ಒಕ್ಕಲಿಗರ ಸಾರ್ವಜನಿಕ ಸಂಸ್ಥೆಯ ಚುನಾವಣಾಧಿಕಾರಿ ಬದಲಿಸಿ, ನ್ಯಾಯಯುತ ಚುನಾವಣೆ ನಡೆಸುವಂತೆ ಆಗ್ರಹ
ಚನ್ನಪಟ್ಟಣ:ಡಿ/29/20/ಮಂಗಳವಾರ. ತಾಲ್ಲೂಕಿನ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಾದ ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಆಡಳಿತ ಮಂಡಳಿಯ ಚುನಾವಣೆಯು 2021 ರ ಜನವರಿ 3 ನೇ ತಾರೀಖಿಗೆ ನಿಗದಿಯಾಗಿದ್ದು, ಅದರ ಪೂರ್ವಭಾವಿಯಾಗಿ ನಡೆಯಬೇಕಾಗಿದ್ದ ಸಿದ್ದತೆಗಳಲ್ಲಿ, ಚುನಾವಣಾಧಿಕಾರಿಗಳು ಲೋಪವೆಸಗಿದ್ದಾರೆ ಎಂದು ಆರೋಪಿಸಿ ಇಂದು ಹಲವು ಅಭ್ಯರ್ಥಿಗಳು ಆರೋಪ ಮಾಡಿದರು.
ಚುನಾವಣಾಧಿಕಾರಿಯನ್ನು ನೇಮಕ ಮಾಡಲು ಕೋ ಆಪರೇಟಿವ್ ಸೊಸೈಟಿ ಯಿಂದ ಅನುಮತಿ ಪಡೆಯಬೇಕು. ಚುನಾವಣಾಧಿಕಾರಿಯಾದವರು ಸಂಸ್ಥೆಯ ಮತದಾರರಾಗಿರಬಾರದು ? ಈ ಎರಡನ್ನೂ ಮೀರಿ ಸಂಸ್ಥೆಯ ಕೆಲವರು ಮತ್ತೀಕೆರೆ ಚಲುವರಾಜು ರವರನ್ನು ಚುನಾವಣಾಧಿಕಾರಿಯನ್ನಾಗಿ ನೇಮಕ ಮಾಡಿಕೊಂಡಿರುವುದೇಕೆ ಎಂದು ಅವರುಗಳು ಪ್ರಶ್ನಿಸಿದ್ದಾರೆ.
ಹತ್ತಾರು ಕೃತಿಗಳನ್ನು ರಚಿಸಿದ್ದೇನೆ ಎಂದು ಹೇಳುವ ಹಾಗೂ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಹಾಲಿ ಅಧ್ಯಕ್ಷರಾಗಿರುವ ಮತ್ತೀಕೆರೆ ಚಲುವರಾಜು ರವರಿಗೆ ಕನ್ನಡ ವರ್ಣಮಾಲೆಯೇ ತಿಳಿದಿಲ್ಲ. ಚುನಾವಣಾ ಅಭ್ಯರ್ಥಿಗಳಾಗಿರುವವರಿಗೆ ಯಾವ ಅಕ್ಷರ ಮೊದಲು ಬರಬೇಕು ! ನಂತರ ಯಾವ ಅಕ್ಷರ ಬರಬೇಕು ಎಂಬುದನ್ನು ಇಲ್ಲಿ ಉಲ್ಲಂಘಿಸಿದ್ದಾರೆ. ಚಿಹ್ನೆ ನೀಡುವಲ್ಲಿಯೂ ಸಹ ಲೋಪ ಎಸಗಿದ್ದಾರೆ. ಬಹಳ ಮುಖ್ಯವಾಗಿ ನಾಮಪತ್ರವನ್ನು ಸಹಿ ಮಾಡಿ ಹಿಂಪಡೆದವರನ್ನು ಸಹ ಸಂಜೆ ಆರು ಗಂಟೆಯ ವೇಳೆಗೆ ಸಿಂಧು ಎಂದು ಸೇರಿಸಿಕೊಂಡಿರುವುದು ಚುನಾವಣಾ ಕರ್ತವ್ಯದಲ್ಲಿ ಸ್ಪಷ್ಟವಾಗಿ ಕಾನೂನನ್ನು ಉಲ್ಲಂಘಿಸಿರುವುದು ಗೋಚರಿಸುತ್ತಿದೆ ಎಂದು ಅಭ್ಯರ್ಥಿ ಹೊಡಿಕೆಹೊಸಹಳ್ಳಿ ಚಂದ್ರು ಆರೋಪ ಮಾಡಿದರು.
ಎಲ್ಲಾ ಅಭ್ಯರ್ಥಿಗಳು ಹೊಸದಾಗಿ ನಾಮಪತ್ರ ಸಲ್ಲಿಸಿ, ವರ್ಣಮಾಲೆಯ ಪ್ರಕಾರ ಅಭ್ಯರ್ಥಿಗಳಿಗೆ ಕ್ರಮ ಸಂಖ್ಯೆ ಮತ್ತು ಚಿನ್ಹೆ ನೀಡಬೇಕೆಂದು ಅಭ್ಯರ್ಥಿಗಳಾದ ಸಿ ಚನ್ನಪ್ಪ ಮತ್ತು ಡಿ ಪುಟ್ಟಸ್ವಾಮಿ ಯವರು ಆಗ್ರಹಿಸಿದರು. ಈ ಸಂದರ್ಭದಲ್ಲಿ ಹಲವು ಅಭ್ಯರ್ಥಿಗಳು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು