Tel: 7676775624 | Mail: info@yellowandred.in

Language: EN KAN

    Follow us :


ಗಬ್ಬೆದ್ದು ನಾರುತ್ತಿದೆ ಹೊಂಗನೂರು ಗ್ರಾಮದ ಮಾದರಿ ಪಾಠಶಾಲೆಯ ಹಳೆಯ ಕಟ್ಟಡ

Posted date: 06 Feb, 2021

Powered by:     Yellow and Red

ಗಬ್ಬೆದ್ದು ನಾರುತ್ತಿದೆ ಹೊಂಗನೂರು ಗ್ರಾಮದ ಮಾದರಿ ಪಾಠಶಾಲೆಯ ಹಳೆಯ ಕಟ್ಟಡ

ಚನ್ನಪಟ್ಟಣ:ಫೆ:02/21/ಮಂಗಳವಾರ. ತಾಲ್ಲೂಕಿನ ಹೊಂಗನೂರು ಗ್ರಾಮದ ಮುಖ್ಯ ರಸ್ತೆಯಲ್ಲಿ ಮಾದರಿ ಮಾಧ್ಯಮಿಕ ಶಾಲೆ ಈ ಮೊದಲು ಅಸ್ತಿತ್ವದಲ್ಲಿತ್ತು. ಊರ ಹೊರಗಿನ ದೊಡ್ಡ ಜಾಗದಲ್ಲಿ ಹೊಸದಾಗಿ ನಿರ್ಮಿಸಿದ ಹೊಸ ಕಟ್ಟಡಕ್ಕೆ ಶಾಲೆಯು ಸ್ಥಳಾಂತರಗೊಂಡು ನಡೆಯುತ್ತಿದೆ. ಆದರೆ ಹಳೆಯ ಕಟ್ಟಡ ಮಾತ್ರ ಹಾಳು ಕೊಂಪೆಯಾಗಿ, ಭೂತಬಂಗಲೆಯಾಗಿ ಪರಿವರ್ತಿತವಾಗಿದೆ.


ಸುಮಾರು ಎಂಟಕ್ಕೂ ಹೆಚ್ಚು ಕೊಠಡಿಗಳಿದ್ದು ತಾರಸಿ ಮತ್ತು ಮಂಗಳೂರು ಹೆಂಚನ್ನು ಹೊದ್ದು ಮಲಗಿದ ಈ ಶಾಲೆಯ ಮುಂಭಾಗದ ಛಾವಣಿ ಕುಸಿದು ಬಿದ್ದಿದೆ. ಶಾಲೆಗೆ ಕಾಂಪೌಂಡ್ ಸಹ ಇದ್ದು ಗಿಡಗಂಟಿಗಳು ಬೆಳೆದು ನಿಂತಿವೆ. ಮುಂಭಾಗದಿಂದ ಒಳಹೋಗಲು ಸರೀಸೃಪಗಳ ಭಯ ಕಾಡುವಷ್ಟು ಗಿಡಗಂಟಿಗಳು ಹಬ್ಬಿವೆ.


ಶಾಲೆಯ ಒಂದು ಭಾಗದಲ್ಲಿ ಸ್ಥಳೀಯರು ಎಮ್ಮೆಗಳನ್ನು ಕಟ್ಟಿಕೊಂಡಿದ್ದಾರೆ. ಶಾಲೆಯೊಳಗೆ ತಿಪ್ಪೆಯನ್ನು ಸಹ ಮಾಡಿಕೊಂಡಿದ್ದು ಜಾನುವಾರುಗಳ ಕಸದ ರಾಶಿಯೆಲ್ಲವೂ ಅಲ್ಲೇ ಗುಡ್ಡೆ ಹಾಕಲಾಗಿದೆ. ರಾಸುಗಳಲ್ಲದೇ ರಾಸುಗಳಿಗೆ ಬೇಕಾದ ಮೇವನ್ನು ಕೊಠಡಿಗಳಲ್ಲಿ ತುಂಬಿಸಿ, ನಿತ್ಯ ಬಳಕೆಯ ಸೌದೆಗಳನ್ನೂ ಸಹ ಸ್ಥಳೀಯರು ಪೇರಿಸಿಟ್ಟುಕೊಂಡಿದ್ದಾರೆ.


ನೆಲಮಾಳಿಗೆಯಲ್ಲಿರುವ ತೊಟ್ಟಿಯಲ್ಲಿ ನೀರು ಗಬ್ಬು ನಾರುತ್ತಿದೆ. ಎಲ್ಲೆಂದರಲ್ಲಿ ಶೌಚ ಮಾಡಲಾಗಿದೆ. ಹಲವು ಕಡೆ ಹೆಂಡ ಸಾರಾಯಿಗಳ ಖಾಲಿ ಬಾಟಲುಗಳು ರಾರಾಜಿಸುವ ಮೂಲಕ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂಬುದಕ್ಕೆ ಸಾಕ್ಷಿಭೂತವಾಗಿ ನಿಂತಿವೆ. ಶಿಕ್ಷಣ ಇಲಾಖೆ ಮಾತ್ರ ನಮಗೂ ಅದಕ್ಕೂ ಸಂಬಂಧವಿಲ್ಲದಂತೆ ತಣ್ಣನೆ ಕುಳಿತಿದೆ.


ಮಂಗಳೂರು ಹೆಂಚು ಇರುವ ಕೊಠಡಿಗಳಲ್ಲಿ ಬೆಲೆ ಬಾಳುವ ಟೀಕ್ ಮರಗಳ ಛಾವಣಿ ಇದೆ. ವಾರ್ಷಿಕ ಸಹಸ್ರಾರು ಫಸಲು ನೀಡುವ ಬೃಹತ್ ತೆಂಗಿನ ಮರಗಳಿವೆ. ಇವುಗಳನ್ನು ಮಾರಾಟ ಮಾಡಿದರೂ ಲಕ್ಷಾಂತರ ರೂಪಾಯಿ ಶಿಕ್ಷಣ ಸಂಸ್ಥೆಗೆ ಬರುತ್ತದೆ. ಅದೇ ಹಣದಲ್ಲಿ ಕಟ್ಟಡವನ್ನು ತೆರವುಗೊಳಿಸಿ ತಡೆಗೋಡೆ ನಿರ್ಮಿಸಿ ಗ್ರಾಮಕ್ಕೆ ಅನುಕೂಲ ಕಲ್ಪಿಸುವ ಕೆಲಸವನ್ನು ಶಿಕ್ಷಣ ಇಲಾಖೆ ಕೈಗೊಳ್ಳಬೇಕಾಗಿದೆ.


ಈ ಶಾಲೆಯು ಸ್ಥಳಾಂತರಗೊಂಡ ನಂತರ ಇದು ಪಾಳು ಬಂಗಲೆಯಾಗಿವೆ. ಗ್ರಾಮದಲ್ಲಿ ಇರುವ ಎಲ್ಲಾ ಧರ್ಮ ಮತ್ತು ಸಮುದಾಯಗಳಿಗೆ ಸರ್ಕಾರದಿಂದ ಜಾಗ ನೀಡಿದ್ದು, ಒಕ್ಕಲಿಗ ಸಮುದಾಯಕ್ಕೆ ಜಾಗವಿಲ್ಲ. ಈ ಜಾಗವನ್ನು ಒಕ್ಕಲಿಗ ಜನಾಂಗಕ್ಕೆ ನೀಡಿದರೆ ಗ್ರಾಮದ ಎಲ್ಲಾ ಸಮುದಾಯದವರಿಗೂ ಅನುಕೂಲವಾಗುವಂತಹ ಸಮುದಾಯ ಭವನ ಕಟ್ಟುತ್ತೇವೆ ಎಂದು ಸ್ಥಳೀಯ ಯುವ ಮುಖಂಡರು ತಮ್ಮ ಅಭಿಲಾಷೆಯನ್ನು ವ್ಯಕ್ತಪಡಿಸಿದರು.


ಶಾಲೆಯ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜುರವರನ್ನು ಪ್ರಶ್ನಿಸಿದಾಗ ಅವರಿಂದ ಸಮರ್ಪಕ ಉತ್ತರ ಸಿಗಲಿಲ್ಲ. ಆದರೂ ಅವರು ಶಿಕ್ಷಣ ಸಂಸ್ಥೆಗೆ ಸೇರಿದ ಜಾಗವನ್ನು ಸಂಘಸಂಸ್ಥೆಗಳಿಗಿರಲಿ, ಅಂಗನವಾಡಿ ಹೊರತುಪಡಿಸಿ ಸರ್ಕಾರದ ಯಾವ ಇಲಾಖೆಗೂ ನೀಡಲು ಅವಕಾಶವಿಲ್ಲ. ಶೀಘ್ರವಾಗಿ ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑