Tel: 7676775624 | Mail: info@yellowandred.in

Language: EN KAN

    Follow us :


ಬೋಧಕ ಮತ್ತು ವಿದ್ಯಾರ್ಥಿ ಕೌಶಲ್ಯ ಅಭಿವೃದ್ಧಿಗೆ ಟೊಯೋಟಾ ಕಿರ್ಲೋಸ್ಕರ್ ಮೋಟಾರ್, ATME ಕಾಲೇಜ್ ಆಫ್ ಎಂಜಿನಿಯರಿಂಗ್ ನೊಂದಿಗೆ ಪರಸ್ಪರ ಒಪ್ಪಂದ.

Posted date: 24 Feb, 2021

Powered by:     Yellow and Red

ಬೋಧಕ ಮತ್ತು ವಿದ್ಯಾರ್ಥಿ ಕೌಶಲ್ಯ ಅಭಿವೃದ್ಧಿಗೆ ಟೊಯೋಟಾ ಕಿರ್ಲೋಸ್ಕರ್ ಮೋಟಾರ್, ATME ಕಾಲೇಜ್ ಆಫ್ ಎಂಜಿನಿಯರಿಂಗ್ ನೊಂದಿಗೆ ಪರಸ್ಪರ ಒಪ್ಪಂದ.

ಬಿಡದಿ:ಫೆ/22/21. ಸ್ಕಿಲ್ ಇಂಡಿಯಾ ಮಿಷನ್ ಗೆ ಕೊಡುಗೆ ನೀಡಲು ಬದ್ಧತೆ ಹೊಂದಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಮೈಸೂರಿನ ಎಟಿಎಂಇ ಎಂಜಿನಿಯರಿಂಗ್ ಕಾಲೇಜ್ (ಎಟಿಎಂಇಸಿಇ) ಜತೆ ಒಪ್ಪಂದಕ್ಕೆ ಸಹಿ ಹಾಕುವುದಾಗಿ ಪ್ರಕಟಿಸಿದೆ. TKM ತನ್ನ ತರಬೇತಿ ಸಂಸ್ಥೆಯಾದ ಟೊಯೋಟಾ ಲರ್ನಿಂಗ್ ಅಂಡ್ ಡೆವಲಪ್ ಮೆಂಟ್ ಇಂಡಿಯಾ ಮೂಲಕ ATMECE ನೊಂದಿಗೆ ಸಹಭಾಗಿತ್ವವನ್ನು ಆರಂಭಿಸಿದೆ. ಟೊಯೊಟಾದ ಅತ್ಯುತ್ತಮ ಅಭ್ಯಾಸಗಳನ್ನು ಬೋಧಕರೊಂದಿಗೆ ಹಂಚಿಕೊಳ್ಳುವ, ಉದ್ಯಮ-ಶೈಕ್ಷಣಿಕ ಅಂತರವನ್ನು ಸರಿದೂಗಿಸುವುದು ಮತ್ತು ವಿದ್ಯಾರ್ಥಿಗಳಿಗೆ ಉದ್ಯೋಗ ಕೌಶಲ್ಯಗಳನ್ನು ಸಜ್ಜುಗೊಳಿಸುವುದರತ್ತ ಗಮನ ಹರಿಸಲಾಗಿದೆ.


ಸದಾ ವಿಕಸನಗೊಳ್ಳುತ್ತಿರುವ ನೈವಿಮಕ ಅಗತ್ಯಗಳಲ್ಲಿ, ಉದ್ಯೋಗಿಗಳು ಸೇರಿದಂತೆ ಎಲ್ಲಾ ಪಾಲುದಾರರಿಗೆ ತಮ್ಮ ಪೂರ್ಣ ಸಾಮರ್ಥ್ಯವನ್ನು ಸಾಧಿಸಲು ನೆರವಾಗುವಂತೆ ಟಿಕೆಎಂ ತನ್ನ ಎಲ್ಲಾ ಪಾಲುದಾರರಿಗೆ 'ಜೀವಮಾನದ ಕಲಿಕೆ' ಒದಗಿಸುವಲ್ಲಿ ಮುಂಚೂಣಿಯಲ್ಲಿದೆ. ಜನರು ಟೊಯೋಟಾದ ಅತ್ಯಂತ ಪ್ರಮುಖ ಆಸ್ತಿ, ಆದ್ದರಿಂದ ಅಭಿವೃದ್ಧಿಹೊಂದಿದ ಜನರು ಕಂಪನಿಯ ತತ್ವಶಾಸ್ತ್ರದ ಒಂದು ಪ್ರಮುಖ ಅಂಶವಾಗಿದೆ. 'ಟೊಯೋಟಾ ವೇ' ಪ್ರತಿವ್ಯಕ್ತಿಯ ಕೌಶಲ್ಯಗಳನ್ನು ಹರಿತಗೊಳಿಸುವ ಮೂಲಕ ಮತ್ತು ನವೀನ ಚಿಂತನೆಗಳೆರಡನ್ನೂ ಪ್ರೋತ್ಸಾಹಿಸುವ ಮೂಲಕ ಸುಧಾರಣೆಯ ಅನ್ವೇಷಣೆಯನ್ನು ಮುಂದುವರಿಸುವುದರತ್ತ ಗಮನ ಹರಿಸುತ್ತದೆ.


ಈ ಸಂದರ್ಭದಲ್ಲಿ ಮಾತನಾಡಿದ ಎಟಿಎಂಇಸಿಇಯ ಪ್ರಾಂಶುಪಾಲ ಡಾ.ಬಸವರಾಜ್ ಎಲ್ ರವರು, ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಜತೆ ಕೈಜೋಡಿಸಿರುವುದು ಸಂತಸ ತಂದಿದೆ. ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಕೃಷ್ಟತೆಯ ಮೂಲಕ ನಮ್ಮ ವಿದ್ಯಾರ್ಥಿಗಳನ್ನು ಉತ್ತಮ ಭವಿಷ್ಯರೂಪಿಸುವ ಗುರಿ ಹೊಂದಿದ್ದೇವೆ. ಉದ್ಯಮ ಮತ್ತು ಅಕಾಡೆಮಿಗಳು ಒಟ್ಟಾಗಿ ಕೆಲಸ ಮಾಡುವ ಮತ್ತು ಆರ್ಥಿಕ ಪ್ರಗತಿಗೆ ಅಡಿಪಾಯ ಹಾಕುವಂತಹ ವಾತಾವರಣವನ್ನು ಸೃಷ್ಟಿಸುವ ಸಮಯ ಇದು. ನಾವು ಒಟ್ಟಿಗೆ, ನಿರಂತರವಾಗಿ ಕಲಿಯುವ, ಕೌಶಲ್ಯ, ಜ್ಞಾನವನ್ನು ಹಂಚಿಕೊಳ್ಳುವ ಮತ್ತು ಅಪೇಕ್ಷಿತ ಕೌಶಲ್ಯಗಳು ಮತ್ತು ಸಾಮರ್ಥ್ಯಗಳೊಂದಿಗೆ ಉದ್ಯಮ-ಸಿದ್ಧ ತಂತ್ರಜ್ಞರಾಗಿ ಪರಿವರ್ತಿಸುವ ಉತ್ಸಾಹದೊಂದಿಗೆ ಯುವ ವಿದ್ಯಾರ್ಥಿಗಳ ಸಾಮರ್ಥ್ಯ ಮತ್ತು ಭವಿಷ್ಯವನ್ನು ನಾವು ಹೆಚ್ಚಿಸಬಹುದು ಎಂದರು.


"ಈ ಕೋರ್ಸ್ ಟೊಯೋಟಾದ ಕೌಶಲ್ಯ ಅಭ್ಯಾಸಗಳಿಗೆ 90 ಪ್ರತಿಶತ ಪ್ರಾಯೋಗಿಕ ಮತ್ತು ಸೈದ್ಧಾಂತಿಕ ಅಂಶಗಳಿಗೆ 10 ಪ್ರತಿಶತ ಆದ್ಯತೆಯನ್ನು ಒಳಗೊಂಡಿದೆ. ಈ ಕಾರ್ಯಕ್ರಮದಡಿ ಒಟ್ಟು 180 ಗಂಟೆಗಳ ಪಠ್ಯಕ್ರಮ ವನ್ನು ರೂಪಿಸಲಾಗಿದ್ದು, ಅದರಲ್ಲಿ 110 ಗಂಟೆಗಳನ್ನು ಟಿಕೆಎಂ ನ ಫ್ಯಾಕ್ಟರಿ ಆವರಣದಲ್ಲಿ ಮತ್ತು 70 ಗಂಟೆಗಳು ಕಾಲೇಜಿನಲ್ಲಿ ಪ್ರಸಾರಮಾಡಲಾಗುವುದು" ಎಂದು ಡಾ.ಬಸವರಾಜ್ ತಿಳಿಸಿದರು.


ಸುರಕ್ಷತೆ, ಪರಿಸರ ನಿರ್ವಹಣಾ ವ್ಯವಸ್ಥೆ, ಒಟ್ಟು ಗುಣಮಟ್ಟ ನಿರ್ವಹಣೆ, ಪೂರೈಕೆ ಸರಪಳಿ ನಿರ್ವಹಣೆ, ಆಟೋಮೊಬೈಲ್ ವೆಲ್ಡಿಂಗ್, ಕಾರ್ ಪೇಂಟಿಂಗ್, ಮೆಕಾಟ್ರೊನಿಕ್ಸ್, ಆಟೋಮೇಷನ್ ಮತ್ತು ರೊಬೊಟಿಕ್ಸ್ ಇತ್ಯಾದಿಗಳಲ್ಲಿ ತರಬೇತಿ ನೀಡಲಾಗುತ್ತದೆ.


TKM ತರಬೇತುದಾರರು ಟೊಯೋಟಾ ಮೋಟಾರ್ ಕಾರ್ಪೊರೇಷನ್ (TMC), ಜಪಾನ್ ಮತ್ತು ಏಷ್ಯಾ-ಪೆಸಿಫಿಕ್ ಗ್ಲೋಬಲ್ ಪ್ರೊಡಕ್ಷನ್ ಸೆಂಟರ್ (AP-GPC), ಥಾಯ್ಲೆಂಡ್ ನಿಂದ ಪ್ರಮಾಣೀಕರಿಸಲ್ಪಟ್ಟಿದ್ದಾರೆ.  ಇದಲ್ಲದೆ, ಟೊಯೋಟಾ ಮಾಸ್ಟರ್ ಕ್ಲಾಸ್ ಸೀರೀಸ್ ಮತ್ತು ಸರ್ಟಿಫಿಕೇಟ್ ಕೋರ್ಸ್ ಗಳನ್ನು ಸಹ ವಿದ್ಯಾರ್ಥಿಗಳಿಗೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ತಿಳಿಸಲಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑