ಗ್ರಾಮ ಪಂಚಾಯಿತಿ ಚುನಾವಣೆ ವಸೂಲಿಗಿಳಿದ ಸಿಪಿವೈ ಹಿಂಬಾಲಕರು ಸಿಂಲಿಂ ನಾಗರಾಜು ಆರೋಪ
ಚನ್ನಪಟ್ಟಣ:ಡಿ/18/20/ಶುಕ್ರವಾರ. ತಾಲ್ಲೂಕಿನಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ತಾಲ್ಲೂಕಿನ ಕೆಲವು ಅಧಿಕಾರಿಗಳಿಂದ ಹಾಗೂ ರಾಮನಗರ ತಾಲ್ಲೂಕಿನಿಂದ ಕೆಲವು ಅಧಿಕಾರಿಗಳ ಬಳಿ ಹೋಗಿ ಗ್ರಾಮ ಪಂಚಾಯಿತಿ ಚುನಾವಣೆಗೆ ಖರ್ಚಿಗೆ ಹಣ ಬೇಕಾಗಿದ್ದು, ತಮ್ಮಿಂದ ಹಣ ವಸೂಲಿ ಮಾಡಿಕೊಂಡು ಬರುವಂತೆ ಎಂ.ಎಲ್.ಸಿ ಯೋಗೇಶ್ವರ್ ರವರು ತಿಳಿಸಿದ್ದಾರೆ ಎಂದು ಸಿ.ಪಿ.ವೈ ಹಿಂಬಾಲಕರು ದಂದೆಗೆ ಇಳಿದಿದ್ದು, ಅದಕ್ಕೆ ಅಧಿಕಾರಿಗಳು ನಿಮ್ಮ ಎಂ.ಎಲ್.ಸಿ ರವರಿಗೆ ದೂರವಾಣಿ ಕರೆ ಮಾಡಿ ಕೊಡಿ ಎಂದು ಹೇಳಿದ್ದು, ಅದಕ್ಕೆ ಹಿಂಬಾಲಕರು ಸಿಪಿವೈ ರವರಿಗೆ ದೂರವಾಣಿ ಮಾಡಿ ಕೊಟ್ಟ ಸಂದರ್ಭದಲ್ಲಿ ಸಿಪಿವೈ ರವರು ಕೊಡಯ್ಯ, ನಮಗೆ ನಮ್ಮ ಪಕ್ಷದ ಕಾರ್ಯಕರ್ತರು ಗ್ರಾಮ ಪಂಚಾಯಿತಿಗೆ ಸ್ಪರ್ಧೆ ಮಾಡಿದ್ದಾರೆ, ಅವರನ್ನು ಗೆಲ್ಲಿಸಿಕೊಂಡು ಬರಲು ಖರ್ಚಿಗೆ ಹಣ ಬೇಕು. ಸರ್ಕಾರ ನಮ್ಮದು ಇರುವುದು ಎಂದು ಧಮ್ಕಿ ಹಾಕಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ ಎಂದು ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಸಿಂಲಿಂ ನಾಗರಾಜು ನೇರ ಆರೋಪ ಮಾಡಿದ್ದಾರೆ.
ನಮ್ಮ ನಾಯಕರಾದ ಕುಮಾರಸ್ವಾಮಿ ರವರು ಶಾಸಕರಾಗಿ ಎರಡು ವರ್ಷಗಳು ಕಳೆಯುತ್ತಾ ಬಂದಿವೆ. ಯಾವ ಅಧಿಕಾರಿ ಬಳಿಯು ಇದುವರೆವಿಗೂ ಕಮೀಷನ್ ವಿಷಯದಲ್ಲಿ ಬೊಟ್ಟು ಮಾಡಿ ತೋರಿಸುವುದಿಲ್ಲ.
ನಮ್ಮ ಶಾಸಕರು ತಾಲ್ಲೂಕಿನ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ. ಯೋಗೇಶ್ವರ್ ಮತ್ತು ಹಿಂಬಾಲಕರು ಗ್ರಾಮ ಪಂಚಾಯಿತಿ ಚುನಾವಣೆ ಹೆಸರಿನಲ್ಲಿ ಹಣ ವಸೂಲಿ ದಂದೆಗೆ ಇಳಿದಿರುವುದಕ್ಕೆ ಇವರಿಗೆ ನಾಚಿಕೆಯಾಗಬೇಕಾಗಿದೆ ಎಂದಿದ್ದಾರೆ.
ಯಾರಾದರೂ ಹಿಂಬಾಲಕರು ಯಾವುದೇ ಅಧಿಕಾರಿಯ ಬಳಿ ಹಣ ವಸೂಲಿಗೆ ಬಂದಾಗ ಶಾಸಕರ ಕಛೇರಿ ಗಮನಕ್ಕೆ ತಂದರೆ ನಾವು ಅದನ್ನು ನಮ್ಮ ನಾಯಕರಾದ ಕುಮಾರಸ್ವಾಮಿ ರವರಿಗೆ ವಿಷಯ ಮುಟ್ಟಿಸುತ್ತೇವೆ. ಸಿಪಿವೈ ರವರು ತನ್ನ ಮನೆಯ ಬಂಡವಾಳವನ್ನು ಹಾಕಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಿ ಅದನ್ನು ಬಿಟ್ಟು ಅಧಿಕಾರಿಗಳಿಂದ ಹಣ ವಸೂಲಿ ಮಾಡಿ ಚುನಾವಣೆ ನಡೆಸುವುದು ಇವರ ಭ್ರಷ್ಟತೆಗೆ ಹಿಡಿದ ಕನ್ನಡಿಯಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಸಿಂಲಿಂ ಆಕ್ಟೀವ್ ಆಗಿದ್ದಾರಾ ! ಸಿಪಿವೈ*
ಸಿಂಲಿಂ ನಾಗರಾಜು ರವರ ಆರೋಪದ ಬಗ್ಗೆ ಪ್ರತಿಕಿಯಿಸುವಂತೆ ಸಿ ಪಿ ಯೋಗೇಶ್ವರ್ ರವರಿಗೆ ದೂರವಾಣಿ ಕರೆ ಮಾಡಿದಾಗ ಅವರು ಮೊದಲು ಮಾತನಾಡಿದ್ದೇ ಸಿಂಲಿಂ ನಾಗರಾಜು ರವರು ಆ್ಯಕ್ಟೀವ್ ಆಗಿದ್ದಾರಾ ಎಂಬ ಆಶ್ಚರ್ಯ ಸೂಚಕದೊಂದಿಗೆ.
ನಂತರ ಪ್ರತಿಕ್ರಿಯಿಸಿದ ಸಿಪಿವೈ ರವರು ನಾನಿನ್ನು ಗ್ರಾಮ ಪಂಚಾಯತಿ ಅಖಾಡಕ್ಕೆ ಇಳಿದಿಲ್ಲ. ಅದಕ್ಕಿಂತ ಮುಂಚಿತವಾಗಿ ಇಂತಹ ಸತ್ಯವಿಲ್ಲದ ಹೇಳಿಕೆಗಳಿಗೆಲ್ಲಾ ಪ್ರತಿಕ್ರಿಯಿಸುವುದು ಬೇಡಾ ಎಂದು ಉತ್ತರಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು