ವಿದ್ಯಾವಂತರೇ ಮತದಾನದಿಂದ ಹಿಂದುಳಿದಿರುವುದು ಪ್ರಜಾಪ್ರಭುತ್ವದ ದುರ್ದೈವ. ನ್ಯಾಯಮೂರ್ತಿ ಯರಮಾಲ್ ಕಲ್ಪನಾ
ಚನ್ನಪಟ್ಟಣ:ಜ/29/21/ಶುಕ್ರವಾರ. ರಾಷ್ಟ್ರದ ಏಳ್ಗೆಗಾಗಿ ಎಲ್ಲರೂ ಮತದಾನ ಮಾಡಬೇಕು. ಅದರಲ್ಲೂ ಉತ್ತಮ ಹಾಗೂ ಪ್ರಾಮಾಣಿಕ ವ್ಯಕ್ತಿಗೆ ಮತ ನೀಡುವ ಮೂಲಕ ಅಭಿವೃದ್ಧಿ ಪಥದತ್ತ ಹೆಜ್ಜೆ ಹಾಕಬೇಕು. ಜನಸಂಖ್ಯೆಗನುಗುಣವಾಗಿ ಮತದಾನ ಆಗದಿರುವುದು ನೋವು ತರುತ್ತಿದೆ. ಅದರಲ್ಲೂ ವಿದ್ಯಾವಂತರೇ ಮತದಾನ ಮಾಡದಿರುವುದು ಸಂವಿಧಾನದ ದುರ್ದೈವ ಎಂದರೆ ತಪ್ಪಾಗಲಾರದು. ಎಂದು ಚನ್ನಪಟ್ಟಣ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶೆ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರಾದ ಯರಮಾಲ್ ಕಲ್ಪನಾ ರವರು ಅಭಿಪ್ರಾಯ ಪಟ್ಟರು.
ಅವರು ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ರಾಷ್ಟ್ರೀಯ ಯುವದಿನ ಮತ್ತು ಮತದಾರರ ದಿನ ಹಾಗೂ ಸಂವಿಧಾನದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜನಸಾಮಾನ್ಯರಿಗೆ ಕಾನೂನಿನ ತಿಳುವಳಿಕೆ ಇರಬೇಕು. ಆತನಿಗೆ ಸರಿ ತಪ್ಪುಗಳ ಅರಿವು ಇರಬೇಕು. ಮತದಾನದಿಂದ ಆಗುವ ಅಭಿವೃದ್ಧಿಯನ್ನು ತಿಳಿದಿರಬೇಕು. ರಾಷ್ಟ್ರದ ಏಳ್ಗೆಗಾಗಿ ಉತ್ತಮ ರಾಜಕೀಯ ಪಟುವನ್ನು ಮತದಾನದ ಮೂಲಕ ಆರಿಸಿ ಕಳುಹಿಸುವ ಛಾತಿ ಉಳ್ಳವನಾಗಿರಬೇಕು. ಆಗಲೇ ಮತದಾರ ಮತ್ತು ರಾಷ್ಟ್ರ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗುತ್ತದೆ ಎಂದರು.
ಮತದಾನ ಕುರಿತು ಉಪನ್ಯಾಸ ನೀಡಿದ ವಕೀಲೆ ಅಂಬಿಕಾ ರವರು, ಮತದಾನ ಹಕ್ಕುಳ್ಳ ಎಲ್ಲಾ ನಾಗರೀಕರು ತಪ್ಪದೇ ಮತ ನೀಡಬೇಕು. ಅದಕ್ಕೂ ಮೊದಲು ಎಂತಹ ವ್ಯಕ್ತಿಗೆ ಮತದಾನ ಮಾಡಬೇಕು ಎಂದು ತಿಳಿದುಕೊಳ್ಳಬೇಕು. ನನ್ನೊಬ್ಬನ ಮತದಿಂದ ಏನಾಗಿಬಿಡುತ್ತದೆ ಎಂಬ ತಪ್ಪು ಕಲ್ಪನೆ ಇರಬಾರದು. ಮತ ಎನ್ನುವುದು ಗುಂಡಿಗಿಂತ (ಬುಲೆಟ್) ಬಲಿಷ್ಠವಾದುದು. ದೇಶದ ಅಭಿವೃದ್ಧಿಗಾಗಿ ನಮ್ಮ ಮತ ಅತ್ಯಮೂಲ್ಯ. ಇಂತಹ ಮತವನ್ನು ಯಾರದೋ ಮರ್ಜಿಗೊಳಗಾಗಿ, ಹಣ, ಹೆಂಡ, ಆಮಿಷಕ್ಕೊಳಗಾಗಿ ಮಾರಿಕೊಳ್ಳುವ ದಡ್ಡತನ ನಮ್ಮನ್ನು ಆವರಿಸದಂತೆ, ಎಚ್ಚರಿಕೆಯಿಂದ ನಮ್ಮ ಮತ ನೀಡಬೇಕು ಎಂದು ಕರೆ ನೀಡಿದರು.
ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಉಪನ್ಯಾಸ ನೀಡಿದ ವಕೀಲ ಗಂಗಾಧರ ರವರು ನಮ್ಮ ಸಂವಿಧಾನದಲ್ಲಿ ಆರು ಮೂಲಭೂತ ಹಕ್ಕುಗಳನ್ನು ನೀಡಲಾಗಿದೆ. ಇದರ ಸಂಪೂರ್ಣ ಅರ್ಥ ಸಮಾಜದಲ್ಲಿ ಎಲ್ಲರೂ ಸಮಾನರು ಎಂಬುದಾಗಿದೆ. ವಿಶೇಷವಾಗಿ ಕಾನೂನಿನ ಮುಂದೆ ಸರ್ವರೂ ಸಮಾನರು. ರಾಷ್ಟ್ರಪತಿ ಮತ್ತು ರಾಜ್ಯಪಾಲರು ಹುದ್ದೆಯಲ್ಲಿದ್ದಾಗಿನ ಸಮಯ ಹೊರತು ಪಡಿಸಿ, ತಪ್ಪು ಮಾಡಿದವರೆಲ್ಲರೂ ಕಾನೂನಿ ಅಡಿಯಲ್ಲಿ ಶಿಕ್ಷೆಗೆ ಗುರಿಯಾಗಲೇಬೇಕು ಎಂದು ಸ್ಪಷ್ಟವಾಗಿ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ವಾಕ್ ಸ್ವಾತಂತ್ರ್ಯ ಇದೆ ಎಂದು ಏನು ಬೇಕಾದರೂ ಬರೆಯುವ ಹಾಗೂ ಮಾತನಾಡುವ ಹಕ್ಕು ಇಲ್ಲ. ಹುಟ್ಟಿನಿಂದಲೇ ಯಾರೂ ಅಪರಾಧಿಗಳಲ್ಲದ್ದರಿಂದ ಅವರಿಗೂ ಹಲವಾರು ಸ್ವಾತಂತ್ರ್ಯಗಳಿವೆ. ಅಗ್ರ ತಪ್ಪು ಮಾಡಿದವರಿಗೆ ಮರಣದಂಡನೆ ನೀಡುವ, ಉದ್ದೇಶ ಎಂದರೆ ಉಳಿದವರು ಎಚ್ಚೆತ್ತುಕೊಳ್ಳಲಿ ಎಂಬುದಾಗಿದೆ. ಶೈಕ್ಷಣಿಕ ಮತ್ತು ಸೈನ್ಯದಲ್ಲಿ ನೀಡುವ ಬಿರುದುಗಳನ್ನು ಮಾತ್ರ ತಮ್ಮ ಹೆಸರಿನ ಜೊತೆ ಸೇರಿಸಿಕೊಳ್ಳಬಹುದೇ ವಿನಹ ಇನ್ನಿತರ ಬಿರುದು ಬಾವಲಿಗಳನ್ನು ಅವರೆಷ್ಟೇ ಪ್ರಭಾವಿತರಾದರು ಸೇರಿಸಿಕೊಂಡರೆ ಅದು ಸಹ ಅಪರಾಧ ಎಂದರು.
ಕಾರ್ಯಕ್ರಮದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಎಂ ಎನ್ ರಾಜಶೇಖರ ಮೂರ್ತಿ, ಸಹಾಯಕ ಸರ್ಕಾರಿ ಅಭಿಯೋಜಕ ವೀರಭದ್ರಯ್ಯ, ತಾಲ್ಲೂಕು ವಕೀಲರ ಸಂಘದ ಕಾರ್ಯದರ್ಶಿ ಎಲ್ ಶಿವರಾಜು, ಆರ್ ರಂಗಸ್ವಾಮಿ ಮಾತನಾಡಿದರು.
ಉಪನ್ಯಾಸಕರಾದ ಅನುರಾಧ, ಸುರೇಖಾ, ಶೋಭಾರಾಣಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845846139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು