Tel: 7676775624 | Mail: info@yellowandred.in

Language: EN KAN

    Follow us :


ರಸ್ತೆ ಅಪಘಾತ ತಗ್ಗಿಸಲು ತಂಡ ರಚನೆ: ಜಿಲ್ಲಾ ಪೋಲೀಸ್ ಅಧೀಕ್ಷಕ ಗಿರೀಶ್

Posted date: 24 Feb, 2021

Powered by:     Yellow and Red

ರಸ್ತೆ ಅಪಘಾತ ತಗ್ಗಿಸಲು ತಂಡ ರಚನೆ: ಜಿಲ್ಲಾ ಪೋಲೀಸ್ ಅಧೀಕ್ಷಕ ಗಿರೀಶ್

ಜಿಲ್ಲೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ರಸ್ತೆ ಅಪಘಾತಗಳನ್ನು ಕಡಿಮೆಗೊಳಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕ‌ ಗಿರೀಶ್ ಅವರು ಪೊಲೀಸ್ ಠಾಣಾವಾರು ತಂಡ ರಚಿಸಿದ್ದಾರೆ.


ಅವರು ಇಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಸ್ತೆ ಸುರಾಕ್ಷತಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಸ್ತೆಗಳಲ್ಲಿ ಇರುವ ಉಬ್ಬುಗಳು (ಹಂಪ್) ತಿರುವುಗಳು (ಕರ್ವ್) ವಾಹನ ಚಾಲಕರಿಗೆ ಗೋಚರವಾಗುವುದಿಲ್ಲ.  ರಸ್ತೆಗಳನ್ನು ಲೋಕೋಪಯೋಗಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯವರು ಜಂಟಿಯಾಗಿ ಪರಿಶೀಲಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಅಪಘಾತಗಳನ್ನು ತಡೆಯಬಹುದು ಎಂದರು.


ರಸ್ತೆ ಅಪಘಾತ ತಡೆಗಟ್ಟಲು ರಚಿಸಲಾಗಿರುವ ತಂಡದಲ್ಲಿ ಲೋಕೋಪಯೋಗಿ ಇಲಾಖೆ, ಪೊಲೀಸ್ ಇಲಾಖೆ, ಅವಶ್ಯಕವಿದ್ದ ಕಡೆ ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಇರುತ್ತಾರೆ. ತಂಡವು ವಾರಕೊಮ್ಮೆ ಸಭೆ ನಡೆಸಬೇಕು. ಉಪ ಪೊಲೀಸ್ ಅಧೀಕ್ಷಕರು ತಮ್ಮ ವ್ಯಾಪ್ತಿಗೆ ಬರುವ ತಂಡಗಳ ಜೊತೆ 15 ದಿನಗಳಿಗೊಮ್ಮೆ ಸಭೆ ನಡೆಸಬೇಕು. ರಸ್ತೆ ಅಪಘಾತದಲ್ಲಿ ಮೃತ ಪಡುವ ಪ್ರಕರಣಗಳನ್ನು ನ್ಯಾಯಾಲಯ ಗಂಭೀರವಾಗಿ ಪರಿಗಣಿಸುತ್ತದೆ. ಇಲಾಖೆ ಅವರು ಮುಂಜಾಗ್ರತಾ ಕ್ರಮಗಳನ್ನು ಏಕೆ ವಹಿಸಲಿಲ್ಲ ಎಂದು ಪ್ರಶ್ನಿಸುತ್ತದೆ ಎಂದರು.


ಇಲಾಖೆಗಳಿಂದ ರಸ್ತೆ ಕಾಮಗಾರಿಗಳು ನಡೆಯುತ್ತಿರುತ್ತವೆ. ಕಾಮಗಾರಿ ನಡೆಯುವ ರಸ್ತೆಗಳಿಗೆ ಬ್ಯಾರಿಕೇಡಿಂಗ್, ಸೂಚನಾ ಪಲಕ ಅಳವಡಿಕೆ ಹಾಗೂ ಪರ್ಯಾಯ ರಸ್ತೆ ವ್ಯವಸ್ಥೆ ಮಾಡುವಾಗ ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ. ಇಲಾಖೆಗಳ ಸಮನ್ವಯ ಮುಖ್ಯ ಎಂದರು.


ಹೆಲ್ಮೆಟ್ ಧರಿಸದೇ ವಾಹನ ಚಾಲನೆ ಮಾಡುವುದು, ವಾಹನ‌ ನಿಲುಗಡೆ ಇಲ್ಲದ ಪ್ರದೇಶಗಳಲ್ಲಿ ವಾಹನ ನಿಲುಗಡೆ ಮಾಡುವುದು, ಮದ್ಯಪಾನ ಸೇವನೆ ಮಾಡಿ ವಾಹನ ಚಾಲನೆ ಮಾಡುವುದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದರು.


ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ತಳ್ಳುವ ಗಾಡಿಯಲ್ಲಿ ಹೋಟೆಲ್‌ ನಡೆಸುತ್ತಿದ್ದಾರೆ. ಸಾರ್ವಜನಿಕರು ಆಹಾರ ಸೇವನೆ ಮಾಡಲು ರಸ್ತೆಯಲ್ಲೇ ವಾಹನ ನಿಲುಗಡೆ ಮಾಡುತ್ತಾರೆ.ಜನಸಂದಣಿ ಉಂಟು ಮಾಡುತ್ತಾರೆ. ಇದರಿಂದ ವಾಹನ ಚಾಲನೆಗೆ ತೊಂದರೆಯಾಗಿ ಅಪಘಾತ ಉಂಟಾಗುವ ಸಂಭವವಿರುತ್ತದೆ. ಇವುಗಳನ್ನು ಪರಿಶೀಲಿಸಿ ತೆರವುಗೊಳಿಸಿ ಎಂದರು.


ಸಭೆಯಲ್ಲಿ ಉಪ ಪೊಲೀಸ್ ಅಧೀಕ್ಷಕ ಕೆ ಎನ್ ರಮೇಶ್, ಮೋಹನ್ ಕುಮಾರ್, ಓಂ ಪ್ರಕಾಶ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ವಿಜಯ್ ಗೋಪಾಲ್,  ಗಂಗಾಧರಯ್ಯ, ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑