ನಮ್ಮ ತಂಡದಿಂದ ಯಾವುದೇ ಲೋಪದೋಷಗಳಾಗಿಲ್ಲ. ಸಮಾನ ಮನಸ್ಕರ ತಂಡದ ಆರೋಪ ನಿರಾಧಾರ ಸಿಂಲಿಂ.
ಒಕ್ಕಲಿಗರ ಸಾರ್ವಜನಿಕ ವಿದ್ಯಾರ್ಥಿ ನಿಲಯದ ಆಡಳಿತ ಮಂಡಳಿಯ ಕಳೆದ ಐದು ವರ್ಷದಲ್ಲಿ ಯಾವುದೇ ಲೋಪ ದೋಷಗಳಾಗಿಲ್ಲ. ಸಮಾನ ಮನಸ್ಕರ ತಂಡವು ನಿನ್ನೆ ನಮ್ಮ ಮೇಲೆ ಮಾಡಿರುವ ಆರೋಪವು ನಿರಾಧಾರ. ತಮ್ಮ ಬಳಿ ದಾಖಲೆ ಇದ್ದರೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ದೂರು ಸಲ್ಲಿಸಲಿ. ಅವರ ಚುನಾವಣಾ ಗೆಲುವಿಗೆ ನಮ್ಮ ತಂಡದ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಸಲ್ಲ ಎಂದು ಸಿಂ ಲಿಂ ನಾಗರಾಜು ಮಾಧ್ಯಮದವರಿಗೆ ತಿಳಿಸಿದರು.
ಅವರು ಇಂದು ನಗರದ ಟಿ ಕೆ ಯೋಗೇಶ್ ರವರ ಮನೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ನಾವು ಕಳೆದ ಐದು ವರ್ಷಗಳ ಅವಧಿಯಲ್ಲಿ ನಾವು ಅಭಿವೃದ್ಧಿಯನ್ನು ಸಾಧಿಸಿದ್ದೇವೆ. ಕೆಲವು ಕಾಮಗಾರಿಗಳು ಬಾಕಿ ಉಳಿದಿವೆ. ಈ ಅವಧಿಯಲ್ಲೂ ನಾವೇ ಗೆಲ್ಲುತ್ತೇವೆ. ನಾವು ಸೋತು ಅವರೇ ಗೆದ್ದರೂ ಸಹ ತನಿಖೆ ಮಾಡಲಿ. ನಾವು ಸಿದ್ದರಿದ್ದೇವೆ. ತಾಲ್ಲೂಕಿನಾದ್ಯಂತ ನಮ್ಮ ತಂಡದ ಪರ ಒಲವಿದೆ. ಬಾಕಿ ಉಳಿದಿರುವ ಕಾಮಗಾರಿಗಳ ಜೊತೆಗೆ ಇನ್ನೂ ಹೆಚ್ಚಿನ ಅಭಿವೃದ್ಧಿ ಮಾಡುತ್ತೇವೆ ಎಂದು ತಿಳಿಸಿದರು.
ಮತ್ತೋರ್ವ ಅಭ್ಯರ್ಥಿ ರಂಗಸ್ವಾಮಿ ಮಾತನಾಡಿ, ನಮ್ಮ ತಂಡದ ಆಡಳಿತದ ಅವಧಿಯಲ್ಲಿ ಯಾವುದೇ ಹಣ ದುರ್ಬಳಕೆ ಆಗಿಲ್ಲ. ನ್ಯಾಯಯುತವಾಗಿ ಎಲ್ಲಾ ವ್ಯವಹಾರಗಳನ್ನು ಮಾಡಿದ್ದೇವೆ. ನಿನ್ನೆ ಆರೋಪ ಮಾಡಿದ ತಂಡದವರಲ್ಲಿರುವ ಮೂರು ಮಂದಿ ಚುನಾವಣೆಗೆ ಸ್ಫರ್ಧಿಸಿದ್ದಾರೆ. ಅವರಲ್ಲಿ ಇಬ್ಬರು ಸ್ಪರ್ದಿಸಲು ಬೈಲಾ ದಲ್ಲಿ ಅವಕಾಶವಿಲ್ಲ. ನಾವು ಕಟ್ಟಡದಲ್ಲಿರುವ ಅಂಗಡಿಗಳನ್ನು ಏಳು ಸಾವಿರ ರೂಪಾಯಿ ಬಾಡಿಗೆ ನಿಗದಿ ಮಾಡಿದ್ದೇವೆ. ಅವರಲ್ಲಿ ಕೆಲವರು ಹೆಚ್ಚಿನ ಬಾಡಿಗೆಗೆ ಪರಭಾರೆ ಮಾಡಿದ್ದಾರೆ. ಇಂತಹವರು ಗೆದ್ದು ಬಂದರೆ ಅಭಿವೃದ್ಧಿ ಅಸಾಧ್ಯ ಎಂದರು.
ನಿವೃತ್ತ ಉಪನ್ಯಾಸಕ ಚನ್ನಪ್ಪ (ಸಿಸಿ)/ಮಾತನಾಡಿ ನಮ್ಮ ತಂಡ ಹಳೇಬೇರು ಹೊಸ ಚಿಗುರು ಇದ್ದಂತೆ. ಹಳೆಯ ಆರು ಮಂದಿ ಹೊಸದಾಗಿ ಒಂಭತ್ತು ಮಂದಿ ಸ್ಪರ್ಧಿಸುತ್ತಿದ್ದೇವೆ. ನಾವು ಹದಿನೈದು ಮಂದಿಯೂ ಯಾವುದೇ ಅಡೆತಡೆಯಿಲ್ಲದೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಟಿ ಕೆ ಯೋಗೇಶ್, ಉಮಾಶಂಕರ್, ಗುರುಲಿಂಗಯ್ಯ ಮುಂತಾದವರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು