Tel: 7676775624 | Mail: info@yellowandred.in

Language: EN KAN

    Follow us :


ಶುಕ್ರವಾರ ಅಂಬೇಡ್ಕರ್ ಭವನ ಉದ್ಘಾನೆ. ಹೆಚ್ ಡಿ ಕುಮಾರಸ್ವಾಮಿ

Posted date: 20 Jan, 2021

Powered by:     Yellow and Red

ಶುಕ್ರವಾರ ಅಂಬೇಡ್ಕರ್ ಭವನ ಉದ್ಘಾನೆ. ಹೆಚ್ ಡಿ ಕುಮಾರಸ್ವಾಮಿ

ಚನ್ನಪಟ್ಟಣ:ಜ/20/21ಬುಧವಾರ. ಈ ತಿಂಗಳ 22 ನೇ ತಾರೀಖಿನ ಶುಕ್ರವಾರದಂದು ನಗರದ ಅಂಬೇಡ್ಕರ್ ಭವನವನ್ನು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀರಾಮುಲು ಅವರ ಅಧ್ಯಕ್ಷತೆ ಯಲ್ಲಿ ಉದ್ಘಾಟಿಸಲಾಗುವುದು ಎಂದು ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು.


ಅವರು ಇಂದು ಅಂಬೇಡ್ಕರ್ ಭವನಕ್ಕೆ ಭೇಟಿ ನೀಡಿ, ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ, ಮಾಧ್ಯಮದವರೊಂದಿಗೆ ಮಾತನಾಡಿದರು.

ಸ್ಥಳದಲ್ಲಿಯೇ ಗುತ್ತಿಗೆದಾರರಿಗೆ ಕರೆ ಮಾಡಿ, ಇಷ್ಟು ವಿಳಂಬವಾಗಿರುವುದೇ ಸಾಕು, ಉದ್ಘಾಟನೆಯಾದ  15 ದಿನಗಳ ಒಳಗೆ ಸಂಪೂರ್ಣ ಕಾಮಗಾರಿ ಮುಗಿಯಬೇಕು, ನಿಮಗೆ ಏನು ಸಹಾಯ ಬೇಕೋ ಅದನ್ನು ಮಾಡಿಕೊಡಲು ನಾನು ಸಿದ್ದವಿದ್ದೇನೆ. ಕಾಮಗಾರಿ ಮುಗಿದ ನಂತರವೇ ಸಾರ್ವಜನಿಕರಿಗೆ ಉಪಯೋಗವಾಗುವಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ ಎಂದು ಖಡಕ್ ಎಚ್ಚರಿಕೆ ನೀಡಿದರು.


*ಸ್ಥಳದಲ್ಲಿಯೇ ಸಚಿವರಿಗೆ ಕರೆ*

ಸಚಿವ ಶ್ರೀರಾಮುಲು ಅವರಿಗೆ ಕರೆ ಮಾಡಿದ ಶಾಸಕರು, 22 ಕ್ಕೆ ಅಂಬೇಡ್ಕರ್ ಭವನ ತಮ್ಮ ಅಧ್ಯಕ್ಷತೆಯಲ್ಲಿ ಉದ್ಘಾಟನೆಯಾಗಲಿದೆ, ಸ್ಥಳೀಯ ರಾಜಕಾರಣಗಳ ಅವಾಂತರಗಳಿಂದ 15 ವರ್ಷಕ್ಕೂ ಹೆಚ್ಚು ಕಾಲ ವಿಳಂಬವಾಗಿದೆ. ಮುಂದೆ ಹೀಗೆ ಆಗುವುದು ಬೇಡ,  ಉದ್ಘಾಟನೆಯಾದ ನಂತರ ಭವನಕ್ಕೆ ಬೇಕಾದ ಸವಲತ್ತುಗಳನ್ನು ಅಧಿಕಾರಿ ಗಳಿಗೆ ಹೇಳಿ ಕೊಡಿಸುವುದು ತಮ್ಮ ಜವಾಬ್ದಾರಿ. ಹಾಗೆಯೇ ತಾಲ್ಲೂಕಿನಾದ್ಯಂತ ಹತ್ತಕ್ಕೂ ಹೆಚ್ಚು ಅಂಬೇಡ್ಕರ್ ಭವನಗಳಿಗೆ ಬೇಡಿಕೆ ಇಟ್ಟಿದ್ದಾರೆ. ಎರಡು ಅಥವಾ ಮೂರು ಭಾರಿ ಅನುದಾನ ಕೊಡುವ ಬದಲು, ಒಂದೇ ಬಾರಿಗೆ ಸಂಪೂರ್ಣ ಅನುದಾನ ಒದಗಿಸಿದರೆ. ಏಕ ಕಾಲದಲ್ಲಿಯೇ ಅಂಬೇಡ್ಕರ್ ಭವನ ತಲೆ ಎತ್ತಲಿವೆ ಎಂದು ಮನವಿ ಮಾಡಿದರು.


ಯೋಗೇಶ್ವರ್ ಹೆಸರೇಳದೆ, ವಿಷಯ ಪ್ರಸ್ತಾಪಿಸಿದ ಕುಮಾರಸ್ವಾಮಿ ಯವರು ಆಹ್ವಾನ ಪತ್ರಿಕೆಯಲ್ಲಿ ನೂತನ ಸಚಿವರ ಹೆಸರನ್ನು ಮುದ್ರಿಸಿ, ಅವರಿಗೂ ಆಹ್ವಾನ ಪತ್ರಿಕೆ ತಲುಪಿಸಿ ಎಂದರು.

ನೀಲಸಂದ್ರದ ಅಣ್ಣಯ್ಯ ನವರು, ಕುಮಾರಸ್ವಾಮಿ ಯವರಿಗೆ 22 ನೇ ತಾರೀಖು ತುಂಬಾ ಹತ್ತಿರವಿರುವುದರಿಂದ ಎಲ್ಲಾ ದಲಿತ ಮುಖಂಡರನ್ನು ಆಹ್ವಾನಿಸಲು ಕಷ್ಟವಾಗುತ್ತದೆ ಎಂದಾಗ, ಕಿಡಿಯಾದ ಕುಮಾರಸ್ವಾಮಿ, ಕರೆಯುವುದು ನಿಮ್ಮ ಜವಾಬ್ದಾರಿ, ಎಲ್ಲರನ್ನು ಕರೆಯಿರಿ, 22 ನೇ ತಾರೀಖು ಉದ್ಘಾಟನೆಯಾಗುತ್ತದೆ, ಉಳಿದ ಕೆಲಸವನ್ನು ನಾನು ಮಾಡಿಸಿಕೊಡುತ್ತೇನೆ ಎಂದರು.


ನಗರಸಭೆಯ ಪೌರಾಯುಕ್ತ ಶಿವನಾಂಕಾರಿಗೌಡರನ್ನು ಕರೆದ ಅವರು, ಗಾಂಧಿಭವನದ ಎಲ್ಲಾ ದಾಖಲೆಗಳನ್ನು ಶೀಘ್ರವಾಗಿ ಹುಡುಕಿ ಕೊಡಿ, ಏನಾಗಿದೆ ಎಂದು ಪರಿಶೀಲಿಸಿ ವರದಿ ಸಲ್ಲಿಸಿ. ಸುಸಜ್ಜಿತ ಗ್ರಂಥಾಲಯವೊಂದನ್ನು ನಿರ್ಮಿಸಿ ಕೊಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದರು.


ಭವನ ವೀಕ್ಷಣೆಯ ಸಂದರ್ಭದಲ್ಲಿ ಇಂಜಿನಿಯರ್ ಚಿಕ್ಕವೆಂಕಟೇಶ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಶಾರದಾ, ಮುಖಂಡರಾದ ಜಯಮುತ್ತು, ಗೋವಿಂದಹಳ್ಳಿ ನಾಗರಾಜು ಹಾಗೂ ದಲಿತ ಮುಖಂಡರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑