ರಾಜಕೀಯ ಪಕ್ಷಗಳು ಸ್ವಾರ್ಥಕ್ಕಾಗಿ ದ್ವೇಷ ಬಿತ್ತುವ ಕೆಲಸ ನಿಲ್ಲಿಸಬೇಕು : ಡಾ. ಬೈರಮಂಗಲ ರಾಮೇಗೌಡ
ರಾಮನಗರ : ಜನಾಂಗ ಜನಾಂಗಗಳ ನಡುವೆ ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥಕ್ಕಾಗಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿವೆ. ಇದು ನಿಲ್ಲಬೇಕು ಎಂದು ವಿಮರ್ಶಕ ಡಾ. ಬೈರಮಂಗಲ ರಾಮೇಗೌಡ ತಿಳಿಸಿದರು.
ನಗರದ ಶಾಂತಲಾ ಕಲಾಕೇಂದ್ರದ ದರ್ಪಣ ಸಭಾಂಗಣದಲ್ಲಿ ಜಿಲ್ಲಾ ಲೇಖಕರ ವೇದಿಕೆ ವತಿಯಿಂದ ಆಯೋಜಿಸಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ ಹಾಗೂ ಗೀತಗಾಯನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲಾ ರಾಜಕೀಯ ಪಕ್ಷಗಳು ಚರ್ಚೆ ಮಾಡಿ ಅಭಿವೃದ್ಧಿ ಪ್ರಾಧಿಕಾರಿಗಳನ್ನು ಅಥವಾ ನಿಗಮಗಳನ್ನು ಸ್ಥಾಪನೆ ಮಾಡಿದರೆ ಗೊಂದಲಗಳು ಉಂಟಾಗುವುದಿಲ್ಲ ಎಂದು ತಿಳಿಸಿದರು.
ರಾಜಕೀಯ ವ್ಯಕ್ತಿಗಳನ್ನು ಟೀಕಿಸಿ ಬರೆದಾಗ ಅವರನ್ನು ಜೈಲಿಗಟ್ಟುವ ಕೆಲಸ ನಡೆಯುತ್ತಿದೆ. ಇದು ನಿಲ್ಲಬೇಕು. ಕನ್ನಡ ನಾಡು, ನುಡಿಯ ವಿಷಯದಲ್ಲಿ ಎಲ್ಲಾ ಸರ್ಕಾರಗಳು ಆಶ್ವಾಸನೆಗಳನ್ನು, ಭರವಸೆಗಳನ್ನು ನೀಡುತ್ತಾ ಬಂದಿವೆಯೆ ಹೊರೆತು ಕಾರ್ಯಗತಗೊಳಿಸಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅಖಿಲ ಭಾರತೀಯ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಕೆ.ಆರ್. ವಿನುತ ಮಾತನಾಡಿ ಮೈಸೂರು ಸಂಸ್ಥಾನದಂತೆ ಉತ್ತರ ಕರ್ನಾಟಕವನ್ನು ಅಭಿವೃದ್ಧಿಗೊಳಿಸಬೇಕೆಂಬ ನಿಟ್ಟಿನಲ್ಲಿ 1973 ನವೆಂಬರ್ 1 ರಂದು ಮೈಸೂರು ಸಂಸ್ಥಾನಕ್ಕೆ ಕರ್ನಾಟಕ ಎಂಬ ಹೆಸರನ್ನು ಇಡಲಾಯಿತು. ಆದರೆ ಉತ್ತರ ಕರ್ನಾಟಕದ ಭಾಗವು ಇಂದೂ ಸಹ ಅಭಿವೃದ್ಧಿಯತ್ತ ಮುಖ ಮಾಡಿಲ್ಲ ಎಂದು ತಿಳಿಸಿದರು.
ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ಹೆಚ್ಚಿನ ಮೀಸಲಾತಿಯನ್ನು ನೀಡಬೇಕಿದೆ. ಉನ್ನತ ವ್ಯಾಸಂಗಕ್ಕೆ ಬೇಕಾದ ಸಂಪನ್ಮೂಲ ಪುಸ್ತಕಗಳನ್ನು ಅನುವಾದ ಮಾಡಬೇಕಾದ ಅವಶ್ಯಕತೆ ಇದೆ ಎಂದು ತಿಳಿಸಿದರು.
ಸಾಹಿತಿ ಡಾ. ಮಲ್ಲಿಕಾರ್ಜುನ ಛಬ್ಬಿ ಮಾತನಾಡಿ ಕವಿಯಾದವನು ಹೆಚ್ಚು ಅಧ್ಯಯನ ಮಾಡಬೇಕು. ತನ್ನ ದೇಸಿ ನೆಲೆಯಲ್ಲಿ ಕವಿತೆಗಳನ್ನು ಬರೆದಾಗ ಅದು ಹೆಚ್ಚು ಅರ್ಥಪೂರ್ಣವಾಗಿರುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಸಾಂಸ್ಕøತಿಕ ಸಂಘಟಕಿ ಜೆ. ಶಾಂತಬಾಯಿ, ರಂಗಭೂಮಿಯ ಹಿರಿಯ ಕಲಾವಿದೆ ಎನ್. ಶಾಂತಮ್ಮ, ತೊಗಲುಗೊಂಬೆಯಾಟದ ಕಲಾವಿದೆ ಗೌರಮ್ಮ, ಸಾಂಸ್ಕøತಿಕ ಸಂಘಟಕಿ ಕವಿತಾರಾವ್, ನಿವೃತ್ತ ಅಧ್ಯಾಪಕ ಬಿ. ನರಸಿಂಹಯ್ಯ, ಕವಿ ಕಾಕೋಳು ಶೈಲೇಂದ್ರ ಅವರನ್ನು ಸನ್ಮಾನಿಸಲಾಯಿತು.
ಕವಿಗಳಾದ ಡಾ. ಅಂಕನಹಳ್ಳಿ ಪಾರ್ಥ, ಎಚ್.ಕೆ. ಶೈಲಾಶ್ರೀನಿವಾಸ್, ಎಸ್. ನರಸಿಂಹಸ್ವಾಮಿ, ಡಾ. ಎಚ್.ವಿ. ಮೂರ್ತಿ, ಎಂ.ಎಸ್. ಚನ್ನವೀರಪ್ಪ, ಜಿ. ಕೃಷ್ಣಾನಾಯಕ್ ಅವರು ಕವನಗಳನ್ನು ವಾಚಿಸಿದರು. ಗಾಯಕರಾದ ಕೆಂಗಲ್ ವಿನಯ್ ಕುಮಾರ್, ಗೋಪಾಲ್ ಅವರು ಗೀತಗಾಯನ ನಡೆಸಿಕೊಟ್ಟರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿಂ.ಲಿಂ. ನಾಗರಾಜ್, ಸ್ನೇಹಕೂಟ ಸಂಸ್ಥೆ ಅಧ್ಯಕ್ಷ ಎಚ್.ಪಿ. ನಂಜೇಗೌಡ, ಅಮೃತ ವಿಕಲಚೇತನ ಟ್ರಸ್ಟಿನ ಕಾರ್ಯದರ್ಶಿ ಟಿ. ರಮೇಶ್, ರಾಜ್ಯ ಒಕ್ಕಲಿಗರ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಜಿ.ಪಿ. ಕಾಡೇಗೌಡ ಗಬ್ಬಾಡಿ, ವಕೀಲರ ಸಾಹಿತ್ಯ ಕೂಟದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ಜಿಲ್ಲಾ ಲೇಖಕರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೂ.ಗಿ. ಗಿರಿಯಪ್ಪ, ಪ್ರಧಾನ ಕಾರ್ಯದರ್ಶಿ ಎಸ್. ರುದ್ರೇಶ್ವರ, ತಾಲ್ಲೂಕು ಅಧ್ಯಕ್ಷ ಸಿ. ರಮೇಶ್ ಹೊಸದೊಡ್ಡಿ ಇತರರು ಇದ್ದರು.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು