ರೈತ ವಿರೋಧಿ ಕಾಯ್ದೆ ರೂಪಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಲ್ನಡಿಗೆ
ಕೇಂದ್ರ ಸರ್ಕಾರ ರೂಪಿಸಿರುವ ರೈತ ವಿರೋಧಿ ಕಾಯ್ದೆಗಳನ್ನು, ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಕಳೆದ ಎರಡು ತಿಂಗಳಿನಿಂದ ನಡೆಯುತ್ತಿದ್ದು, ಈಗಲೂ ಮುಂದುವರೆದಿದೆ. ಇದನ್ನು ಬೆಂಬಲಿಸುವ ಸಲುವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳನ್ನೂ ಕಾಲ್ನಡಿಗೆಯ ಮೂಲಕ ಸುತ್ತುತ್ತಿರುವ ಬಾಗಲಕೋಟೆ ಯುವ ರೈತ ನಾಗರಾಜು ರವರು ಇಂದು ಚನ್ನಪಟ್ಟಣಕ್ಕೆ ಆಗಮಿಸಿದರು.
ಮೊದಲಿಗೆ ಮಹದೇಶ್ವರ ಬೆಟ್ಟದಲ್ಲಿ ತಮ್ಮ ಪಾದಯಾತ್ರೆ ಆರಂಭಿಸಿದ ನಾಗರಾಜುರವರು ಕನಕಪುರದ ಮೂಲಕ ನಿನ್ನೆ ರಾಮನರಕ್ಕೆ ಬಂದಿದ್ದು, ಇಂದು ಬೆಳಿಗ್ಗೆ ಚನ್ನಪಟ್ಟಣಕ್ಕೆ ಆಗಮಿಸಿ ದರು.
ಇಲ್ಲಿನ ಷೇರು ಹೋಟೆಲ್ ಸರ್ಕಲ್ ಬಳಿ ಬರುತ್ತಿದ್ದಂತೆ ಕರ್ನಾಟಕ ರಾಜ್ಯ ರೈತ ಸಂಘದ ವಿಭಾಗೀಯ ಅಧ್ಯಕ್ಷ ಎಂ ರಾಮುರವರು ಸ್ವಾಗತಿಸಿದರು.
ನಂತರ ನಗರದಲ್ಲಿರುವ ರೈತ ಸಂಘದ ಕಛೇರಿಗೆ ಆಗಮಿಸಿದ ಅವರು ಸ್ವಲ್ಪ ಸಮಯ ವಿಶ್ರಮಿಸಿದರು. ಆ ಸಮಯದಲ್ಲಿ ನಾಗ ರಾಜುರವರನ್ನು ಮಾತಿಗೆಳೆ ದಾಗ ಅವರು ಉತ್ತರಿಸಿ, ಈಗಾಗಲೇ ರೈತರು ಹಲ ವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ವೈಜ್ಞಾನಿಕ ಬೆಲೆ ಸೇರಿದಂತೆ ಯಾವುದರಲ್ಲೂ ಆತನಿಗೆ ಸ್ವಯಂ ನಿರ್ಧಾರ ಸಾಧ್ಯವಾಗಿಲ್ಲ. ಇಂತಹ ಸಮಯದಲ್ಲಿ ಕೇಂದ್ರ ಸರ್ಕಾರವು ರೈತರಿಗೆ ಮರಣ ಶಾಸನ ತರುವಂತಹ ಕಾಯ್ದೆಗಳನ್ನು ರೂಪಿಸಿದೆ. ಅದನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಬೃಹತ್ ಹೋರಾಟ ಮಾಡುತ್ತಿದ್ದಾರೆ. ಅವರಿಗೆ ಬೆಂಬಲ ನೀಡಲು ಹಾಗೂ ನಮ್ಮ ರೈತರಿಗೆ ಅರಿವು ಮೂಡಿಸಲು ರಾಜ್ಯದಾ ದ್ಯಂತ ಕಾಲ್ನಡಿಗೆ ಯಾತ್ರೆ ಹಮ್ಮಿಕೊಂಡಿದ್ದೇನೆ ಎಂದರು.
ಈ ಯಾತ್ರೆಯ ಮೂಲ ಉದ್ದಿಶ್ಯ, ರೈತ ಸಮುದಾ ಯದಲ್ಲಿ ಜಾಗೃತಿಯನ್ನು ಮೂಡಿಸುವುದಾಗಿದೆ. ರೈತರು ಕತ್ತಲೆಯಲ್ಲಿಯೇ ಉಳಿದುಬಿಟ್ಟರೆ, ಬೆಳಕಿನಲ್ಲಿರುವ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಈ ಸಮುದಾಯವನ್ನು ಹುರಿದು ಮುಕ್ಕಿ ಬಿಡುವ ಅಪಾಯವಿದೆ. ಇದರಿಂದ ಜಾಗೃತಿ ಗೊಳಿಸಲು ಇದೊಂದು ಸಣ್ಣ ಪ್ರಯತ್ನ ಎಂದು ಅವರು ಹೇಳಿದರು.
ನಂತರ ಅವರು ಮದ್ದೂರು ಮಾರ್ಗವಾಗಿ ತಮ್ಮ ಕಾಲ್ನಡಿಗೆ ಯಾತ್ರೆ ಯನ್ನು ಮುಂದುವರೆಸು ವುದಾಗಿ ತಿಳಿಸಿ, ಇಲ್ಲಿಂದ ನಿರ್ಗಮಿಸಿದರು. ಸಂದರ್ಭ ದಲ್ಲಿ ರೈತ ಪ್ರಮುಖರು ಬೀಳ್ಕೊಟ್ಟರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು