Tel: 7676775624 | Mail: info@yellowandred.in

Language: EN KAN

    Follow us :


ಆರೋಗ್ಯ ಇಲಾಖೆ ಸಾರ್ವಜನಿಕರ ನಡುವೆ ಮಾಧ್ಯಮಗಳು ಜ್ಞಾನದ ಸೇತುವೆಯಾಗಿವೆ. ಡಾ ಪ್ರಸನ್ನ

Posted date: 23 Jan, 2021

Powered by:     Yellow and Red

ಆರೋಗ್ಯ ಇಲಾಖೆ  ಸಾರ್ವಜನಿಕರ ನಡುವೆ ಮಾಧ್ಯಮಗಳು ಜ್ಞಾನದ ಸೇತುವೆಯಾಗಿವೆ. ಡಾ ಪ್ರಸನ್ನ

ರಾಮನಗರ:ಜ/23/21/ಶನಿವಾರ. ಆರೋಗ್ಯ ಇಲಾಖೆಯಲ್ಲಿ ಜನರ ಆರೋಗ್ಯ ಕಾಪಾಡಲು ಹಲವಾರು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಇದನ್ನು ಅನುಷ್ಠಾನಗೊಳಿಸಲು ಜನರಿಗೆ ಬೇಕಿರುವ ಅರಿವು ಹಾಗೂ ಜ್ಞಾನವನ್ನು ತಲುಪಿಸುವ ಕೆಲಸವನ್ನು ಮಾಧ್ಯಮಗಳು ಮಾಡುತ್ತಿವೆ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ: ಪ್ರಸನ್ನ ಕುಮಾರ್ ಎನ್ ಅವರು ತಿಳಿಸಿದರು.


ಅವರು ಶುಕ್ರವಾರ ಜಿಲ್ಲಾ ಆರೋಗ್ಯ ಇಲಾಖೆ ತರಬೇತಿ ಸಂಸ್ಥೆಯಲ್ಲಿ ಎನ್.ವಿ.ಬಿ.ಡಿ.ಸಿ ಕಾರ್ಯಕ್ರಮಗಳ ಬಗ್ಗೆ ಮಾಧ್ಯಮ ಮಿತ್ರರಿಗೆ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ದೇಶ 2014 ಕ್ಕೆ ಪೋಲೀಯೋ ಮುಕ್ತವಾಗಿದೆ ಹಾಗೂ 2025ಕ್ಕೆ ಮಲೇರಿಯಾ ಮುಕ್ತವಾಗಲು ಪ್ರಯತ್ನಿಸಲಾಗುತ್ತಿದೆ. ರೋಗ ಮುಕ್ತಗೊಳಿಸಲು ಆರೋಗ್ಯ ಇಲಾಖೆಯೊಂದಿಗೆ ಜನರಿಗೆ ರೋಗಗಳ ಲಕ್ಷಣ, ಮುಂಜಾಗ್ರತಾ ಕ್ರಮಗಳು, ಸಾರ್ವಜನಿಕರಿಗೆ  ತಿಳಿಸಿ ಆರೋಗ್ಯ ಇಲಾಖೆಯೊಂದಿಗೆ ಮಾಧ್ಯಮಗಳು ಸದಾ ಕೆಲಸ ಮಾಡುತ್ತಿದೆ  ಎಂದರು.


2020 ನೇ ಸಾಲಿನಲ್ಲಿ ರಾಮನಗರ ಜಿಲ್ಲೆಯಲ್ಲಿ ಮಲೇರಿಯಾ-3, ಫೈಲೇರಿಯಾ-21, ಡೆಂಗ್ಯೂ-14, ಚಿಕೂನ್ ಗುನ್ಯ- 37 ಪ್ರಕರಣಗಳು ವರದಿಯಾಗಿದೆ. ಮುಂದಿನ ದಿನಗಳಲ್ಲಿ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಮಾಧ್ಯಮದವರು ಪ್ರಚಾರ ಕಾರ್ಯಗಳಲ್ಲಿ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದರು.


ಕೀಟ ಶಾಸ್ತ್ರ ತಜ್ಞೆ ಮಂಜುಶ್ರೀ ಅವರು ಮಾತನಾಡಿ ಡೆಂಗಿ ಮತ್ತು ಚಿಕುಂಗುನ್ಯಾ ಈಡೀಸ್ ಸೊಳ್ಳೆಯ ಕಚ್ಚುವಿಕೆಯಿಂದ ಹರಡುತ್ತದೆ.  ಈ ರೋಗಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇರುವುದಿಲ್ಲ. ರೋಗದ ಲಕ್ಷಣಗಳಿಗನುಸಾರವಾಗಿ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಾರೆ. ಚಿಕುಂಗುನ್ಯಾ ಮಾರಣಾಂತಿಕವಲ್ಲ. ಡೆಂಗಿ ಅಘಾತಕಾರಿ ಜ್ವರವಾಗಿದ್ದು ಕೆಲವು ಸಂದರ್ಭದಲ್ಲಿ ಮಾರಣಾಂತಿಕವಾಗಬಹುದು. ಸೊಳ್ಳೆಗಳನ್ನು ನಿಯಂತ್ರಿಸುವ ಮುನ್ನಚ್ಚರಿಕಾ ಕ್ರಮ ಕೈಗೊಳ್ಳುವುದರಿಂದ 

 ರೋಗವನ್ನು ತಡೆಗಟ್ಟಬಹುದು ಎಂದರು.


ಸೊಳ್ಳೆ ನಿಯಂತ್ರಿಸುವ ಕ್ರಮಗಳ ಬಗ್ಗೆ ವಿವರಿಸಿದ ಅವರು ಆರೋಗ್ಯ ಇಲಾಖೆ ವತಿಯಿಂದ ಆಶಾ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿದಾಗ ಜನ ಸಮಾನ್ಯರು ನಿಖರ ಮಾಹಿತಿ ನೀಡಿ ಸಹಕರಿಸಬೇಕು ಎಂದರು‌


ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲ ಎಸ್.ಎಚ್., ಆರೋಗ್ಯ ಇಲಾಖೆ ಸಿಬ್ಬಂದಿ ವಿನಯ್ ಕುಮಾರ್  ಬಿ, ಸಿದ್ದರಾಮಯ್ಯ ಸಿ ಮತ್ತು ರಾಜೇಂದ್ರ ಎಚ್.ಸಿ. ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑