ಗ್ರಾಪಂ ಚುನಾವಣೆಯಲ್ಲಿ ಯೋಗೇಶ್ವರ್ ಗೆ ತಿರುಗೇಟು ನೀಡಿದ ತಾಲ್ಲೂಕು ಮತದಾರರು. ರಾಜ್ಯ ರಾಜಕಾರಣಕ್ಕೆ ಕಾಲಿಟ್ಟ ನಂತರ ತಾಲೂಕಿನಲ್ಲಿ ವರ್ಚಸ್ಸು ಕಳೆದುಕೊಳ್ಳ
ಚನ್ನಪಟ್ಟಣ:ಜ/04/21/ಸೋಮವಾರ.
ಸಿ ಪಿ ಯೋಗೇಶ್ವರ್ ಹೆಸರು ಮತ್ತು ಸಾಧನೆ ನೀರಾವರಿ ಕ್ಷೇತ್ರದಲ್ಲಿ ಒಂದು ಮೈಲಿಗಲ್ಲು. ಸದ್ಯ ಒಂದು ತಾಲೂಕಿನಲ್ಲಿ ಮಾಡಿದ ಈ ಸಾಧನೆ ಇಡೀ ರಾಜ್ಯದ ಅನೇಕ ತಾಲ್ಲೂಕುಗಳು ಮತ್ತು ಪಕ್ಷಾತೀತವಾಗಿ, ಅಂದಿನ ಎಲ್ಲಾ ರಾಜಕಾರಣಿಗಳು ತಿರುಗಿ ನೋಡುವಂತೆ ಮಾಡಿತೆಂದರೆ, ಅದು ಒಂದು ಮಹತ್ಸಾಧನೆ ಎಂದರೆ ತಪ್ಪಾಗಲಾರದು. ನೀರಾವರಿ ಬಿಟ್ಟರೆ ಮಂತ್ರಿಯಾಗಿದ್ದಾಗ ರಾಜ್ಯಕ್ಕಾಗಲಿ, ಎರಡು ದಶಕಗಳ ಕಾಲ ಆಳಿದ ತಾಲೂಕಿನಲ್ಲಾಗಲಿ ಅಂತಹ ಹೇಳಿಕೊಳ್ಳುವಂತಹ ಸಾಧನೆ ಏನೂ ಇಲ್ಲ.
ಇತ್ತೀಚಿಗೆ ಅಂದರೆ ಗ್ರಾಮ ಪಂಚಾಯತಿ ಚುನಾವಣೆಯ ದಿನ, ತಮ್ಮ ಸ್ವಗ್ರಾಮ ಚಕ್ಕೆರೆಯಲ್ಲಿ ಮತ ಚಲಾಯಿಸಿದ ಅವರು, ತಾಲೂಕಿನಲ್ಲಿರುವ ಮೂವತ್ತೆರಡು ಗ್ರಾಮ ಪಂಚಾಯತಿಗಳ ಪೈಕಿ ಇಪ್ಪತ್ತೈದಕ್ಕೂ ಹೆಚ್ಚು ಪಂಚಾಯತಿಗಳು ನಮ್ಮ ಅಂದರೆ ಬಿಜೆಪಿ ಪಾಲಾಗಲಿವೆ. ಇದರಿಂದ ತಾಲೂಕಿನಲ್ಲಿ ಕುಮಾರಸ್ವಾಮಿ ಯವರ ವರ್ಚಸ್ಸು ಏನು ಎಂಬುದು ಗೊತ್ತಾಗಲಿದೆ ಎಂದು ಮಾಧ್ಯಮದವರಿಗೆ ಹೇಳಿಕೆ ನೀಡಿದ್ದರು.
ಮೂರು ದಿನದ ನಂತರ ಬಂದ ಫಲಿತಾಂಶದಲ್ಲಿ ಅವರ ಹೇಳಿಕೆ ಸಂಪೂರ್ಣ ಉಲ್ಟಾ ಆಗಿದ್ದು ಮಾತ್ರ ಬಹಿರಂಗ ಸತ್ಯ.
ತಾಲ್ಲೂಕಿನ ಮಟ್ಟದಲ್ಲಿ ಅವರ್ ಬಿಟ್ರೆ ಇನ್ಯಾರ್ ಎಂಬಂತಿದ್ದ ಅವರಿಗೆ ಕಳೆದ ವಿಧಾನಸಭಾ ಚುನಾವಣೆಯಿಂದ ಹಿನ್ನಡೆಯನ್ನು ಅನುಭವಿಸುತ್ತಲೇ ಬರುತ್ತಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ಒಳಜಗಳದ ಲಾಭ ಪಡೆದು, ರಾಜ್ಯ ನಾಯಕರ ಪಟ್ಟಿಗೆ ಸೇರಲು ಅವಣಿಸುತ್ತಿದ್ದ ಅವರಿಗೆ ವರದಾನ ಆಯಿತಾದರೂ ಅದನ್ನು ಉಳಿಸಿಕೊಳ್ಳಲು ಹಾಗೂ ಬಳಸಿಕೊಳ್ಳಲು ಸಾಧ್ಯವಾಗಲಿಲ್ಲ. ಅಷ್ಟೇ ಏಕೆ ಎಲ್ಲಾ ಅನಿಷ್ಟಕ್ಕೂ ಶನೀಶ್ವರನೇ ಕಾರಣ ಎಂಬಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಕಂಡುಬಂದರು.
ಅವರಿಗೆ ಮಂತ್ರಿ ಪದವಿಗಿಂತ ಒಂದು ಕೈಮೇಲಾಗಿ ಹಳೆ ಮೈಸೂರು ಭಾಗದ ನಾಯಕನಾಗಬೇಕೆಂಬ ಹೆಬ್ಬಯಕೆ ಬಹಳಷ್ಟಿದೆ. ಹಾಗಾಗಿಯೇ ಅವರು ಸಮ್ಮಿಶ್ರ ಸರ್ಕಾರದ ಪತನಕ್ಕೆ ಕೈಹಾಕಿದ್ದು, ಬಿಜೆಪಿ ಸರ್ಕಾರ ರಚನೆಯಾಗಲೂ ಕಾರಣರಾದರೂ ಸಹ ಸರ್ಕಾರ ಬೀಳಿಸಿದ ಕೆಟ್ಟ ಹೆಸರು ಬಂತೇ, ವಿನಹ ಸರ್ಕಾರ ರಚಿಸಿದ ನಂತರ ಅಲ್ಲಿಯೂ ಸಹ ವಿಲನ್ ಆಗಿಯೇ ಉಳಿದದ್ದು ಮಾತ್ರ ಅವರೆಲ್ಲಾ ಆಸೆಗೂ ತಣ್ಣೀರೆರಚಿದಂತಾಗಿದೆ.
ಯಾವಾಗ ಅವರು ರಾಜ್ಯ ಮಟ್ಟದ ನಾಯಕ, ಹಳೇಮೈಸೂರು ಭಾಗದ ನಾಯಕ ಹಾಗೂ ಸಮ್ಮಿಶ್ರ ಸರ್ಕಾರ ಬೀಳಿಸಿ, ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಗೃಹಮಂತ್ರಿ ಒಳಗೊಂಡಂತೆ ಉಪಮುಖ್ಯಮಂತ್ರಿ ಪಟ್ಟದ ಆಸೆ ಇಟ್ಟುಕೊಂಡರೋ, ಅಲ್ಲಿಂದಲೇ ತಾಲ್ಲೂಕಿನ ಮತದಾರರ ಮೇಲಿನ ಹಿಡಿತವನ್ನು ಕಳೆದುಕೊಂಡು ಬರುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅವರ ಕ್ಷೇತ್ರವೇನಿದ್ದರೂ ಅವರಂತೆಯೇ ನಾಮನಿರ್ದೇಶಿತರಾಗಾಗಿಯೇ ಸೀಮಿತವಾಗುತ್ತಿದೆಯೇನೋ ಅನ್ನಿಸುತ್ತಿದೆ.
ಅರ್ಧ ಶತಕಕ್ಕೂ ಹೆಚ್ಚು ಕಾಲ ರಾಜಕೀಯ ಮಾಡಿಕೊಂಡು ಬಂದ, ಇಂದಿಗೂ ರಾಜಕೀಯವನ್ನೇ ಉಸಿರಾಡುತ್ತಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ನೀಲಸಂದ್ರ ದ ಬೋರೆದೇವರ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ದೇವೇಗೌಡರು ತಾಲ್ಲೂಕಿಗೆ ಬಂದಾಗ ಜನ ಸೇರಿಸಲಾಗಿಲ್ಲ. ನನಗೆ ಹೇಳಿದರೆ ಜನ ಕಳುಹಿಸುತ್ತಿದ್ದೆ ಎಂದು ಹೇಳಿಕೆ ನೀಡಿದ್ದೂ ಸಹ ತಾಲ್ಲೂಕಿನ ಜನತೆ ಯೋಗೇಶ್ವರ್ ವಿರುದ್ದ ನಿಲ್ಲುವಂತಾದರೇ, ಅವರ ಕೆಲ ಹಿಂಬಾಲಕರು ಸಹ ಅವರ ತೇಜೋವಧೆಯಲ್ಲಿ ತೊಡಗಿಕೊಂಡಿರುವುದು ಅವರ ಹಿನ್ನಡೆಗೆ ಮುಳುವಾಗಿದೆ.
ಸ್ಥಳೀಯ ಜೆಡಿಎಸ್ ನ ಒಳ ಜಗಳದ ಲಾಭ ಪಡೆದುಕೊಂಡ ಕುಮಾರಸ್ವಾಮಿಯವರು ತಾಲೂಕಿನಲ್ಲಿ ನೆಲೆಯೂರಲು ಸಾಧ್ಯವಾಗಿದೆ. ಅಂತೆಯೇ ಸಿಪಿವೈ ಗೆ ಹಿಂಬೆಂಬಲ ನೀಡುತ್ತಿದ್ದ ಕೆಲ ಜೆಡಿಎಸ್ ನ ನಾಯಕರು ಅಧಿಕಾರವಿಲ್ಲದೆ ಪರಿತಪಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಯೋಗೇಶ್ವರ್ ರವರು ಬೇರೆ ಕ್ಷೇತ್ರದಲ್ಲಿ ಹೋಗಿ ತಾಲ್ಲೂಕಿನ ನೀರಾವರಿ ಹೆಸರೇಳಿಕೊಂಡು ಗೆಲ್ತೀನಿ ಅನ್ನೋ ಆಸೆ ಏನಾದರು ಇದ್ದರೆ ಅದು ನೀರ ಮೇಲಿನ ಗುಳ್ಳೆಯಂತೇ ಎಂದರೆ ತಪ್ಪಾಗಲಾರದು. ರಾಜ್ಯ, ಹಳೇಮೈಸೂರು ಮತ್ತು ಬೇರೆ ಕ್ಷೇತ್ರದ ಆಸೆಯನ್ನು ಸ್ವಲ್ಪ ಸಮಯ ಬದಿಗಿಟ್ಟು, ಬುಡ (ತಾಲ್ಲೂಕು) ಭದ್ರ ಮಾಡಿಕೊಂಡರಷ್ಟೇ ಅವರ ಆಸೆಗಳು ಈಡೇರಬಹುದು. ಇಲ್ಲವಾದರೆ ಗ್ರಾಮ ಪಂಚಾಯತಿಯಲ್ಲಿ ಆದ ಗತಿಯೇ ಜಿಂಕೆಯ ವೇಗದಲ್ಲಿ ಬರುತ್ತಿರುವ ತಾಲ್ಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ, ನಗರಸಭೆಯಲ್ಲೂ ಸಹ ಯೋಗೇಶ್ವರ್ ಮತ್ತು ಬಿಜೆಪಿ ಗೆ ಲತ್ತೆ ಬೀಳುವುದು ಗ್ಯಾರಂಟಿ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು