Tel: 7676775624 | Mail: info@yellowandred.in

Language: EN KAN

    Follow us :


ಮಕ್ಕಳ ಪಠ್ಯದಲ್ಲಿ ಬ್ರಾಹ್ಮಣರ ಅವಹೇಳನ ಸರಿಯಲ್ಲ; ತಾಲೂಕು ಬ್ರಾಹ್ಮಣ ಮಹಾಸಭಾ ಖಂಡನೆ

Posted date: 18 Dec, 2020

Powered by:     Yellow and Red

ಮಕ್ಕಳ ಪಠ್ಯದಲ್ಲಿ ಬ್ರಾಹ್ಮಣರ ಅವಹೇಳನ ಸರಿಯಲ್ಲ; ತಾಲೂಕು ಬ್ರಾಹ್ಮಣ ಮಹಾಸಭಾ ಖಂಡನೆ

ಚನ್ನಪಟ್ಟಣ:ಡಿ/17/20/ಗುರುವಾರ. ಕರ್ನಾಟಕ ರಾಜ್ಯ ಸರ್ಕಾರವು ೬ನೆ ತರಗತಿಯ ಸಮಾಜವಿಜ್ಞಾನ ಪಠ್ಯಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಾಕಾರಿಯಾದ ಪಠ್ಯ ಮುದ್ರಿಸಿರುವುದನ್ನು ಕೂಡಲೇ ತೆಗೆದು ಹಾಕಬೇಕು ಎಂದು ತಾಲೂಕು ಬ್ರಾಹ್ಮಣ ಮಹಾಸಭಾ ಒತ್ತಾಯಿಸಿದೆ.

ಈ ಸಂಬಂಧ ನಗರದ ತಾಲೂಕು ಬ್ರಾಹ್ಮಣಮಹಾಸಭಾ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಮಹಾಸಭಾದ ಪದಾಧಿಕಾರಿಗಳು, ಬ್ರಾಹ್ಮಣ ಸಮುದಾಯವನ್ನು ಅವಹೇಳನಾಕಾರಿಯಾಗಿ ಚಿತ್ರಿಸುವ ಕೆಲಸ ಪಠ್ಯದ ಮೂಲಕ ನಡೆಯುತ್ತಿದ್ದು, ಸರ್ಕಾರದ ಪಠ್ಯಪುಸ್ತಕದಲ್ಲಿ ಇಂತಹ ಕೆಲಸ ನಡೆಯುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


ಈ ರೀತಿಯ ತಪ್ಪು ವಿಚಾರಗಳನ್ನು ಮುದ್ರಿಸುವ ಮೂಲಕ ವಿದ್ಯಾರ್ಥಿಗಳ ಅದರಲ್ಲೂ ಮುಗ್ಧತೆಯನ್ನು ಮೀರದ ಮಕ್ಕಳ ಮನಸ್ಸಿನಲ್ಲಿ ಬ್ರಾಹ್ಮಣ ಸಮುದಾಯದ ಬಗ್ಗೆ ತಪ್ಪು ಪರಿಕಲ್ಪನೆ ಮೂಡಿಸಿದಂತಾಗುತ್ತದೆ. ಜಾತ್ಯಾತೀತತೆ ಮತ್ತು ಸಾಮರಸ್ಯವನ್ನು ಕಾಪಾಡಬೇಕಾದ ಸರ್ಕಾರದ ಶಿಕ್ಷಣ ಇಲಾಖೆ ಸಮಾಜದಲ್ಲಿ ಜಾತಿ ಜಾತಿಗಳನ್ನು ಎತ್ತಿಕಟ್ಟುವುದು ಎಷ್ಟರ ಮಟ್ಟಿಗೆ ಸಮಂಜಸ ಎಂದು ಪ್ರಶ್ನಿಸಿದರು.


ಸರ್ವೇಜನ ಸುಖಾಯಃ ಸರ್ವೇಜನ ಹಿತಾಯಃ ಎಂಬ ಧ್ಯೇಯದೊಂದಿಗೆ ಹಿಂದಿನಿಂದಲೂ ದೇಶದಲ್ಲಿ ಎಲ್ಲಾ ಸಮುದಾಯದ ಹಿತವನ್ನು ಬಯಸುತ್ತಾ ಬಂದಿರುವ ಬ್ರಾಹ್ಮಣ ಸಮಾಜದ ಬಗ್ಗೆ ಅವಹೇಳನಾಕಾರಿ ಅಂಶಗಳನ್ನು ಮುದ್ರಿಸಿರುವ ಪಠ್ಯಪುಸ್ತಕ ನಿರ್ದೇಶನಾಲಯ ಬಹಿರಂಗ ಕ್ಷಮೆ ಯಾಚಿಸಬೇಕು. ಕೂಡಲೇ ಮುಖ್ಯಮಂತ್ರಿಗಳು ಈ ವಿಷಯವನ್ನು ಪಠ್ಯಪುಸ್ತಕದಿಂದ ತೆಗೆದು ಹಾಕುವಂತೆ ಶಿಕ್ಷಣ ಇಲಾಖೆಗೆ ಸೂಚಿಸ ಬೇಕು ಎಂದು ಬ್ರಾಹ್ಮಣ ಮಹಾಸಭಾ ಪದಾಧಿಕಾರಿಗಳು ಆಗ್ರಹಿಸಿದರು.


*ಪ್ರೊ.ಭಗವಾನ್ ವಿರುದ್ಧ ಕಾನೂನು ಹೋರಾಟ:*

ಬ್ರಾಹ್ಮಣ ಸಮುದಾಯದ ಹಾಗೂ ನಮ್ಮ ದೇಶದ ಸಂಸ್ಕೃತಿಯ ಬಗ್ಗೆ ಪದೇ ಪದೆ ಅವಹೇಳನಾಕಾರಿಯಾಗಿ ಹೇಳಿಕೆ ನೀಡುತ್ತಿರುವ ಪ್ರೊ.,ಭಗವಾನ್‌ರವರು ಸುಳ್ಳು ಸುಳ್ಳು ಕಥೆ ಹೇಳುವುದನ್ನು ಬಿಡಬೇಕು. ಬ್ರಾಹ್ಮಣ ಸಮುದಾಯದ ಬಗ್ಗೆ ಹೇಳಿಕೆ ನೀಡಿ ಯಾರನ್ನೋ ಮೆಚ್ಚಿಸ ಬಹುದು ಎಂಬ ಭ್ರಮೆಯಲ್ಲಿ ಇದೇ ರೀತಿ ಹೇಳಿಕೆಗಳನ್ನು ನೀಡುತ್ತಿದ್ದರೆ ಅವರ ವಿರುದ್ಧ ಕಾನೂನು ಹೊರಾಟ ನಡೆಸುವುದಾಗಿ ವೇದಿಕೆಯ ಪದಾಧಿಕಾರಿಗಳು ಎಚ್ಚರಿಸಿದರು.

ಸುದ್ದಿಗೋಷ್ಟಿಯಲ್ಲಿ ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಂ.ಎನ್.ರಾಮಪ್ರಸಾದ್, ಕಾರ್ಯದರ್ಶಿ ರಾಘವೇಂದ್ರ ಮಯ್ಯ, ಪದಾಧಿಕಾರಿಗಳಾದ ಕೆ.ವಿ.ಮದುಸೂಧನ್, ನರಸಿಂಹ, ಎಸ್.ಮದುಸೂಧನ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑