ಗ್ರಾಮೀಣ ಭಾಗದ ಆರೋಗ್ಯ ದೃಷ್ಟಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣ: ಹೆಚ್ಡಿಕೆ.
ಗ್ರಾಮೀಣ ಭಾಗದ ಜನರ ಆರೋಗ್ಯದ ಹಿತದೃಷ್ಟಿಯಿಂದ, ತಾಲ್ಲೂಕಿನಲ್ಲಿ ಸುಸಜ್ಜಿತ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪನೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಕ್ಷೇತ್ರದ ಶಾಸಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ಅವರು ತಾಲ್ಲೂಕಿನ ಎಸ್.ಎಂ.ಹಳ್ಳಿ ಹಾಗೂ ಬಿ.ವಿ.ಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿದ್ದ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉದ್ಘಾಟನಾ ಸಮಾರಂಭದಲ್ಲಿ, ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಮನುಷ್ಯನಿಗೆ ಎಷ್ಟೇ ಸಂಪತ್ತು ಇದ್ದರೂ ಆರೋಗ್ಯ ಸಂಪತ್ತು ಇಲ್ಲದಿದ್ದರೇ ಆತನ ಯಾವುದೇ ರೀತಿಯ ಸಂಪತ್ತು ವ್ಯರ್ಥವಾಗುತ್ತದೆ ಎಂದರು.
ಗ್ರಾಮಗಳಲ್ಲಿ ನಿರ್ಮಾಣವಾಗಿರುವ ಆರೋಗ್ಯ ಕೇಂದ್ರಗಳಲ್ಲಿ ನುರಿತ ವೈದ್ಯರು ಹಾಗೂ ಸಾಕಷ್ಟು ಸಿಬ್ಬಂದಿ ನಿಯೋಜನೆ ಮಾಡಲಾಗುವುದು, ಗ್ರಾಮೀಣ ಭಾಗದ ಜನತೆ ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಹಾಗೂ ಸರ್ಕಾರಿ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳು ಪಡೆದುಕೊಂಡು ಅಭಿವೃದ್ದಿಯತ್ತಾ ಸಾಗಬೇಕೆಂದು ತಿಳಿಸಿದರು.
ಬಿ.ವಿ.ಹಳ್ಳಿ ಹಾಗೂ ಇತರೆ ಭಾಗಗಳಲ್ಲಿ ಕಾಡಾನೆಗಳ ಕಾಟದಿಂದ, ಕಷ್ಟಪಟ್ಟು ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗುತ್ತಿವೆ, ಪ್ರತಿನಿತ್ಯ ಕಾಡಾನೆಗಳು ಹಿಂಡುಹಿಂಡಾಗಿ ತೋಟ-ತುಡಿಕೆಗಳ ಮೇಲೆ ದಾಳಿ ಮಾಡುತ್ತಿವೆ, ಕೊರೋನಾದಂತಹ ಸಂಕಷ್ಟದಲ್ಲಿ ಈ ರೀತಿಯಾಗಿ ಬೆಳೆದ ಬೆಳೆಗಳು ಕಾಡಾನೆಗಳಿಂದ ನಾಶವಾಗುತ್ತಿರುವುದರಿಂದ ತಲೆ ಮೇಲೆ ಆಕಾಶವೇ ಕಳಚಿ ಬಿದ್ದಂತಾಗಿದೆ, ಕಾಡಾನೆಗಳ ಹಾವಳಿಯನ್ನು ನಿಯಂತ್ರಣ ಮಾಡುವಂತೆ ಅರಣ್ಯಾಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರು ನಮಗೂ ಕಾಡಾನೆಗಳಿಗೂ ಯಾವುದೇ ಸಂಬಂಧವಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಹೀಗೆ ಮುಂದುವರೆದರೆ ರೈತರ ಗತಿ ಏನು ಎಂದು ಶಾಸಕರಲ್ಲಿ ಮನವಿ ಮಾಡಿದರು.
ಕಳೆದ ಹಲವಾರು ವರ್ಷಗಳಿಂದ ಕಾಡಾನೆಗಳ ದಾಳಿಯಿಂದ ಕೋಟ್ಯಾಂತರರೂ ಬೆಳೆ ರೈತಾಪಿವರ್ಗಕ್ಕೆ ಭಾರಿ ನಷ್ಟವಾಗಿದೆ, ಅಲ್ಲದೇ ತಮ್ಮ ಬೆಳೆನಷ್ಟದ ಪರಿಹಾರಕ್ಕೆ ಮನವಿ ಮಾಡಿದರೂ, ಕಡಿಮೆ ಮೊತ್ತದ ಹಣದ ಪರಿಹಾರ ದೊರೆತು ರೈತರಿಗೆ ಇದರಲ್ಲಿಯೂ ಬಹಳ ಅನ್ಯಾಯವಾಗಿದ್ದು, ಮುಂದಿನ ದಿನಗಳಲ್ಲಿ ಕಾಡಾನೆ ಹಾಗೂ ಇತರೆ ಪ್ರಾಣಿಗಳ ದಾಳಿಯಿಂದ ನಷ್ಟಕ್ಕೊಳಗಾದರೆ ಸೂಕ್ತ ಪರಿಹಾರ ಕೊಡಿಸಲು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುವುದಾಗಿ ಭರವಸೆ ನೀಡಿದರು.
ಈ ಭಾಗದಲ್ಲಿ ಕಾಡಾನೆಗಳು ರೈತರ ಬೆಳೆ ನಷ್ಟ ಮಾಡುತ್ತಿರುವುದರ ಬಗ್ಗೆ ನನಗೆ ಸಂಪೂರ್ಣ ಅರಿವಿದ್ದು, ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಕಾಡಿನಿಂದ ನಾಡಿಗೆ ಆನೆಗಳು ದಾಳಿ ಮಾಡದಂತೆ ಯೋಜನೆಯನ್ನು ರೂಪಿಸಿದ್ದವು, ಅದಕ್ಕಾಗಿಯೇ ಕೋಟ್ಯಾಂತರ ರೂ ಹಣವನ್ನು ಇಡಲಾಗಿದೆ, ಮುತ್ತತ್ತಿ ಆರಣ್ಯ ಪ್ರದೇಶದಲ್ಲಿ ಈ ಯೋಜನೆಯನ್ನು ಕೈಗೆತ್ತಿಕೊಳ್ಳಲ್ಲಾಗಿದ್ದು, ಸಂಬಂಧಿಸಿದ ಅರಣ್ಯಾಧಿಕಾರಿಗಳ ಜೊತೆ ಚರ್ಚೆ ಮಾಡಿ, ಕಾಡಾನೆಗಳ ಉಪಟಳಕ್ಕೆ ಸದ್ಯದಲ್ಲಿಯೇ ಮುಕ್ತಿ ನೀಡಲಾಗುವುದು ಎಂದು ರೈತರನ್ನು ಸಮಾದಾನ ಪಡಿಸಿದರು.
ಹಲವಾರು ಅಭಿವೃದ್ದಿಯ ವಿಚಾರಗಳ ಬಗ್ಗೆ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಸಮರೋಪಾದಿಯಲ್ಲಿ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದ್ದು, ನೀರಾವರಿಗೆ ಹೆಚ್ಚು ಆಧ್ಯತೆ ನೀಡಲಾಗುವುದು, ಗ್ರಾಮೀಣ ಮೂಲಭೂತ ಸೌಕರ್ಯಗಳಿಗೆ ಪ್ರಥಮ ಆದ್ಯತೆ ನೀಡಲಾಗಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಯೇ ನನ್ನ ಮೊದಲ ಕರ್ತವ್ಯ ಎಂದು ತಿಳಿಸಿದರು.
ಉದ್ಘಾಟನಾ ಸಮಾರಂಭ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ನಿರಂಜನ್, ತಾಲ್ಲೂಕು ಆರೋಗ್ಯಾಧಿಕಾರಿ ರಾಜು, ತಾಲ್ಲೂಕು ದಂಡಾಧಿಕಾರಿ ನಾಗೇಶ್ , ಕೂಡ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗುಂಡಣ್ಣ ಸಿ, ಗ್ರಾಮ ಪಂಚಾಯಿತಿ ಸದಸ್ಯರುಗಳು, ಮುಖಂಡ ಆನಂದಸ್ವಾಮಿ, ಬಿ ವಿ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಾರ್ವತಮ್ಮ, ಉಪಾಧ್ಯಕ್ಷೆ ಸವಿತ ಗ್ರಾಮ ಪಂಚಾಯಿತಿ ಸದಸ್ಯರುಗಳು, ತಾಲೂಕು ಜೆಡಿಎಸ್ ಅಧ್ಯಕ್ಷ ಜಯಮುತ್ತು, ಹಿರಿಯ ಮುಖಂಡ ಹಾಪ್ ಕಾಮ್ಸ್ ದೇವರಾಜು, ಪಿಎಲ್ ಡಿ ಅಧ್ಯಕ್ಷ ಗೊವಿಂದಳ್ಳಿ ನಾಗರಾಜು, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ. ಕುಕ್ಕೂರು ದೊಡ್ಡಿ ಜಯರಾಮು, ಹಾಪ್ ಕಾಮ್ಸ್ ನಿರ್ದೇಶಕ ರಾಜಶೇಖರ್, ಮುಖಂಡರಾದ. ಸಿಂಲಿಂ ನಾಗರಾಜು, ನಿಜಲಿಂಗೆಗೌಡ, ಕೂಡ್ಲೂರು ವೆಂಕಟೇಶ್, ಬಾನುಪ್ರಸಾದ್, ಗಿರೀಶ್ ಬಾಬು, ಹಾಗೂ ಹಲವಾರು ಮಂದಿ ಜೆ.ಡಿ.ಎಸ್ ಮುಖಂಡರು , ಸೇರಿದಂತೆ ಮುಂತಾದವರು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು