ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆಯಾಗಿ 35 ವರ್ಷ. ಬಿಟಿಜೆ, ಸಿಪು ಮತ್ತು ರೋಹಿತ್ ಆರೋಪ
ತಾಲ್ಲೂಕಿನ ಬಂಡೂರ ವಳಗೆರೆ ಹಳ್ಳಿ (ಬಿ ವಿ ಹಳ್ಳಿ) ಗ್ರಾಮ ಮತ್ತು ಸಂತೇಮೊಗೇನಹಳ್ಳಿ (ಎಸ್ ಎಂ ಹಳ್ಳಿ) ಗ್ರಾಮಗಳಲ್ಲಿ ಮಾರ್ಚಿ 02 ನೇ ತಾರೀಖಿನ ಮಂಗಳವಾರದಂದು ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮಂತ್ರಿ ಮಹೋದಯರು ಉದ್ಘಾಟಿಸಲಿದ್ದಾರೆ ಎಂದು ಆಹ್ವಾನ ಪತ್ರಿಕೆ ಮುದ್ರಿಸಿದ್ದಾರೆ. ಆದರೆ ಆರೋಗ್ಯ ಕೇಂದ್ರಗಳು 35 ವರ್ಷಗಳ ಹಿಂದೆ ಅಂದರೆ 1986 ರಲ್ಲೇ ಉದ್ಘಾಟನೆಯಾಗಿದ್ದು, ಈಗ ಹೊಸ ಕಟ್ಟಡ ಮಾತ್ರ ಉದ್ಘಾಟನೆ ಆಗಬೇಕಾಗಿದೆ. ಸಂಬಂಧಿಸಿದ ಇಲಾಖೆಗಳು ಆಹ್ವಾನ ಪತ್ರಿಕೆಯನ್ನು ವಾಪಸ್ ಪಡೆದು ಹೊಸ ಆಹ್ವಾನ ಪತ್ರಿಕೆ ಮುದ್ರಿಸಬೇಕು ಹಾಗೂ ಸ್ಥಳೀಯ ಮುಖಂಡರನ್ನು ಆಹ್ವಾನಿಸಬೇಕು ಎಂದು ಹಿರಿಯ ಮುತ್ಸದ್ದಿ ಬಿ ಟಿ ಜಯಮುದ್ದಪ್ಪ, ರೈತ ಮುಖಂಡರ ಸಿ ಪುಟ್ಟಸ್ವಾಮಿ ಮತ್ತು ಮೊಗಳ್ಳಿದೊಡ್ಡಿ ಗ್ರಾಮದ ರೋಹಿತ್ ಆಗ್ರಹಿಸಿದ್ದಾರೆ.
1983 ರಲ್ಲಿನ ರಾಜ್ಯ ಸರ್ಕಾರವು ರಾಜ್ಯದಾದ್ಯಂತ 59 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲು ಆದೇಶ ಹೊರಡಿಸಿತ್ತು. ಚನ್ನಪಟ್ಟಣ ತಾಲ್ಲೂಕಿನಲ್ಲಿ ಬಿವಿ ಹಳ್ಳಿ ಮತ್ತು ಹೊಂಗನೂರು ಗ್ರಾಮಕ್ಕೆ ಆರೋಗ್ಯ ಕೇಂದ್ರಗಳನ್ನು ಮಂಜೂರು ಮಾಡಲಾಗಿತ್ತು. ಅಂದಿನ ಆರೋಗ್ಯ ಮತ್ತು ಅಬಕಾರಿ ಸಚಿವರಾದ ಕೃಷ್ಣಪ್ಪ ನವರು ಉದ್ಘಾಟಿಸಿದ್ದರು. ಆಗ ಹೊಸ ಕಟ್ಟಡವೂ ಇಲ್ಲದೆ ಗ್ರಾಮ ಪಂಚಾಯತಿ ಕಛೇರಿಯಲ್ಲೇ ಆಸ್ಪತ್ರೆಯನ್ನು ತೆರೆಯಲಾಗಿತ್ತು.
ಅಂದಿನ ಸಾತನೂರು ಕ್ಷೇತ್ರದ ಶಾಸಕರಾಗಿದ್ದ ಶಿವಲಿಂಗೇಗೌಡರು ಅಧ್ಯಕ್ಷತೆ ವಹಿಸಿದ್ದರು ಎಂದು ಅವರು ದಾಖಲೆಯನ್ನು ನೀಡುವ ಮೂಲಕ ಜ್ಞಾಪಿಸಿಕೊಂಡರು.
ಕಟ್ಟಡ ಆಗುವವರೆಗೂ ಆರೋಗ್ಯ ಕೇಂದ್ರ ಮಂಜೂರು ಮಾಡುವುದು ಬೇಡ ಎಂಬುದು ಸರ್ಕಾರದ ನಿಲುವಾಗಿತ್ತು. ಅಂದು ವಾಹನ ಸೌಕರ್ಯ ತುಂಬಾ ಕಡಿಮೆ ಇದ್ದಿದ್ದರಿಂದ ರೋಗಿಗಳು ಪಟ್ಟಣ ತಲುಪಲು ಬಹಳ ಕಷ್ಟ ಪಡಬೇಕಾಗಿತ್ತು. ಇದನ್ನೆಲ್ಲಾ ಗಮನಿಸಿ ಅಂದಿನ ಶಾಸಕ ಶಿವಲಿಂಗೇಗೌಡರ ಬೆನ್ನುಬಿದ್ದು ಶೀಘ್ರವಾಗಿ ನಾನು ಉದ್ಘಾಟನೆ ಮಾಡಿಸಿದ್ದೆ. *ಅದಕ್ಕಿಂತ ಹೆಚ್ಚಾಗಿ ಮಂಗಯ್ಯ ನಿಂಗಮ್ಮ ಚಾರಿಟೇಬಲ್ ಟ್ರಸ್ಟ್ ನ ಮಂಡ್ಯ ಜಿಲ್ಲೆಯ ಬೂದನೂರು ಗ್ರಾಮದ ರುದ್ರಪ್ಪ ನವರು ಆಸ್ಪತ್ರೆಯ ಜಾಗವನ್ನು ಕೊಂಡು ದಾನ ಮಾಡಿದರು* ಅಂದಿನ ಇತಿಹಾಸವನ್ನು ತಿಳಿದುಕೊಂಡು ಹಿರಿಯರನ್ನು ಗೌರವಿಸಬೇಕಾದ್ದು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯ ಕರ್ತವ್ಯ ಎಂದು ಅಂದಿನ ಪತ್ರಿಕಾ ವರದಿಗಳು, ವಾರ್ತಾ ಇಲಾಖೆಯ ಸಚಿವರ ಪ್ರವಾಸ ಕಾರ್ಯಕ್ರಮದ ವರದಿಗಳನ್ನು ಮುಂದಿಟ್ಟರು.
ಈ ಭಾಗಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಬರಲು ಅಂದಿನ ಶಾಸಕರಾದ ಶಿವಲಿಂಗೇಗೌಡರು ಮತ್ತು ಬಿ ಟಿ ಜಯಮುದ್ದಪ್ಪ ಸೇರಿದಂತೆ ಅನೇಕರ ಹೋರಾಟ ಇದೆ. ಅದರಲ್ಲೂ ಆರೋಗ್ಯ ಕೇಂದ್ರದ ಉದ್ಘಾಟನೆ ಎಂಬುದು ಮುಗಿದ ಅಧ್ಯಾಯ. ಮತ್ತೊಮ್ಮೆ ಉದ್ಘಾಟನೆ ಎಂಬುದು ಸಹ ಅಷ್ಟೇ ಹಾಸ್ಯಾಸದ. ಹಾಗಾಗಿ ಸಂಬಂಧಿಸಿದ ಇಲಾಖೆಗಳು ಆಹ್ವಾನ ಪತ್ರಿಕೆಯನ್ನು ಸರಿಪಡಿಸಿ, ಮರುಮುದ್ರಣ ಮಾಡಬೇಕು ಎಂದು ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ಒತ್ತಾಯಿಸಿದ್ದಾರೆ.
ಸಂತೆಮೊಗೇನಹಳ್ಳಿ (ಎಸ್ಎಂ ಹಳ್ಳಿ) ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವು ಸಹ ಕಳೆದ ಮೂವತ್ತು ವರ್ಷಗಳಷ್ಟು ಹಳೆಯ ಕೇಂದ್ರವಾಗಿದೆ. ಇದನ್ನು ಉದ್ಘಾಟನೆ ಎಂದು ಮುದ್ರಿಸಿರುವುದು ಇಲಾಖೆಯ ನೆನಪಿನ ಬುತ್ತಿಗೆ ಹಿಡಿದ ಕೈಗನ್ನಡಿ. ಆಹ್ವಾನ ಪತ್ರಿಕೆಯನ್ನು ಮರುಮುದ್ರಿಸಿ ನೂತನ ಕಟ್ಟಡ ಉದ್ಘಾಟನೆ ಎಂದು ತಿದ್ದಬೇಕು ಎಂದು ಯುವ ಮುಖಂಡ ಮೊಗಳ್ಳಿದೊಡ್ಡಿ ರೋಹಿತ್ ತಿಳಿಸಿದರು.
ಈ ಸಂಬಂಧ ತಾಲ್ಲೂಕು ವೈದ್ಯಾಧಿಕಾರಿ ರಾಜು ರವರನ್ನು ಮೊಬೈಲ್ ಮೂಲಕ ಸಂಪರ್ಕಿಸಿ ಪ್ರಶ್ನಿಸಿದಾಗ ಆಹ್ವಾನ ಪತ್ರಿಕೆಯನ್ನು ಸಂಪೂರ್ಣವಾಗಿ ಅಪರ ಜಿಲ್ಲಾಧಿಕಾರಿಗಳ (ಎಡಿಸಿ) ನೇತೃತ್ವದಲ್ಲಿ ಮುದ್ರಿಸಲಾಗಿದೆ. ಇದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು