Tel: 7676775624 | Mail: info@yellowandred.in

Language: EN KAN

    Follow us :


ಡಿ. 19ರ ಮೆಗಾ ಲೋಕ ಅದಲಾತ್ : ನೊಂದಣಿಗೆ ಇಂದು ಕೊನೆ ದಿನ

Posted date: 17 Dec, 2020

Powered by:     Yellow and Red

ಡಿ. 19ರ ಮೆಗಾ ಲೋಕ ಅದಲಾತ್ : ನೊಂದಣಿಗೆ ಇಂದು ಕೊನೆ ದಿನ

ರಾಮನಗರ:ಡಿ/17/20/ಗುರುವಾರ. ಜಿಲ್ಲೆಯಾದ್ಯಂತ ಏಕಕಾಲಕ್ಕೆ ಡಿಸೆಂಬರ್ 19 ರಂದು ನಡೆಯುವ ಮೆಗಾ ಲೋಕ ಅದಾಲತ್ ಗಾಗಿ ಶುಕ್ರವಾರದ (ಡಿ. 18) ವರೆಗೆ ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು ನೊಂದಣಿ ಮಾಡಿಕೊಳ್ಳಲಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ. ಜಿ. ರಮಾ ಅವರು ತಿಳಿಸಿದ್ದಾರೆ. 


ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯಾದ್ಯಂತ ಇರುವ 18 ಬೆಂಚ್ ಗಳಲ್ಲಿ ಲೋಕ ಅದಾಲತ್ ಅನ್ನು ಆಯೋಜಿಸಲಾಗಿದೆ. ರಾಜಿ ಸಂದಾನದ ಮೂಲಕ ವಿವಿಧ ಪ್ರಕರಣಗಳನ್ನು ಇತ್ಯರ್ಥಪಡಿಸಿ ಕೊಳ್ಳಬಹುದಾಗಿದೆ. ಇದರ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಬಿ.ಜಿ. ರಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


*ಆನ್ ಲೈನ್ :* ರಾಮನಗರ ಜಿಲ್ಲೆ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಡಿಸೆಂಬರ್ 19 ರಂದು ಏಕ ಕಾಲಕ್ಕೆ ಮೆಗಾ ಲೋಕ ಅದಾಲತ್ ನಡೆಯಲಿದೆ. ಕಕ್ಷಿದಾರರನ್ನು ಹೊರತು ಪಡಿಸಿದರೆ, ವಕೀಲರು ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸಬಹುದು ಇಲ್ಲವೆ ಆನ್ ಲೈನ್ ಮೂಲಕವೂ ಭಾಗವಹಿಸಬಹುದು. ಅವಶ್ಯಕತೆ ಕಂಡು ಬಂದಲ್ಲಿ ಕಕ್ಷಿದಾರರನ್ನು  ಆನ್ ಲೈನ್ ಮೂಲಕ ಸಂಪರ್ಕಿಸಲಾಗುವುದು ಎಂದು ಸತ್ರ ನ್ಯಾಯಾಧೀಶರು ತಿಳಿಸಿದರು.


*ರಾಜಿ ಪ್ರಕರಣಗಳು:* ಜಿಲ್ಲೆಯಲ್ಲಿ ಒಟ್ಟು 42,704 ಪ್ರಕರಣಗಳು ಬಾಕಿ ಇದ್ದು, ಇವುಗಳ ಪೈಕಿ 2,805 ಪ್ರಕರಣಗಳನ್ನು ಮೆಗಾ ಲೋಕ ಅದಾಲತ್ ನಲ್ಲಿ ರಾಜಿ ಪ್ರಕರಣಗಳನ್ನಾಗಿ ಪರಿಗಣಿಸಿ ಇತ್ಯರ್ಥ ಪಡಿಸಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ. ವೆಂಕಟಪ್ಪ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ಧಾರೆ.


*ರಾಜಿಗೆ ಒತ್ತು:* ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳಾದ ಅಪಘಾತ, ಕಂತು ಕಟ್ಟದಿರುವುದು, ಪರಿಹಾರ ವ್ಯಾಜ್ಯ, ಆಸ್ತಿ ಸಂಬಂಧಿತ, ಕೌಟುಂಬಿಕ  ಪ್ರಕರಣ, ವಿಮೆ, ಹಣಕಾಸು ವ್ಯಾಜ್ಯ, ಸಣ್ಣ ಪುಟ್ಟ ಸಿವಿಲ್ ವ್ಯಾಜ್ಯ, ಲೇವಾದೇವಿ, ಬಾಡಿಗೆ, ಅಪಘಾತ ಪರಿಹಾರ, ವಾಹನ ವಿಮಾ ಕಂತು ಬಾಕಿ, ಭೂಮಿ ಖರೀದಿ ಸಂಬಂಧಿತ ಪ್ರಕರಣಗಳನ್ನು ರಾಜಿಗಾಗಿ ನಿಗದಿಪಡಿಸಲಾಗಿದೆ ಎಂದು ವೆಂಕಟಪ್ಪ ಅವರು ಹೇಳೀದ್ದಾರೆ.


*ಕೋವಿಡ್-19:* ಕಳೆದ ಕೆಲವು ತಿಂಗಳಿಂದ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಲೋಕ ಅದಾಲತ್ ನಲ್ಲಿ ಪ್ರಕರಣಗಳನ್ನು ಇತ್ಯರ್ಥ್ಯಪಡಿಸಲು ಸಾಧ್ಯವಾಗಿಲ್ಲ. ಹೀಗಾಗಿ ಶನಿವಾರದಂದು (ಡಿ.19) ಆನ್ ಲೈನ್ ಮೂಲಕ ಪರಿಹರಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ನ್ಯಾಯಾಲಯಕ್ಕೆ ಬರದೇ ಒಂದೇ ಒಂದು ಬಾರಿಗೆ ನ್ಯಾಯಸಮ್ಮತವಾಗಿ ರಾಜಿ ಇಲ್ಲವೆ ಸಂಧಾನದ ಮೂಲಕ ಇವುಗಳನ್ನು ಹೆಚ್ಚಿನ ಶುಲ್ಕವಿಲ್ಲದೆ ಎರಡೂ ಕಡೆಯವರು ಆನ್ ಲೈನ್ ಮೂಲಕ ಪರಿಹರಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ, ಇದರ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಧೀಶರು ತಿಳಿಸಿದ್ದಾರೆ. 


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑