ಕೊರೊನಾ ಕಾರಣದಿಂದ ಕಾರ್ಯಕ್ರಮಗಳನ್ನು ನಡೆಸಿಲ್ಲ. ಮುಂದಿನ ತಿಂಗಳಿಂದ ಎಲ್ಲಾ ಕಾರ್ಯಕ್ರಮಗಳು ಸುಲಲಿತವಾಗಿ ಜರುಗಲಿವೆ. ಟಿ ತಿಮ್ಮೇಗೌಡ
ರಾಮನಗರ:ಜ/09/21/ಶನಿವಾರ. ಕೊರೊನಾ ಕಾರಣದಿಂದ ಜಾನಪದ ಲೋಕದಲ್ಲಿ ನಡೆಯಬೇಕಾಗಿದ್ದ ಕಾರ್ಯಕ್ರಮಗಳು ನಡೆಯಲಿಲ್ಲ. ಮುಂದಿನ ತಿಂಗಳಿನಿಂದ ಎಲ್ಲಾ ಕಾರ್ಯಕ್ರಮಗಳನ್ನು ಹಂತಹಂತವಾಗಿ ನಡೆಸಲಾಗುವುದು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಟಿ ತಿಮ್ಮೇಗೌಡ ರು ತಿಳಿಸಿದರು.
ಅವರು ಇಂದು ಜಾನಪದ ಲೋಕದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಪ್ರತಿ ವರ್ಷದಂತೆ ಲೋಕೋತ್ಸವ ನಡೆಯಬೇಕಾಗಿತ್ತು. ಆದರೆ ಕೊರೊನಾ ಸಂಕಷ್ಟ ಎದುರಾಗಿದ್ದರಿಂದ ಆಂತಹ ದೊಡ್ಡ ಮಟ್ಟದ ಕಾರ್ಯಕ್ರಮವನ್ನು ನಡಸಲಾಗಲಿಲ್ಲ. ಫೆಬ್ರುವರಿ ತಿಂಗಳಲ್ಲಿ ಲೋಕೋತ್ಸವ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಲಾಗಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿಗಳು ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಜಾನಪದ ಲೋಕದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಆಸಕ್ತ ಯುವಕ ಯುವತಿಯರಿಗೆ ಜಾನಪದ ದ ಹಲವು ಪ್ರಕಾರಗಳನ್ನು ಕಲಿಸಿಕೊಡಲು ಕಲೆ ಬಲ್ಲವರನ್ನು ನೇಮಿಸಿಕೊಳ್ಳಲಾಗಿದೆ. ಕಾಲೇಜಿನ ವಿದ್ಯಾರ್ಥಿಗಳು ಮತ್ತು ಯುವಕ ಯುವತಿಯರು ತಂಡ ರಚಿಸಿಕೊಂಡು ಕಛೇರಿಯಲ್ಲಿ ನೋಂದಾಯಿಸಿಕೊಂಡರೆ ಅವರಿಗೆ ಇಷ್ಟವಾದ ಜಾನಪದ ಕಲೆಗಳನ್ನು ಕಲಿಸಿಕೊಡಲಾಗುವುದು ಎಂದರು.
ಜಾನಪದ ಲೋಕದಲ್ಲಿ ಅನೇಕ ಜಾನಪದ ಪ್ರಕಾರಗಳ ಪ್ರತಿಕೃತಿಗಳನ್ನು ನಿರ್ಮಿಸಲಾಗಿದೆ. ಕೊರೊನಾ ನಂತರ ಪ್ರವಾಸಿಗರು ಬರುತ್ತಿದ್ದಾರೆ. ಇನ್ನೂ ಹಲವು ಪ್ರತಿಕೃತಿಗಳನ್ನು ನಿರ್ಮಿಸಿ ಜಾನಪದದ ಸೊಗಡನ್ನು ಬಿತ್ತರಿಸುತ್ತೇವೆ. ಲೋಕದೊಳಗಿರುವ ಕೆರೆಯನ್ನು ಪುನಶ್ಚೇತನಗೊಳಿಸಿ ಬೋಟಿಂಗ್ ಮತ್ತು ಉದ್ಯಾನ ನಿರ್ಮಿಸಲಾಗುವುದು ಎಂದರು.
ಡಾ ಹೆಚ್ ಎಲ್ ನಾಗೇಗೌಡರು ಕಟ್ಟಿದ ಈ ಸಂಸ್ಥೆಯನ್ನು ನಾಡೋಜ ಜಿ ನಾರಾಯಣ ರವರು ಮುನ್ನಡೆಸಿದರು. ಅವರಿಬ್ಬರ ಇಚ್ಛೆಯಂತೆ ನಾನು ಮುಂದುವರೆಸಿಕೊಂಡು ಹೋಗುತ್ತಿದ್ದೇನೆ. ಮುಂದೆ ಇಡೀ ರಾಷ್ಟ್ರದ ಪ್ರವಾಸಿಗರು ಭೇಟಿ ನೀಡುವಂತೆ ಮಾಡುವ ಉದ್ದೇಶವಿದೆ ಎಂದು ಅವರು ಹೇಳಿಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ಆಡಳಿತಾಧಿಕಾರಿ ರುದ್ರಪ್ಪ, ಚನ್ನಪಟ್ಟಣ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ, ಕಜಾಪ ಜಿಲ್ಲಾಧ್ಯಕ್ಷ ಸು ತ ರಾಮೇಗೌಡ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು