಲೂಕು ಪಂಚಾಯತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ನಗರ ಸಭೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅರಣ್ಯ ಇಲಾಖೆ, ಕನ್ನಡ ಸಂಸ್ಕೃತಿ ಇಲಾಖೆಗಳ ಸಹಯೋ ಗದೊಂದಿಗೆ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಸಭಾಂಗಣದಲ್ಲಿ ಮೂರನೇ ದಿನದ ರಾಷ್ಟ್ರೀಯ ಏಕತಾ ಸಪ್ತಾಹದ ಭಾಷಾ ಸೌಹಾರ್ದತಾ ದಿನ ಎಂಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭಾಷಾ ಸೌಹಾರ್ದತೆಯ ಬಗ್ಗೆ ಮಾತನಾಡಿದ ಕನ್ನಡ ಭಾಷಾ ಪಂಡಿತ ಓಂಕಾರಪ್ರಿಯ ಬಾಗೇಪಲ್ಲಿಯವರು, ಭಾಷೆಗಳಿಗೆ ಮಿತಿ ಇರಬಾರದು, ಪಾಶ್ಚಾತ್ಯರ ಅಧ್ಯಯನ ಪ್ರಕಾರವೇ ಕನ್ನಡಕ್ಕೆ ೨,೫೦೦ ವರ್ಷಗಳ ಇತಿಹಾಸವಿದೆ. ನಮ್ಮ ಮಾತೃಭಾಷೆಯನ್ನು ಹೆತ್ತ ತಾಯಿಯಂತೆ ಪ್ರೀತಿಸಿ ಗೌರವಿಸಬೇಕು. ಅನ್ಯ ಭಾಷೆಗಳಿಗೆ ಗೌರವ ನೀಡಬೇಕು ಎಂದರು.
ಸಹಸ್ರಾರು ಹೆಸರಿನ ಸಿಹಿ ತಿಂಡಿಗಳು ಇರಬಹುದು, ಆದರೆ ಅಷ್ಟು ಸಿಹಿ ತಿಂಡಿಗಳಿಗೂ ‘ಸಿಹಿ’ ಎಂಬುದೇ ಮುಖ್ಯ, ಹಾಗಾಗಿ ಜಗತ್ತಿ ನಲ್ಲಿ ಮೂರು ಪ್ರಾಚೀನ ಭಾಷೆಗಳಿವೆ, ಮೂರು ಭಾಷೆಗಳು ಸಹ ನಮ್ಮ ಭಾರತದ ದೇಶದ ಲ್ಲಿರುವುದೇ ಹೆಮ್ಮೆಯ ಸಂಗತಿ. ಮೊದಲನೆಯ ಭಾಷೆ ಯಾಗಿ ಸಂಸ್ಕೃತ, ಎರಡು ಮತ್ತು ಮೂರನೆ ಸ್ಥಾನದಲ್ಲಿ, ತಮಿಳು ಮತ್ತು ಕನ್ನಡ ಭಾಷೆಗಳಾಗಿವೆ ಎಂದರು.
ನಾವು ಕೇವಲ ಸೂಟು ಬೂಟ್ ಹಾಕಿಕೊಂಡವರನ್ನೇ ಗೌರವಿಸುವಂತಹದಲ್ಲ, ಕುರೂಪಿಯಾದ ತನ್ನ ಮಗುವನ್ನು ಹೆತ್ತ ತಾಯಿ ಹೇಗೆ ಚಿನ್ನ ರನ್ನ ಎಂದು ಸಂಬೋಧಿಸಿ ಪ್ರೀತಿಯಿಂದ ಕರೆಯುತ್ತಾಳೋ ಅದೇ ರೀತಿ ನಮ್ಮ ಭಾಷೆಯನ್ನು ಪ್ರೀತಿ ಗೌರವದಿಂದ ಗೌರವಿಸಬೇಕು. ಗಾಂಧೀಜಿಗೆ ಯಾವ ಸೂಟುಬೂಟು ಇರಲಿಲ್ಲ, ತುಂಡುಡುಗೆ ಯಲ್ಲಿ ಇದ್ದ ಅವರನ್ನು ಇಡೀ ಜಗತ್ತೇ ಗುರುತಿಸಿತ್ತು ಎಂದು ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಂ.ಮಹೇಂದ್ರ ರವರು ಹಾಗೂ ಕನ್ನಡ ಅಧ್ಯಾಪಕರಾದ ಚನ್ನ ವೀರೇಗೌಡರು ಮಾತನಾಡಿದರು.
ಕಾರ್ಯಕ್ರಮದಲ್ಲಿ ನಗರ ಪೌರಾಯುಕ್ತ ಶಿವನಂಕಾರಿಗೌಡ, ಶಿಕ್ಷಣಾಧಿಕಾರಿ ನಾಗರಾಜು, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಬಿ ಗಿರೀಶ್, ಶಿಕ್ಷಕರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು